ನಾನು ಯಾವುದೇ ಧರ್ಮದ ವಿರೋಧಿಯಲ್ಲ: ನಟ ಪ್ರಕಾಶ್ ರಾಜ್

ಕಲಬುರಗಿ, (ಸೆ.11): ತಾವು ಯಾವುದೇ ಧರ್ಮದ ವಿರೋಧಿಯಲ್ಲ ಎಂದಿರುವ ಬಹುಭಾಷಾ ನಟ ಪ್ರಕಾಶ ರೈ ತಾವು ಜನರನ್ನು ಪ್ರೀತಿಸುವ ಮನುಷ್ಯ ಎಂದು ಹೇಳಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಧರ್ಮದ ವಿರುದ್ಧ ಅಲ್ಲ, ನಾವು ಧರ್ಮದ ಬಗ್ಗೆ ಮಾತಾಡುತ್ತಿಲ್ಲ. ರಾಜಕಾರಣಿಗಳೆನು ಧರ್ಮ ಗುತ್ತಿಗೆ ಪಡೆದಿದ್ದಾರಾ? ಎಂದು ಖಾರವಾಗಿ ಪ್ರಶ್ನಿಸುತ್ತಲೇ ತಮ್ಮನ್ನು ಜನರನ್ನು ಪ್ರೀತಿಸುವ ಮನುಷ್ಯ, ರೋಗ ಅವರಿಗಿದೆ ತಮಗಲ್ಲ ಎಂದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲೀನ್ ಹೇಳಿಕೆ ವಿಚಾರವಾಗಿ ಸ್ಪಂದಿಸಿದ ಪ್ರಕಾಶ ರೈ ಸ್ಟಾಲೀನ್ ಮಾತಾಡಿದ್ದು ತಪ್ಪೇನಿದೆ? ಅಸ್ಪೃಶ್ಯತೆ ಹೋಗಬೇಕು ಇಲ್ಲವೋ?, ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನ ತಿರುಚಲಾಗಿದೆ ಎಂದರು.

ಜಾತಿ ವಿವಾದ ಹುಟ್ಟು ಹಾಕ್ತಿರೋರಿಗೆ ಕೆಲಸ ಇಲ್ವಲ್ಲ ಅದಕ್ಕೆ ಈ ರೀತಿ ಮಾಡ್ತಿದ್ದಾರೆ. ನಾನು ನನ್ನ ಪ್ರತಿಭೆ ಯಿಂದ ಬೆಳೆದಿಲ್ಲ, ಜನರ ಪ್ರೀತಿಯಿಂದ ನಾನು ಬೆಳೆದಿ ದೇನೆ, ಜನರಿಗಾಗಿ ನಾನು ಧ್ವನಿ ಎತ್ತಲೇಬೇಕು ತಾನೆ? ಆ ಕೆಲಸ ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ ಎಂದರ ಲ್ಲದೆ ತಮ್ಮನ್ನು ಒಬ್ಬ ಜನಪರ ವ್ಯಕ್ತಿ ಎಂದು ಹೇಳಿಕೊಂಡ ರೈ ತಾವು ನಾನು ರಾಜಕೀಯ ವ್ಯಕ್ತಿ ಅಲ್ಲ ಎಂದರು.

ಜೈ ಶ್ರೀರಾಮ ಎಂದು ಮೆರವಣಿಗೆಯಲ್ಲಿ ಯುವ ಕರು ಕೈಯಲ್ಲಿ ಕತ್ತಿ ಹಿಡಿದುಕೊಂಡು ಓಡಾಡ್ತಾರೆ ಅಂದ್ರೆ ಏನರ್ಥ? ಅವರವರ ಧರ್ಮ, ಅವರವರ ನಂಬಿಕೆ ಅವರಿಗೆ ಬಿಟ್ಟಿದೆ, ಆದ್ರೆ ಎಲ್ಲರೂ ಚೆನ್ನಾಗಿರಬೇಕು ತಾನೆ..? ಬಸವಣ್ಣ, ಅಂಬೇಡ್ಕರ್ ಅವರು ಹೇಳಿದ್ದು ಭಾ ಷಣಕ್ಕಾಗಿ ಅಲ್ಲ, ಅವನ್ನೆಲ್ಲವನ್ನೂ ಜೀವನಕ್ಕೆ ಅಳವಡಿಸಿ ಕೊಳ್ಳೋದೇ ನಿಜ ಜೀವನ. ಅದನ್ನು ಬಿಟ್ಟು ಬೇಕಾಬಿಟ್ಟಿ ಮಾಡೋದಂದ್ರೆ ಹೇಗೆಂದು ಪ್ರಶ್ನಿಸಿದರು.

ಕೋಮು ಗಲಭೆಯಿಂದ ಹಾನಿ ಆಗ್ತಿರೋದು ಯಾರಿಗೆ ಹೆಣ್ಣು ಮಕ್ಕಳಿಗೆ, ನಾವೇ ಸಮಸ್ಯೆ ಅನುಭವಿಸಬೇಕು. ಅವರು ವಿಶ್ವಗುರು ಆಗಲಿ, ನಾವು ವಿಶ್ವ ಮಾನವ ಆಗೋಣ ಎಂದ ನಟ ಪ್ರಕಾಶ್ ರೈ ಪರೋಕ್ಷವಾಗಿ ಪ್ರಧಾನಿ ಮೋದಿ ಹೆಸರೆತ್ತದೇ ತಿವಿದರು.

ನಂತರದಲ್ಲಿ ನಡೆದ ಸಂವಾದದಲ್ಲಿಯೂ ಪ್ರಕಾಶ ರೈ ಯಾವುದೇ ಧರ್ಮ ಕೆಡಕನ್ನು ಹೇಳೋದಿಲ್ಲ, ಅದನ್ನು ಆಚರಿಸುವವರ ಕೈಗೆ ಸಿಲುಕಿ ವಿಕೃತಿಯಾಗುತ್ತಿದೆ. ಎಲ್ಲಾ ಧರ್ಮಗಳಲ್ಲೂ ವಿಕೃತಿ ಇದೆ. ಅದು ಸರಿಹೋಗಲೇಬೇಕು. ವೈಜ್ಞಾನಿಕ ಮನೋಭಾವನೆ ಅಲ್ಲಿ ಮೂಡಬೇಕು. ಆ ಕೆಲಸ ಎಲ್ಲರೂ ಸೇರಿಕೊಂಡು ಮಾಡಬೇಕೆ ಹೊರತು ಒಬ್ಬರಿಂದ ಆಗೋ ಕೆಲಸ ಇದ್ದಲ್ಲ ಎಂದರು.

ಸಂವಾದದುದ್ದಕ್ಕೂ ಪ್ರಧಾನಿ ಮೋದಿ, ಸಂಘ ಪರಿವಾರದ ಹೆಸರು ಪ್ರಸ್ತಾಪಿಸದೆ ಪರೋಕ್ಷವಾಗಿ ಅವರನ್ನೇ ತಿವಿದರು. ಚಡ್ಡಿ ಹಾಕಿಕೊಂಡವರಿಗೆ ದೇಶ ಕಾಣೋದಿಲ್ಲ. ಗಾಯಗಾಳು ಕಾಣೋದಿಲ್ಲವೆಂದ ರಲ್ಲದ ವಿಶ್ವಗುರುವಿಗೆ ಯಾರು ಹೇಳಬೇಕು ಇದನ್ನೆಲ್ಲ ಎಂದು ಮೋದಿಯವರನ್ನು ತಿವಿದರು.

ತಾವು ಕಳೆದ ಹಲವು ವರುಷಗಳಿಂದ ರಾಜಕಾರಣ ಬಲು ಹತ್ತಿರಿದಂದ ನೋಡುತ್ತಿರೋದಾಗಿ ಹೇಳಿದರಲ್ಲ ದೆ ಯಾರನ್ನೂ ನಂಬುವ ಸ್ಥಿತಿಯಲ್ಲಿಲ್ಲ. ಅದಕ್ಕೆ ರಾಜಕಾರಣ ತಾವು ಸೇರಿಲ್ಲ ಎಂದರಲ್ಲದೆ ರಾಜಕೀಯ ಪಕ್ಷಗಳೆಲ್ಲವೂ ತುಷ್ಟಿಕರಣ ರಾಜಕಾರಣ ಮಾಡಿಕೊಂ ಡು ಬಂದು ಜಾತೀಯತೆ ಪೋಷಿಸುತ್ತಿವೆ. ಹೀಗಾಗಿ ಇವರನ್ನು ಕಂಜರೆ ತಮಗೆ ಆಗಿಬರೋದಿಲ್ಲವೆಂದರು.

ಇವನ ಬಿಲ್ಡಿಂಗ್‌ನಲ್ಲಿ ಅವನ ಬಾರ್ ಇದೆ, ಅವನ ಕಲ್ಯಾಣ ಮಂಟಪದಲ್ಲಿ ಇವನ ಮದುವೆಯಾಗುತ್ತದೆ. ಎಲ್ಲರೂ ಹೊರಗಡೆ ಭಿನ್ನ, ಒಳಗೊಳಗೇ ತುಷ್ಟಿಕರಣ ವಿಚಾರ ಬಂದಾಗ ಇವರೆಲ್ಲರೂ ರಾಜಕಾರಣಿಗಳು, ರಾಜಕೀಯ ಪಕಗಲು ಒಂದೇ. ಹೀಗಾಗಿ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ. ನನಗೆ ದೇಶ ಮುಖ್ಯ. ಮುಂದಿನ ಪೀಳಿಗೆಯ ಭವಿಷ್ಯ ಮುಖ್ಯ. ಅದಕ್ಕೇ ಜನರಿಂದ ಬೆಳೆದ ನಾನು ಜನರೊಂದಿಗೇ ಇದ್ದು ಕೆಲಸ ಮಾಡುವ ಹಂಬಲದವನು ಎಂದರು.

ತಾವು ಕಟ್ಟಿರುವ ನಿದಿರ್ಗಗಂತ ಸಂಸ್ಥೆಯಿಂದ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರಸ್ತುತ ವಿಷಯಗಳ ನಾಟಕಗಳನ್ನೇ ಆಡಿಸುತ್ತ ಜನಾಂದೋಲನ ರೂಪಿಸುವ ಚಿಂತನೆ ತಮ್ಮದೆಂದು ಪ್ರಕಾಶ ರೈ ಹೇಳಿದರು.

ದೇಶದಲ್ಲಿ ಕೆಲವರು ಡೋಂಗಿ ರಾಷ್ಟ್ರೀಯತೆ ವಾದ ಬಿತ್ತುತ್ತಿದ್ದಾರೆ. ತಾವು ಹೇಳಿದ್ದೇ ನಿಜವೆಂದು ನಂಬಿಸುತ್ತಿ ದ್ದಾರೆ. ಜನ ಇದನ್ನರಿತು ಜಾಗೃತರಾಗಬೇಕಿದೆ. 2014ರಿಂದ ತಾವು ಇದನ್ನೇ ಹೇಳುತ್ತಿದ್ದರೂ ಜನ ಇನ್ನೂ ತಿಳಿದುಕೊಳ್ಳುತ್ತಿಲ್ಲ. ಹಾಗೇ ಹೇಳುತ್ತಲೇ ಹೋಗಬೇಕು. ಜನರ ನಂಬಿಯ ನಾಯಕ ಬರುತ್ತಾನೆಂಬ ಆಶಯ ತಮ್ಮದು ಎಂದು ರೈ ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!