ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.05): ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. 

ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ “ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ” ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. ಇದನ್ನು ಸಹಿಸಲಾಗದ ಮನಸ್ಥಿತಿ ಅವರನ್ನು ಕೊಂದು ಹಾಕಿದರು. ಗೌರಿ ಲಂಕೇಶ್ ಅವರು ಇಂದು ನಮ್ಮ ಜತೆಗಿಲ್ಲ ಆದರೆ ಅವರ ಅದಮ್ಯ ಚೇತನ ನಮ್ಮ ಜತೆಗಿದೆ ಎಂದರು. 

ಮಹಾತ್ಮಗಾಂಧಿ, ಗೌರಿ ಲಂಕೇಶ್ ಮಾತ್ರವಲ್ಲ. ಯಾರ್ಯಾರು ಬಸವಾದಿ ಶರಣರು, ಅಂಬೇಡ್ಕರ್, ಬುದ್ಧರ ವಿಚಾರ ಧಾರೆಗಳನ್ನು ಆಚರಿಸುತ್ತಾ ಜಾತಿ ಅಸಮಾನತೆ, ಧರ್ಮ ಸಂಘರ್ಷವನ್ನು ವಿರೋಧಿಸುತ್ತಾರೋ ಅವರೆಲ್ಲರಿಗೂ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದಾರೆ. 

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿರುವ ಕಿಡಿಗೇಡಿಗಳು ಎಷ್ಟೇ ಪ್ರಭಲರಾಗಿದ್ದರೂ, ಅವರ ಹಿಂದೆ ಎಷ್ಟೇ ದೊಡ್ಡ ರಾಜಕೀಯ ಒತ್ತಾಸೆ ಇದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು. 

ಗೌರಿಯನ್ನು ಕೊಂದ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಪೊಲೀಸ್ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ, 500 ಕ್ಕೂ ಹೆಚ್ವು ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ತನಿಖಾ ತಂಡದ ವೃತ್ತಿಪರತೆ ಮತ್ತು ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು. 

ಅಖಿಲ ಭಾರತ ರೈತ ಆಂದೋಲನದ ನಾಯಕ ರೈತ ಮುಖಂಡ ರಾಕೇಶ್ ಟಿಕಾಯತ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆತಲ್ವಾದ್, ರಾಜಕೀಯ ಕಾರ್ಯಕರ್ತೆ ಏಂಜೆಲಾ ರಂಗದ್, ಬಹುಭಾಷಾ ನಟ ಪ್ರಕಾಶ್ ರೈ, ಕೇರಳ ರಾಜ್ಯದ ಮಾಜಿ ಸಚಿವೆ ಶಾಸಕಿ ಶೈಲಜ ಟೀಚರ್, ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ, ಮುಸ್ಲಿಂ ಒಕ್ಕೂಟದ ಮುಖಂಡರಾದ ಯಾಸಿನ್ ಮಲ್ಪೆ, ಮಾಜಿ ಸಚಿವ ಆಂಜನೇಯ ಅವರು ತಮ್ಮ ವಿಚಾರ ಮಂಡಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!