ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರ, (ಸೆ.03): ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಹತ್ವದ ಮೂರನೆಯ ಸಭೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ. ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯಲು ಕ್ರಮವಹಿಸಿರುವುದು ಸ್ವಾಗತಾರ್ಹ. ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕು ಶುರುವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ನಮ್ಮ ನೆಚ್ಚಿನ ನಾಯಕರಾದ ಶ್ರೀ ರಾಹುಲ್‌ ಗಾಂಧಿಯವರ ಕ್ರಿಯಾತ್ಮಕ ಸಲಹೆಗಳೂ ವಿರೋಧಪಕ್ಷಗಳ ಸಂಘಟನೆಯ ಪ್ರಯತ್ನಕ್ಕೆ ಬಲ ತುಂಬಿದೆ. ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನಿಂದಾಗಿ ಕೇಂದ್ರದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರ ಭೀತಿಗೊಳಗಾಗಿರುವುದು ಅದರ ಇತ್ತೀಚಿನ ನಡವಳಿಕೆಯಿಂದ ಸ್ಪಷ್ಟವಾಗಿದೆ. 

ಕೇಂದ್ರ ಸರ್ಕಾರದ  ಜನ ವಿರೋಧಿ ನಿಲುವು-ನಿರ್ಧಾರಗಳು, ವಂಚಕ ಉದ್ಯಮಪತಿಗಳೊಂದಿಗೆ ಸೇರಿ  ನಡೆಸುತ್ತಿರುವ ಲೂಟಿ, ಮೈತ್ರಿಕೂಟವು ಎತ್ತುತ್ತಿರುವ ಪ್ರಶ್ನೆಗಳ ಬಗ್ಗೆ ಬಿಜೆಪಿಯ ನಾಯಕರ ಬಳಿ ಉತ್ತರವಿಲ್ಲ. ತಮ್ಮ ಉದ್ಯಮಪತಿ ಗೆಳೆಯ ಅದಾನಿ ಮತ್ತವರ ಸಂಸ್ಥೆಯ ವಿರುದ್ಧದ ಅಕ್ರಮಗಳ ಬಗ್ಗೆ ಜಾಗತಿಕವಾಗಿ ಆಪಾದನೆಗಳು ಕೇಳಿಬರುತ್ತಿದ್ದರೂ ಮೋದಿಯವರು ತಾವೇ ಮುಂದಾಗಿ ಅದಾನಿ ರಕ್ಷಣೆಗೆ ನಿಂತಿದ್ದಾರೆ. 

ಅದಾನಿ ಸಂಸ್ಥೆಯ ಅಕ್ರಮಗಳ ತನಿಖೆಗೆ ಜಂಟಿ ಸದನ ಸಮಿತಿ ಮಾಡಬೇಕು ಎನ್ನುವ ವಿಪಕ್ಷಗಳ ಆಗ್ರಹಕ್ಕೆ ಜಾಣಕಿವುಡಾಗಿದ್ದಾರೆ. ಉದ್ಯಮಪತಿಗಳೊಂದಿಗಿನ ತಮ್ಮ ಅಪವಿತ್ರ ಮೈತ್ರಿ ಪುರಾವೆಸಹಿತ ಹೊರಬೀಳುವ ಭಯ ಮೋದಿಯವರನ್ನು ಕಾಡುತ್ತಿದೆ.

ದೇಶದ ಜನರನ್ನು ಕಾಡುತ್ತಿರುವ ಬೆಲೆ ಏರಿಕೆ, ನಿರುದ್ಯೋಗ, ಸಾಲದ ಮೇಲಿನ ಬಡ್ಡಿದರದ ಹೆಚ್ಚಳ, ಹೆಚ್ಚುತ್ತಿರುವ ಜನಾಂಗೀಯ ದ್ವೇಷ, ಹಿಂಸಾಚಾರ, ಪ್ರಕೃತಿ ವಿಕೋಪ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಹಾರ ಹುಡುಕಲಾಗದ ‘ಮೋದಿ & ಕಂಪೆನಿ’ ತಮ್ಮ ಹುಳುಕು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ವಿಫಲಯತ್ನಗಳಿಗೆ ಕೈಹಾಕಿದೆ.

ಅವಸರದಲ್ಲಿ ಕರೆಯಲಾದ ಸಂಸತ್ ನ ವಿಶೇಷ ಅಧಿವೇಶನ, ಒಂದೇ ದೇಶ, ಒಂದೇ ಚುನಾವಣೆ’ಯ ಬಗ್ಗೆ ಅನವಶ್ಯಕ ಚರ್ಚೆಯ ಮೂಲಕ ಜ್ವಲಂತ ಸಮಸ್ಯೆಗಳನ್ನು ಜನರ ಕಣ್ಣುಗಳಿಂದ ಮರೆಮಾಚುವ ಹತಾಶ ಕೆಲಸಕ್ಕೆ ನರೇಂದ್ರ ಮೋದಿ ಮುಂದಾಗಿದ್ದಾರೆ. 

ನಮ್ಮ ಹೆಮ್ಮೆಯ ಇಸ್ರೋದ ಶ್ರೇಷ್ಠ ವಿಜ್ಞಾನಿಗಳ ಸಾಧನೆಯನ್ನು ತನ್ನ ಪಕ್ಷದ ಸಾಧನೆ ಎಂದು ಬಿಂಬಿಸಿಕೊಳ್ಳುವಷ್ಟು ಸಣ್ಣತನಕ್ಕೆ ದೇಶದ ಪ್ರಧಾನಿ ಇಳಿದಿರುವುದು ವಿಷಾದನೀಯ ಮಾತ್ರವಲ್ಲ ಖಂಡನೀಯ ಕೂಡಾ ಆಗಿದೆ. ಸೌರಯಾನದ ಯಶಸ್ಸುಗಳಿಗೆ ನಮ್ಮ ವಿಜ್ಞಾನಿಗಳಷ್ಟೇ ಅರ್ಹರು.

ಜಿ20 ಸಭೆಯ ಆಯೋಜನೆಯನ್ನೇ ತನ್ನ ಗೆಲುವು ಎಂದು ತೋರಿಸಿಕೊಳ್ಳುವ ಸಾಧನಾ ದಾರಿದ್ರ್ಯ ‘ಮೋದಿ & ಕಂಪೆನಿ’ಗೆ ಬಂದಿದೆ. ಚುನಾವಣೆ ಹೊಸ್ತಿಲಲ್ಲಿರುವಾಗ ‘ಏಕರೂಪ ನಾಗರಿಕ ಸಂಹಿತೆ’, ‘ಜನಸಂಖ್ಯಾ ನಿಯಂತ್ರಣ ಮಸೂದೆ’ ಮುಂತಾದವುಗಳ ಕುರಿತು ತನ್ನ ಸಂಘ ಪರಿವಾರದ ಮೂಲಕ ಹಿಂಬಾಗಿಲಿನ ಚರ್ಚೆಗಳಿಗೆ ಚಾಲನೆ ನೀಡಿದೆ. 

ಇಸ್ರೋ ಸಾಧನೆಯ ಬಗ್ಗೆ ದೇಶ ಸದಾ ಹೆಮ್ಮೆ ಪಡುತ್ತದೆ. ಆದರೆ, ಈಗ ನಿಮ್ಮ ಸಾಧನೆ ಏನೆಂದು ಹೇಳಿ? ಇನ್ನು ‘ಮನ್‌ ಕೀ ಬಾತ್’ ಸಾಕು ಮಾಡಿ, ‘ಕಾಮ್‌ ಕೀ ಬಾತ್‌’ ಹೇಳಿ. ಒಂಭತ್ತು ವರ್ಷ ದೇಶವನ್ನಾಳಿರುವ ನೀವು ದೇಶಕ್ಕೆ ನೀಡಿದ ಕೊಡುಗೆಯಾದರೂ ಏನು, ಮಾಡಿರುವ ಸಾಧನೆಯಾದರೂ ಏನೆಂದು ಹೇಳಿ. ನೋಟು ರದ್ದತಿ, ನಿರುದ್ಯೋಗದ ಹೆಚ್ಚಳ, ಉದ್ಯಮಿಗಳ ವಂಚನೆಗೆ ನೆರವು, ಕೋಮುದ್ವೇಷ ಮತ್ತು ಜನಾಂಗೀಯ ಹಿಂಸಾಚಾರಗಳಿಗೆ ಕುಮ್ಮಕ್ಕು, ಶತ್ರು ದೇಶ ನಮ್ಮ ನೆಲವನ್ನು ಆಕ್ರಮಿಸುತ್ತಿದ್ದರೂ ಬಾಯಿ ಬಿಡಲಾರದ ಹೇಡಿತನ- ಯಾವುದು ನಿಮ್ಮ ಸಾಧನೆ ಹೇಳಿ ಎಂದು‌ ಪ್ರಶ್ನಿಸಿದ್ದಾರೆ.

ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ ಖಾಲಿ ಮಾಡುವುದು ಇವೆಲ್ಲಾ ಯಾರ ಗುಣಗಳು ಎನ್ನುವುದನ್ನು ದೇಶದ ಜನತೆ ಈ ಒಂಬತ್ತು ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದಾರೆ. ಇನ್ನು ನಿಮ್ಮ ಈ ಆಟಗಳು ನಡೆಯವುದಿಲ್ಲ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ. ವಿಜಯೇಂದ್ರ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ

[ccc_my_favorite_select_button post_id="120922"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]