ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ: ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.04):  ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಬೆಂಗಳೂರು ಟೆಕ್ ಸಮ್ಮಿಟ್ ಅಂಗವಾಗಿ  ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

ತಂತ್ರಜ್ಞಾನದ  ಅಭಿವೃದ್ಧಿ ಎಲ್ಲರನ್ನು ಒಳಗೊಂಡು  ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ.  ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ  ಬೆಂಗಳೂರು ಟೆಕ್ ಸಮ್ಮಿಟ್  ಸಾಕ್ಷಿಯಾಗಿದೆ. ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವಾಖ್ಯಾನಿಸುತ್ತದೆ.  ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ ಎಂದರು.

ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆ: 80ರ ದಶಕದ ಅಂತ್ಯ  ಹಾಗೂ 90 ರ ದಶಕದಲ್ಲಿಯೇ  ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಟಿ/ಬಿಟಿ ಗೆ ಭದ್ರ ಬುನಾದಿಯನ್ನು ಹಾಕಿತ್ತು.  ನೀತಿ ನಿರೂಪಣೆ,  ತಂತ್ರಜ್ಞಾನ  ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊತ್ತಮೊದಲ ಐಟಿ ನೀತಿಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ 1992 ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಸರ್ಕಾರ ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆಯನ್ನು ತಂದುಕೊಟ್ಟಿದ್ದು,  ಆಡಳಿತದಲ್ಲಿ ಸುಸ್ಥಿರತೆ ತರಲು ಹಾಗೂ ದೀರ್ಘಾವಧಿ ಹೂಡಿಕೆಗಳನ್ನು  ಕೈಗೊಳ್ಳಲು  ಶ್ರಮಿಸಿದೆ ಎಂದರು.

ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಸಮರ್ಥ: ಬೆಂಗಳೂರು ಐಟಿ ರಾಜಧಾನಿಯಾಗಿದ್ದು  ಅಗತ್ಯ ಮೂಲಸೌಕರ್ಯಗಳನ್ನು ಹೊಂದಿದೆ.  ಬೆಂಗಳೂರು ಐಟಿ/ಬಿಟಿ ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು , ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಎಲ್ಲಾ ಸಾಮರ್ಥ್ಯವನ್ನು ಹೊಂದಿದ್ದು ನಮ್ಮ ಸರ್ಕಾರ  ಈ ಗುರಿಯನ್ನು ಸಾಧಿಸಲು ಹಿಂದೆ ಬೀಳುವುದಿಲ್ಲ ಎಂದರು. ನಾವೀನ್ಯತಾ ವಲಯಗಳು ಬೆಂಗಳೂರಿನಲ್ಲಿ ನೆಲೆಸಿರುವುದು  ಅತ್ಯಂತ ಸೂಕ್ತವಾಗಿದೆ  ಐಒಟಿ,  ಕೃತಕ ಬುದ್ದಿಮತ್ತೆ , ಕ್ವಾಂಟಮ್ ಕಂಪ್ಯೂಟಿಂಗ್ ಮುಂತಾದವುಗಳಲ್ಲಿಯೂ ಮುಂಚೂಣಿಯಲ್ಲಿದೆ.  ಜಾಗತಿಕ ಹೂಡಿಕೆ ಹಾಗೂ ಪ್ರತಿಭೆಗಳನ್ನು ಕರ್ನಾಟಕಕ್ಕೆ ಆಕರ್ಷಿಸಲು ಇದು ಸಹಾಯಕವಾಗಿದೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉತ್ಕೃಷ್ಟತಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಉದ್ಯಮ  ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಕೌಶಲ್ಯ ಮಂಡಳಿ ರಚನೆ: ಉದ್ಯಮಶೀಲತೆ ಹಾಗೂ ಶಿಕ್ಷಣವನ್ನು ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ರೂಪಸಿ ಭವಿಷ್ಯದ  ಬೇಡಿಕೆಗಳನ್ನು ಪರಿಣಾಮಕಾರಿಯಾಗಿ  ಪೂರೈಸುವಂತೆ ಮಾಡಲಾಗಿದೆ. ಕೌಶಲಾಭಿವೃದ್ಧಿಗೆ ಪ್ರತ್ಯೇಕ ಇಲಾಖೆಯನ್ನು ರಚಿಸಿದ ಮೊದಲ ರಾಜ್ಯ ಕರ್ನಾಟಕ. ಸಂಬಂಧಪಟ್ಟ  ಎಲ್ಲಾ ಪಾಲುದಾರರ ಸಹಯೋಗದೊಂದಿದೆ ಕೌಶಲ್ಯ ಮಂಡಳಿ ರಚನೆಯತ್ತಲೂ ನಮ್ಮ ರಾಜ್ಯ ಕಾರ್ಯನಿರ್ವಹಿಸುತ್ತಿದೆ. ಉದ್ಯಮ  ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಇದೊಂದು ದೊಡ್ಡ ಮೈಲಿಗಲ್ಲಾಗಲಿದೆ ಎಂದರು. ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದ ಸಹಯೋಗದಲ್ಲಿ ಭವಿಷ್ಯಕ್ಕೆ ಸಿದ್ದರಾಗಿರುವ ಕಾರ್ಯಪಡೆಯನ್ನು ಸಿದ್ಧಪಡಿಸುವಲ್ಲಿ ನೆರವಾಗಲಿದೆ. ಜಾಗತಿಕ ತಾಪಮಾನ, ಹಾವಾಮಾನ ಬದಲಾವಣೆ, ಸೈಬರ್ ಸೆಕ್ಯೂರಿಟಿ ಮುಂತಾದ  ಜಾಗತಿಕ ಸಮಸ್ಯೆಗಳನ್ನು ಎದುರಿಸಲು ನಮ್ಮ ಶಕ್ತಿಯನ್ನು ಬಳಸಲು ನಾವು ಬದ್ಧರಾಗಿದ್ದೇವೆ ಎಂದರು.

ನಾವೀನ್ಯತಾ ವಲಯದಲ್ಲಿ ಸ್ಟಾರ್ಟ್ ಅಪ್ ಹಾಗೂ ಯುವ ಸಂಸ್ಥೆಗಳು ಜೀವನಾಡಿಯಾಗಿವೆ. ಈ ವಲಯದ ಬೆಳವಣಿಗೆಗೆ  ಅಗತ್ಯವಿರುವ  ಅನುದಾನ ಹಾಗೂ ನೆರವನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ.  ತಂತ್ರಜ್ಞಾನ ನಾಯಕತ್ವದಲ್ಲಿ ರಾಷ್ಟ್ರೀಯ ಯೋಜನೆಯನ್ನು ಸಿದ್ಧಪಡಿಸಿ, ನಾವೀನ್ಯತೆ ಹಾಗೂ ಸುಸ್ಥಿರ ಐಟಿ ವಾತಾವರಣವನ್ನು ಸೃಷ್ಟಿಸುವುದು ನಮ್ಮ ಗುರಿ. ಈ ಕುರಿತಂತೆ ಸಲಹೆ ಹಾಗೂ ಸಂವಾದಗಳನ್ನು ಕೈಗೊಳ್ಳಲು ಕರ್ನಾಟಕಕ್ಕಿಂತಲೂ ಉತ್ತಮವಾದ ರಾಜ್ಯವಿಲ್ಲ ಎಂದರು.

ಮೂಲಸೌಕರ್ಯ ಅಭಿವೃದ್ಧಿ: ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯ ಸುಧಾರಣೆ ಹಾಗೂ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಲಾಗುವುದು. ಮೆಟ್ರೋ ಸಂಪರ್ಕ ಜಾಲವನ್ನು  ಶೀಘ್ರವಾಗಿ ವಿಸ್ತರಿಸಲಾಗುತ್ತಿದ್ದು,  ವಿಮಾನನಿಲ್ದಾಣಕ್ಕೆ  ಮೆಟ್ರೋ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ದೇವನಹಳ್ಳಿ ಪ್ರದೇಶದಲ್ಲಿ ತೈವಾನ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಫಾಕ್ಸ್ಕಾನ್ ಸದ್ಯದಲ್ಲಿಯೇ ತನ್ನ ಉತ್ಪಾದನಾ ಘಟಕವನ್ನು ತೆರೆಯುವುದಾಗಿ ಘೋಷಿಸಿದೆ. ಆನೇಕಲ್, ದೊಡ್ಡಬಳ್ಳಾಪುರ ಮತ್ತಿತತರ ನಗರಗಳು ಹೂಡಿಕೆಯ ವಿಸ್ತರಣೆಗೆ ಅವಕಾಶಗಳನ್ನು ಹೊಂದಿದ್ದು ಬೆಂಗಳೂರು ನಗರಕ್ಕೆ ಹತ್ತಿರವಿರುವುದರಿಂದ ಪ್ರಯೋಜನಕಾರಿಯಾಗಿದೆ ಎಂದರು. ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಈಗಾಗಲೇ ವಿವಿಧ ಸಂಸ್ಥೆಗಳು ಆಸಕ್ತಿ ಹೊಂದಿವೆ.  ಇದಕ್ಕಾಗಿ ಈಗಾಗಲೇ ಇರುವ ಹೆದ್ದಾರಿಗಳ ಸುಧಾರಣೆ ಹಾಗೂ ಹೊಸ ಹೆದ್ದಾರಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!