ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ: ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.04):  ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ ಅಂಗವಾಗಿ  ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

ತಂತ್ರಜ್ಞಾನದ  ಅಭಿವೃದ್ಧಿ ಎಲ್ಲರನ್ನು ಒಳಗೊಂಡು  ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ.  ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ  ಬೆಂಗಳೂರು ಟೆಕ್ ಸಮ್ಮಿಟ್  ಸಾಕ್ಷಿಯಾಗಿದೆ. ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವಾಖ್ಯಾನಿಸುತ್ತದೆ.  ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ ಎಂದರು.

ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆ: 80ರ ದಶಕದ ಅಂತ್ಯ  ಹಾಗೂ 90 ರ ದಶಕದಲ್ಲಿಯೇ  ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಟಿ/ಬಿಟಿ ಗೆ ಭದ್ರ ಬುನಾದಿಯನ್ನು ಹಾಕಿತ್ತು.  ನೀತಿ ನಿರೂಪಣೆ,  ತಂತ್ರಜ್ಞಾನ  ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊತ್ತಮೊದಲ ಐಟಿ ನೀತಿಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ 1992 ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಸರ್ಕಾರ ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆಯನ್ನು ತಂದುಕೊಟ್ಟಿದ್ದು,  ಆಡಳಿತದಲ್ಲಿ ಸುಸ್ಥಿರತೆ ತರಲು ಹಾಗೂ ದೀರ್ಘಾವಧಿ ಹೂಡಿಕೆಗಳನ್ನು  ಕೈಗೊಳ್ಳಲು  ಶ್ರಮಿಸಿದೆ ಎಂದರು.

ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಸಮರ್ಥ: ಬೆಂಗಳೂರು ಐಟಿ ರಾಜಧಾನಿಯಾಗಿದ್ದು  ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದೆ.  ಬೆಂಗಳೂರು ಐಟಿ/ಬಿಟಿ ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು , ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಎಲ್ಲಾ ಸಾಮರ್ಥ್ಯವನ್ನು ಹೊಂದಿದ್ದು ನಮ್ಮ ಸರ್ಕಾರ  ಈ ಗುರಿಯನ್ನು ಸಾಧಿಸಲು ಹಿಂದೆ ಬೀಳುವುದಿಲ್ಲ ಎಂದರು. ನಾವೀನ್ಯತಾ ವಲಯಗಳು ಬೆಂಗಳೂರಿನಲ್ಲಿ ನೆಲೆಸಿರುವುದು  ಅತ್ಯಂತ ಸೂಕ್ತವಾಗಿದೆ  ಐಒಟಿ,  ಕೃತಕ ಬುದ್ದಿಮತ್ತೆ , ಕ್ವಾಂಟಮ್ ಕಂಪ್ಯೂಟಿಂಗ್ ಮುಂತಾದವುಗಳಲ್ಲಿಯೂ ಮುಂಚೂಣಿಯಲ್ಲಿದೆ.  ಜಾಗತಿಕ ಹೂಡಿಕೆ ಹಾಗೂ ಪ್ರತಿಭೆಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಇದು ಸಹಾಯಕವಾಗಿದೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉತ್ಕೃಷ್ಟತಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉದ್ಯಮ  ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಕೌಶಲ್ಯ ಮಂಡಳಿ ರಚನೆ: ಉದ್ಯಮಶೀಲತೆ ಹಾಗೂ ಶಿಕ್ಷಣವನ್ನು ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ರೂಪಸಿ ಭವಿಷ್ಯದ  ಬೇಡಿಕೆಗಳನ್ನು ಪರಿಣಾಮಕಾರಿಯಾಗಿ  ಪೂರೈಸುವಂತೆ ಮಾಡಲಾಗಿದೆ. ಕೌಶಲಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ರಚಿಸಿದ ಮೊದಲ ರಾಜ್ಯ ಕರ್ನಾಟಕ. ಸಂಬಂಧಪಟ್ಟ  ಎಲ್ಲಾ ಪಾಲುದಾರರ ಸಹಯೋಗದೊಂದಿದೆ ಕೌಶಲ್ಯ ಮಂಡಳಿ ರಚನೆಯತ್ತಲೂ ನಮ್ಮ ರಾಜ್ಯ ಕಾರ್ಯನಿರ್ವಹಿಸುತ್ತಿದೆ. ಉದ್ಯಮ  ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಲಿದೆ ಎಂದರು. ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದ ಸಹಯೋಗದಲ್ಲಿ ಭವಿಷ್ಯಕ್ಕೆ ಸಿದ್ದರಾಗಿರುವ ಕಾರ್ಯಪಡೆಯನ್ನು ಸಿದ್ಧಪಡಿಸುವಲ್ಲಿ ನೆರವಾಗಲಿದೆ. ಜಾಗತಿಕ ತಾಪಮಾನ, ಹಾವಾಮಾನ ಬದಲಾವಣೆ, ಸೈಬರ್ ಸೆಕ್ಯೂರಿಟಿ ಮುಂತಾದ  ಜಾಗತಿಕ ಸಮಸ್ಯೆಗಳನ್ನು ಎದುರಿಸಲು ನಮ್ಮ ಶಕ್ತಿಯನ್ನು ಬಳಸಲು ನಾವು ಬದ್ಧರಾಗಿದ್ದೇವೆ ಎಂದರು.

ನಾವೀನ್ಯತಾ ವಲಯದಲ್ಲಿ ಸ್ಟಾರ್ಟ್ ಅಪ್ ಹಾಗೂ ಯುವ ಸಂಸ್ಥೆಗಳು ಜೀವನಾಡಿಯಾಗಿವೆ. ಈ ವಲಯದ ಬೆಳವಣಿಗೆಗೆ  ಅಗತ್ಯವಿರುವ  ಅನುದಾನ ಹಾಗೂ ನೆರವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ.  ತಂತ್ರಜ್ಞಾನ ನಾಯಕತ್ವದಲ್ಲಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಿ, ನಾವೀನ್ಯತೆ ಹಾಗೂ ಸುಸ್ಥಿರ ಐಟಿ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಗುರಿ. ಈ ಕುರಿತಂತೆ ಸಲಹೆ ಹಾಗೂ ಸಂವಾದಗಳನ್ನು ಕೈಗೊಳ್ಳಲು ಕರ್ನಾಟಕಕ್ಕಿಂತಲೂ ಉತ್ತಮವಾದ ರಾಜ್ಯವಿಲ್ಲ ಎಂದರು.

ಮೂಲಸೌಕರ್ಯ ಅಭಿವೃದ್ಧಿ: ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯ ಸುಧಾರಣೆ ಹಾಗೂ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಲಾಗುವುದು. ಮೆಟ್ರೋ ಸಂಪರ್ಕ ಜಾಲವನ್ನು  ಶೀಘ್ರವಾಗಿ ವಿಸ್ತರಿಸಲಾಗುತ್ತಿದ್ದು,  ವಿಮಾನನಿಲ್ದಾಣಕ್ಕೆ  ಮೆಟ್ರೋ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ದೇವನಹಳ್ಳಿ ಪ್ರದೇಶದಲ್ಲಿ ತೈವಾನ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಫಾಕ್ಸ್ಕಾನ್ ಸದ್ಯದಲ್ಲಿಯೇ ತನ್ನ ಉತ್ಪಾದನಾ ಘಟಕವನ್ನು ತೆರೆಯುವುದಾಗಿ ಘೋಷಿಸಿದೆ. ಆನೇಕಲ್, ದೊಡ್ಡಬಳ್ಳಾಪುರ ಮತ್ತಿತತರ ನಗರಗಳು ಹೂಡಿಕೆಯ ವಿಸ್ತರಣೆಗೆ ಅವಕಾಶಗಳನ್ನು ಹೊಂದಿದ್ದು ಬೆಂಗಳೂರು ನಗರಕ್ಕೆ ಹತ್ತಿರವಿರುವುದರಿಂದ ಪ್ರಯೋಜನಕಾರಿಯಾಗಿದೆ ಎಂದರು. ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಈಗಾಗಲೇ ವಿವಿಧ ಸಂಸ್ಥೆಗಳು ಆಸಕ್ತಿ ಹೊಂದಿವೆ.  ಇದಕ್ಕಾಗಿ ಈಗಾಗಲೇ ಇರುವ ಹೆದ್ದಾರಿಗಳ ಸುಧಾರಣೆ ಹಾಗೂ ಹೊಸ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!