ದೊಡ್ಡಬಳ್ಳಾಪುರ: ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ರೈತ ಸಂಘದ ಸಭೆ / ಏಕಾಏಕಿ ಸಭೆ ಮೊಟಕುಗೊಳಿಸಿದ ತಹಶೀಲ್ದಾರ್ ವಿರುದ್ಧ ಪ್ರತಿಭಟನೆ

ದೊಡ್ಡಬಳ್ಳಾಪುರ, (ಸೆ.04): ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಉಂಟಾಗಿರುವ ಬೆಳೆನಷ್ಟ, ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಗಳಲ್ಲಿ ರೈತರು ಸೌಲಭ್ಯಗಳಿಗಾಗಿ ಅಲೆದಾಡುವಂತೆ ಆಗಿರುವುದು, ಯೂರಿಯಾ ರಸಗೊಬ್ಬರ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ತಹಶೀಲ್ದಾರ್ ವಿದ್ಯಾವಿಭಾ ರಾಠೋಡ್ ಅಧ್ಯಕ್ಷತೆಯಲ್ಲಿ  ಸೋಮವಾರ ನಡೆದ ಸಭೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ, ಮುಖಂಡರಾದ ಸತೀಶ್, ಉಮಾದೇವಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಸರ್ಕಾರಿ ಸೌಲಭ್ಯಗಳು ಕಲವೇ ಮಂದಿ ಪ್ರಭಾವಿಗಳಿಗೆ ದೊರೆಯುತ್ತಿವೆ. ಸರ್ಕಾರಿ ಸೌಲಭ್ಯಗಳ ಕುರಿತಂತೆ ಸೂಕ್ತ ಪ್ರಚಾರ ಹಾಗೂ ಪಾರದರ್ಶಕತೆ ಪಾಲಿಸುತ್ತಿಲ್ಲ. 

ತಾಲ್ಲೂಕಿನಲ್ಲಿ ಮಳೆ ಇಲ್ಲದೆ ರಾಗಿ ಮೊಳಕೆ ಬಾರದೆ ಒಣಗಿ ಹೋಗಿದೆ. ಈಗ ಮಳೆಯಾಗಿದೆ ಇರುವ ಬೆಳೆಗೆ ಹಣ ನೀಡಿದರು ಸಹ ಯೂರಿಯಾ ದೊರೆಯದಾಗಿದೆ. ಕೆಲವರು ದುಬಾರಿ ಬೆಲೆಗೆ ಯೂರಿಯಾ ಮಾರಾಟ ಮಾಡುತ್ತಿದ್ದರು ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಬಗರ್ ಹುಕ್ಕುಂ ಅಡಿಯಲ್ಲಿ ಇನ್ನು ಸಾಕಷ್ಟು ಅರ್ಜಿಗಳು ವಿತರಣೆಯಾಗದೆ ಭಾಕಿ ಉಳಿದುಕೊಂಡಿವೆ. ಈ ಹಿಂದೆ ಸಾಗುವಳಿ ಚೀಟಿ ಪಡೆದಿರುವ ರೈತರ ಭೂಮಿ ಪೋಡಿಯಾಗದೆ ಸರ್ಕಾರದ ಸೌಲಭ್ಯ ಪಡೆಯಲು ಹಾಗೂ ತಮ್ಮ ಭೂಮಿ ಇಂತಹದ್ದೇ ಕಡೆ ಬರುತ್ತದೆ ಎನ್ನುವುದು ತಿಳಿಯದೆ ರೈತರು ಭೂಮಿ ಇದ್ದೂ ಸಹ ಅಭಿವೃದ್ಧಿ ಮಾಡಲಾಗದೆ ಪೋಡಿ ಮಾಡಿಕೊಡುವಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ತಾಲ್ಲೂಕು ಕಚೇರಿಗೆ ಅಲೆದಾಡುವಂತಾಗಿದೆ. 

ಸರ್ವೇ ಇಲಾಖೆಯಲ್ಲಿನ ಈ ಅವ್ಯವಸ್ಥೆಯನ್ನು ಸರಿಪಡಿಸಬೇಕು. ನಗರದ ಕಿರಿದಾದ ಸ್ಥಳದಲ್ಲಿ ಇರುವ ಹೂ ಹರಾಜು ಸ್ಥಳವನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರ ಮಾಡಬೇಕು. ಎಪಿಎಂಸಿಯಲ್ಲಿ ಹೂವು ಮಾರಾಟಕ್ಕೆ ಅಗತ್ಯ ಇರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಹೆಗ್ಗಡಿಹಳ್ಳಿ ಗ್ರಾಮದ ರೈತ ಮಖಂಡ ಮುನಿನಾರಾಯಣಪ್ಪ ಮಾತನಾಡಿ, 15 ದಿನಗಳಿಂದ ಪ್ರತಿ ದಿನ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಗೃಹ ಬಳಕೆಯ ವಿದ್ಯತ್ ಸಹ ಕಡಿತ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಹಾಗೂ ಹೊಲಗಳಲ್ಲಿ ಕೆಲಸ ಮಾಡಿ ಬರುವ ರೈತ ಮಹಿಳೆಯರು ಸಂಜೆ ವೇಳೆ ಕತ್ತಲಿನಲ್ಲೇ ಅಡುಗೆ ಮಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು.

ಪಾಲನಜೋಗಹಳ್ಳಿ ಕೋಡಿ ನೀರು ಹರಿದು ಹೋಗುವ ರಾಜಕಾಲುವೆಯನ್ನು ಒತ್ತುವರಿ ಮಾಡಿ ನೀರಿನ ಸಹಜ ಹರಿವಿಗೆ ಅಡ್ಡಿಯಾಗುವಂತೆ ಪೈಪ್ಲೈನ್ ಹಾಕುವ ಮೂಲಕ ಬೃಹತ್ ಕಟ್ಟಡ ಕಟ್ಟಲಾಗುತ್ತಿದೆ. ಹೆದ್ದಾರಿ ಬದಿಯಲ್ಲೇ ಕಾಮಗಾರಿ ನಡೆಯುತ್ತಿದ್ದರು ಸಹ ಕಂದಾಯ ಇಲಾಖೆ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿರುವುದು ಖಂಡನೀಯ. ಇದೇ ಕೆಲಸವನ್ನು  ಸಾಮಾನ್ಯ ರೈತರು ಮಾಡಿದರೆ ಮಾತ್ರ ಅಧಿಕಾರಿಗಳು ನೋಟಿಸ್ ನೀಡುತ್ತಾರೆ. ಇವರ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಬಚ್ಚಹಳ್ಳಿ ಆರ್.ಸತೀಶ್ ಒತ್ತಾಯಿಸಿದರು.

ರೈತರ ಪ್ರಶ್ನೆಗಳಿಗೆ ಇಲಾಖಾ ಅಧಿಕಾರಿಗಳಿಂದ ಉತ್ತರ ಪಡೆದು ಸಭೆಗೆ ನೀಡಿದ ತಹಶೀಲ್ದಾರ್ ವಿದ್ಯಾವಿಭಾ ರಾಠೋಡ್, ಎಪಿಎಂಸಿ ಆವರಣದಲ್ಲಿ ಸೂಕ್ತ ಸೌಲಭ್ಯ ಕಲ್ಪಿಸಿಕೊಡುವವರೆಗೂ ಅಲ್ಲಿನ ರೈತ ಭವನವನ್ನು ರೈತರು ಬಳಸಿಕೊಳ್ಳಬಹುದು. ವ್ಯಾಪಾರಿಗಳೆಲ್ಲರು ಎಪಿಎಂಸಿ ಆವರಣಕ್ಕೆ ಬರುವಂತೆ ಸೂಚಿಸಲಾಗುವುದು. ಕೃಷಿ, ತೋಟಗಾರಿಕೆ ಇಲಾಖೆಯಲ್ಲಿನ ಸೌಲಭ್ಯಗಳ ಹಂಚಿಕೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪಾರದರ್ಶಕತೆಯನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ. ಪೋಡಿ ಸಮಸ್ಯೆ ಇಡೀ ರಾಜ್ಯದಲ್ಲಿ ಇದೆ. ಈ ಸಮಸ್ಯೆಗೆ ಸರ್ಕಾರದ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕಿದೆ. ಸ್ಥಳೀಯ ಮಟ್ಟದ ಅಧಿಕಾರಿಗಳು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ವಿದ್ಯುತ್ ಉತ್ಪಾದನೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕಡಿತ ಅನಿವಾರ್ಯವಾಗಿದೆ. ಈಗ ಮಳೆಯಾಗುತ್ತಿರುವುದರಿಂದ ಒಂದೆರಡು ದಿನಗಳಲ್ಲಿ ವಿದ್ಯುತ್ ಕಡಿತದ ಸಮಸ್ಯೆ ಪರಿಹಾರವಾಗಲಿದೆ ಎಂದರು.

ರಾಜಕಾಲುವೆ ಒತ್ತುವರಿ ಸೇರಿದಂತೆ ತಾಲ್ಲೂಕಿನ ಸರ್ಕಾರಿ ಭೂಮಿ, ಗೋಮಾಳದ ಎಲ್ಲಾ ರೀತಿಯ ಒತ್ತುವರಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಶೀಘ್ರದಲ್ಲೇ ತೆರವು ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದರು.

ಪ್ರತಿಭಟನೆ: ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸದೆ ಕುಂದು ಕೊರತೆ ಸಭೆಯನ್ನು ಅರ್ಧಕ್ಕೆ ಮೊಟುಕುಗೊಳಿಸಿ ಹೊರನಡೆದ ತಹಶೀಲ್ದಾರ್ ವಿದ್ಯಾವಿಭಾ ರಾಠೋಡ್ ಅವರ ರೈತ ವಿರೋಧಿ ಧೋರಣೆ ಖಂಡಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಧಿಕ್ಕಾರ ಕೂಗುವ ಮೂಲಕ ತಾಲ್ಲೂಕು ಕಚೇರಿ ಸಭಾಂಗಣದಲ್ಲೇ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಇಲಾಖೆಗಳಲ್ಲಿ ರೈತರ ಕೆಲಸಗಳು ಸೂಕ್ತ ರೀತಿಯಲ್ಲಿ ನಡೆಯದೇ ಇರುವುದು ಹಾಗೂ ಭ್ರಷ್ಟಾಚಾರದ ಬಗ್ಗೆ ಸಭೆ ಕರೆಯುವಂತೆ ರೈತರು ಸಲ್ಲಿಸಲಾಗಿದ್ದ ಸಭೆಗೆ ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಿ ಆಹ್ವಾನಿಸಿರುವ ತಹಶೀಲ್ದಾರ್ ಅವರೇ ತಾಳ್ಮೆಯಿಂದ ಕುಳಿತು ಸಮಸ್ಯೆಗಳನ್ನು ಆಲಿಸುವ ಕನಿಷ್ಠ ಸೌಜನ್ಯವನ್ನು ತೋರಿಸಿಲ್ಲ ಎಂದು ಆರೋಪಿಸಿದರು.

ತಹಶೀಲ್ದಾರ್ ಅವರಿಗೆ ಪ್ರಿಯವಾಗುವಂತೆ ಕೇಳುವ ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡುತ್ತ ರೈತರು ಪ್ರತಿ ನಿತ್ಯ ಕಂದಾಯ ಇಲಾಖೆಯ ಕಚೇರಿಗಳಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ಹೇಳುತ್ತಿದ್ದಂತೆ ಸಭೆಯನ್ನೇ ಮೊಟಕುಗೊಳಿಸಿ ಹೊರನಡೆದಿದ್ದಾರೆ. 

ಒಂದು ವಾರದ ಒಳಗೆ ಮತ್ತೆ ರೈತರ ಸಭೆ ಕರೆದು ನಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಸದೇ ಇದ್ದರೆ ತಾಲ್ಲೂಕು ಕಚೇರಿಗೆ ಬೀಗಿ ಜಡಿಯಲಾಗುವುದು ಎಂದು ರೈತ ಸಂಘದ  ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತ ಕೆ.ಪರಮೇಶ, ಗ್ರೇಡ್-2 ತಹಶೀಲ್ದಾರ್ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಕೆ.ಸುಲೋಚನಮ್ಮ, ಮುತ್ತೇಗೌಡ, ವಾಸುದೇವ್, ಪ್ರಕಾಶ್, ಶಿರವಾರರವಿ ಸಭೆಯಲ್ಲಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!