ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು ,(ಸೆ.11): 62 ತಾಲ್ಲೂಕುಗಳು ಮಾರ್ಗಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು‌.

ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ: ಸರ್ವಪಕ್ಷ ಸಭೆಯಲ್ಲಿ ಕಾವೇರಿವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್ ಎಸ್ ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ  ಬಿಜೆಪಿಯವರು ಯೋಜನೆ ಅನುಮತಿ ದೊರಕಿಸಿಸಿಕೊಡಲು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಇಲ್ಲಿ ಇದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಮೈಸೂರು, ಬೆಂಗಳೂರು ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವುದು ನೀರು ನೀತಿಯಂತೆ ಮೊದಲ ಆದ್ಯತೆಯಾಗಿದೆ. ಈ ಮಧ್ಯೆ ರೈತರ ಹಿತ ಕಾಪಾಡಬೇಕು. ಸರ್ವೋಚ್ಛ ನ್ಯಾಯಾಲಯದಲ್ಲಿ ತಮಿಳುನಾಡು ಕೇಸು ದಾಖಲಿಸಿದ್ದು, ರಾಜ್ಯದ ನಿಲುವನ್ನು ಸರ್ಕಾರ ಸ್ಪಷ್ಟವಾಗಿ ತಿಳಿಸಲಿದೆ. ಯಾವುದೇ ಕಾರಣಕ್ಕೆ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನಮಂತ್ರಿಗಳ  ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ, ರಾಜ್ಯ ಬಿಜೆಪಿ ಸಂಸದರು , ಭೇಟಿಗೆ ಸಮಯ ನಿಗದಿಪಡಿಸಲಿ ಎಂದು ತಿಳಿಸಿದರು.

ಒಂದು ರಾಷ್ಟ್ರ ,ಒಂದು ಚುನಾವಣೆ ಕಾರ್ಯತ: ಅಸಾಧ್ಯ: ದೇಶದಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆ ಯ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಒಂದು ರಾಷ್ಟ್ರ , ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ:  ಸಾಧ್ಯವಿಲ್ಲ.  ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವನೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ , ಅಥವಾ  ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ ,  ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ ಎಂದರು.

ಕೋಮುವಾದಿಗಳ ಜೊತೆ ರಾಜಿ ಇಲ್ಲ:  ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ  ಒಪ್ಪಂದ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರಿನ ಖಾಸಗಿ ಸಾರಿಗೆಯವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ. ವಿಜಯೇಂದ್ರ

ಉಪ ಚುನಾವಣೆ: ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸ ನಮಗಿದೆ – ಬಿ.ವೈ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ

[ccc_my_favorite_select_button post_id="120922"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]