ಈ ದಿನದ ವಿಶೇಷ: ಖಾಯಂ ಮುಖ್ಯಮಂತ್ರಿ ಚಂದ್ರು ಜನ್ಮದಿನ

ಹಿರಿಯ ನಟ, ರಂಗಕರ್ವಿು, ರಾಜಕಾರಣಿ ಡಾ. ಮುಖ್ಯಮಂತ್ರಿ ಚಂದ್ರು (ಮೂಲ ಹೆಸರು ಚಂದ್ರಶೇಖರ). ಕರ್ನಾಟಕದ ‘ಖಾಯಂ ಮುಖ್ಯಮಂತ್ರಿ’ ಎಂದೇ ಜನಪ್ರಿಯರಾಗಿರುವ ಅವರು ಇತ್ತೀಚೆಗಷ್ಟೇ 70ಕ್ಕೆ ಕಾಲಿಟ್ಟಿದ್ದಾರೆ. 

ರಂಗಭೂಮಿ ಮತ್ತು ಚಲನಚಿತ್ರಗಳಲ್ಲಿ ಪ್ರಸಿದ್ಧರಾಗಿದ್ದಾರೆ. ಇವರ ಮೂಲ ಹೆಸರು ಚಂದ್ರಶೇಖರ್. ರಾಜಕೀಯದಲ್ಲೂ ಗಣನೀಯ ಹೆಸರಾಗಿದ್ದಾರೆ.

ಚಂದ್ರು ಅವರು ಹುಟ್ಟಿದ್ದು ಆಗಸ್ಟ್ 28,1953 ರಂದು ನೆಲಮಂಗಲ ತಾಲೂಕಿನ ಹೊನ್ನಸಂದ್ರದಲ್ಲಿ. ತಂದೆ ಎನ್.ನರಸಿಂಹಯ್ಯ, ತಾಯಿ ತಿಮ್ಮಮ್ಮ.. ಚಂದ್ರು ಮೂಲ ಹೆಸರು ಚಂದ್ರಶೇಖರ್. ಮನೆಯಲ್ಲಿ ಬಡತನ ಜೊತೆಗೆ ಮಗ ತುಂಬಾ ತುಂಟ. ಹೀಗಾಗಿ ತಂದೆ ತಾಯಂದಿರು ಮಗನನ್ನು ಸಿದ್ಧಗಂಗಾ ಮಠಕ್ಕೆ ಸೇರಿಸಿದರು. ಮುಂದೆ ಅವರು ಬಿಎಸ್ಸಿ ಓದಿದರು.

ಚಂದ್ರು ಅವರ ವೃತ್ತಿಬದುಕಿಗೆ ತಿರುವು ನೀಡಿದ್ದು ‘ಮುಖ್ಯಮಂತ್ರಿ’ ನಾಟಕ. ಈ ನಾಟಕದಲ್ಲಿನ ಮುಖ್ಯಮಂತ್ರಿ ಪಾತ್ರ ಅವರಿಗೆ ಅದೆಷ್ಟು ಜನಪ್ರಿಯತೆ ತಂದುಕೊಟ್ಟಿತು ಎಂದರೆ ಜನ ಅವರನ್ನು ಸದಾ ‘ಮುಖ್ಯಮಂತ್ರಿ’ ಎಂದೇ ಗುರುತಿಸುತ್ತಾರೆ. ಈ ನಾಟಕದಲ್ಲಿ ಅವರು ನಟಿಸಿದ್ದೇ ಆಕಸ್ಮಿಕವಂತೆ. ‘ಮುಖ್ಯಮಂತ್ರಿ’ ನಾಟಕದ ಕುರಿತೇ ಆತ್ಮಚರಿತ್ರೆಯಲ್ಲಿ ಒಂದು ಅಧ್ಯಾಯವನ್ನು ಚಂದ್ರು ಬರೆದಿದ್ದಾರೆ. ಮುಂಚೆ ಮುಖ್ಯಮಂತ್ರಿ ಪಾತ್ರವನ್ನು ಟಿ.ಎಸ್. ಲೋಹಿತಾಶ್ವ ಮಾಡಬೇಕಿತ್ತಂತೆ. 

ಚಂದ್ರು ನಿರ್ದೇಶಿಸಬೇಕಿತ್ತಂತೆ. ಆದರೆ, ಅನಾರೋಗ್ಯದಿಂದಾಗಿ ಲೋಹಿತಾಶ್ವ ಅವರಿಗೆ ನಟಿಸುವುದಕ್ಕೆ ಸಾಧ್ಯವಾಗದಿದ್ದರಿಂದ, ಅನಿವಾರ್ಯವಾಗಿ ಮುಖ್ಯಮಂತ್ರಿ ಪಾತ್ರವನ್ನು ಮಾಡುವುದಕ್ಕೆ ಚಂದ್ರು ಒಪ್ಪಬೇಕಾಯಿತಂತೆ.

ಮುಖ್ಯಮಂತ್ರಿ ಚಂದ್ರು ಕಳೆದ 44 ವರ್ಷಗಳಿಂದ ನೇಮಕಗೊಳ್ಳದ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಿದ್ದಾರೆ. ‘ಮುಖ್ಯಮಂತ್ರಿ’ ಹೆಸರಿನ ನಾಟಕದಲ್ಲಿ ಅವರು ಮುಖ್ಯಮಂತ್ರಿ ಪಾತ್ರವನ್ನು ನಿರ್ವಹಿಸಿದ್ದಾರೆ.

ಚಂದ್ರು ಅವರಿಗೆ ಆಕಸ್ಮಿಕವಾಗಿ ಬಂದ ಈ ಪಾತ್ರದ ಖ್ಯಾತಿ ಮತ್ತು ರಾಜಕೀಯ ಅದೃಷ್ಟವನ್ನು ತಂದುಕೊಟ್ಟಿದೆ. ಇದುವರೆಗೆ 800 ಕ್ಕೂ ಬಾರಿ ಪ್ರದರ್ಶನಗೊಂಡಿರುವ ಈ ನಾಟಕವನ್ನು ಆರ್‌ ಗುಂಡೂರಾವ್‌ನಿಂದ ಹಿಡಿದು ಸಿದ್ದರಾಮಯ್ಯವರೆಗೆ 14 ಮುಖ್ಯಮಂತ್ರಿಗಳು ನೋಡಿದ್ದಾರೆ.

ರಂಗಭೂಮಿಯ ಸ್ನೇಹಿತರಿಂದ ಉತ್ತೇಜಿತರಾಗಿ 1975ರಲ್ಲಿ ‘ತಾಯಿ’ ನಾಟಕದಲ್ಲಿ ಸಮುದಾಯದ ಪ್ರಸನ್ನರು ನೀಡಿದ ಪಾತ್ರದಿಂದ ಚಂದ್ರು ಅಪಾರ ಯಶಸ್ಸು ಪಡೆದರು. ಮುಖ್ಯಮಂತ್ರಿ ನಾಟಕದಲ್ಲಿ ಅಭಿನಯದಿಂದ ಬಂದ ಪ್ರಸಿದ್ಧಿ ಜೊತೆಗೆ ‘ಮುಖ್ಯಮಂತ್ರಿ ಚಂದ್ರು’ ಎಂಬ ಖಾಯಂ ಹೆಸರು ಬಂದದ್ದು ಈಗ ಇತಿಹಾಸ. 

ಅವರು ಬಿ.ವಿ. ರಾಜಾರಾಂ ಜೊತೆ ಸೇರಿ ನಿರ್ದೇಶಿಸಿದ ನಾಟಕ ಅಚಲಾಯತನ. ನಂತರ ಹಲವಾರು ನಾಟಕಗಳ ನಿರ್ದೇಶನ ಮಾಡಿದ ಚಂದ್ರು ಅವರ ಮೋಡಗಳು, ಮೂಕಿ ಟಾಕಿ, ಎಲ್ಲಾರು ಮಾಡುವುದು. ಗರ್ಭಗುಡಿ, ಕತ್ತಲೆ ದಾರಿದೂರ, ಕಾಲಿಗುಲ, ಭರತಪ್ಪನ ಸೊಂಟಕ್ಕೆ ಗಂಟೆ, ಕೇಳು ಜನಮೇಜಯ, ಕಂಬಳಿಸೇವೆ, ಹೋಂ ರೂಲು ಮುಂತಾದುವು ಜನಪ್ರಿಯವೆನಿಸಿದವು. 

ಮುಖ್ಯಮಂತ್ರಿ, ತಾಯಿ, ಕತ್ತಲೆ ದಾರಿದೂರ, ಘಾಸಿರಾಂ ಕೊತ್ವಾಲ್‌, ಕಾಲಿಗುಲ, ನಮ್ಮೊಳಗೊಬ್ಬ ನಾಜೂಕಯ್ಯ, ಆಸ್ಫೋಟ ಮುಂತಾದ ನಾಟಕಗಳ ಪ್ರಮುಖ ಪಾತ್ರಧಾರಿಯಾಗಿದ್ದ ಚಂದ್ರು ಅವರನ್ನು ಮುಂದೆ ಚಿತ್ರರಂಗ ತನ್ನವರನ್ನಾಗಿಸಿಕೊಂಡಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!