ಹರಿತಲೇಖನಿ ದಿನಕ್ಕೊಂದು ಕಥೆ: ಧರ್ಮವೀರ ಸಂಭಾಜಿ

ಸಂಭಾಜಿರಾಜರು ತಮ್ಮ ಅಲ್ಪಾಯುಷ್ಯದಲ್ಲಿ ಮಾಡಿರುವ ಅಲೌಕಿಕ ಕಾರ್ಯಗಳ ಪರಿಣಾಮವು ಸಂಪೂರ್ಣ ಹಿಂದೂಸ್ಥಾನದ ಮೇಲಾಯಿತು. ಆದುದರಿಂದ ಪ್ರತಿಯೊಬ್ಬ ಹಿಂದೂ ಬಾಂಧವರು ಅವರ ಬಗ್ಗೆ ಕೃತಜ್ಞರಾಗಿರಬೇಕು. 

ಅವರು ಔರಂಗಜೇಬನ ಎಂಟು ಲಕ್ಷ ಸೈನ್ಯವನ್ನು ಧೈರ್ಯದಿಂದ ಎದುರಿಸಿದರು ಹಾಗೂ ಬಹಳಷ್ಟು ಮೊಘಲ್ ಸರದಾರರನ್ನು ಯುದ್ಧದಲ್ಲಿ ಸೋಲಿಸಿ ಅವರಿಗೆ ಓಡಲು ಭೂಮಿ ಸಾಲದಂತೆ ಮಾಡಿದರು. 

ಇದರಿಂದ ಔರಂಗಜೇಬನು ಮಹಾರಾಷ್ಟ್ರದಲ್ಲಿ ದೀರ್ಘಕಾಲದವರೆಗೆ ಹೋರಾಡುತ್ತಿದ್ದನು ಹಾಗೂ ಸಂಪೂರ್ಣ ಉತ್ತರ ಹಿಂದೂಸ್ಥಾನವು ಅವನ ದಬ್ಬಾಳಿಕೆಯಿಂದ ಮುಕ್ತಗೊಂಡಿತು. ಇದು ಸಂಭಾಜಿರಾಜರ ಅತ್ಯಂತ ಮಹತ್ವಪೂರ್ಣ ಕಾರ್ಯ ಎಂದು ಹೇಳಬಹುದು. 

ಅವರು ಒಂದು ವೇಳೆ ಔರಂಗಜೇಬನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೆ, ಅಥವಾ ಅವನ ಗುಲಾಮಗಿರಿಯನ್ನು ಸ್ವೀಕರಿಸಿದ್ದರೆ, ಅವನು ಎರಡು-ಮೂರು ವರ್ಷಗಳಲ್ಲಿ ಪುನಃ ಉತ್ತರ ಹಿಂದೂಸ್ಥಾನಕ್ಕೆ ಹೋಗುತ್ತಿದ್ದನು. ಆದರೆ ಸಂಭಾಜಿರಾಜರ ತೀವ್ರ ಹೋರಾಟದಿಂದ, 23 ವರ್ಷಗಳ ಕಾಲ ಔರಂಗಜೇಬನು ದಕ್ಷಿಣದಲ್ಲಿ ಸಿಕ್ಕಿಬಿದ್ದನು ಹಾಗೂ ಇದರಿಂದ ಉತ್ತರದಲ್ಲಿ ಬುಂದೇಲಖಂಡ, ಪಂಜಾಬ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಹಿಂದೂಗಳ ಹೊಸ ಅಧಿಕಾರದ ಉದಯವಾಗಿ ಹಿಂದೂ ಸಮಾಜಕ್ಕೆ ಸಂರಕ್ಷಣೆ ಲಭಿಸಿತು.

ಸಂಭಾಜಿರಾಜರು ಗೋವಾದ ಮೇಲೆ ಆಕ್ರಮಣ ಮಾಡಿ ಧರ್ಮಾಂಧ ಪೋರ್ತುಗೀಜರನ್ನು ವಶಕ್ಕೆ ತೆಗೆದುಕೊಂಡರು.ಅವರೊಂದಿಗೆ ಒಪ್ಪಂದ ಮಾಡಿ ಗೋವಾದ ಅವರ ಧರ್ಮಪ್ರಸಾರಕ್ಕೆ ತಡೆಯೊಡ್ಡಿದ್ದರಿಂದ ಗೋವಾ ಪ್ರದೇಶದಲ್ಲಿನ ಹಿಂದೂಗಳ ರಕ್ಷಣೆಯಾಯಿತುಎಂಬುದು ಮರೆಯಲು ಅಸಾಧ್ಯವಾದ ಸಂಗತಿ. ಪೋರ್ತುಗೀಜರಿಗೆ ಸಂಭಾಜಿರಾಜರ ಬಗ್ಗೆ ಬಹಳ ಭಯವಿತ್ತು. ಅವರು ಆಂಗ್ಲರಿಗೆ ಬರೆದ ಪತ್ರದಲ್ಲಿ ‘ಸದ್ಯದ ಪರಿಸ್ಥಿತಿಯಲ್ಲಿ ಸಂಭಾಜಿ ಮಹಾರಾಜರೇ ಸರ್ವಶಕ್ತಿಮಾನರಾಗಿದ್ದಾರೆ, ಇದು ನಮ್ಮ ಅನುಭವವಾಗಿದೆ !’ ಎಂದು ನಮೂದಿಸಿದ್ದಾರೆ. ಶತ್ರುವಿನ ಈ ಪ್ರಮಾಣ ಪತ್ರವು ಮಹಾರಾಜರ ಸಾಮರ್ಥ್ಯದ ಕಲ್ಪನೆ ನೀಡುತ್ತದೆ.

ಶಿವಾಜಿ ಮಹಾರಾಜರು ನೇತಾಜಿ ಪಾಲಕರರನ್ನು ಪುನಃ ಹಿಂದೂ ಧರ್ಮಕ್ಕೆ ಬರಮಾಡಿಕೊಂಡ ವಿಷಯ ಎಲ್ಲರಿಗೂ ತಿಳಿದಿದೆ; ಆದರೆ ಸಂಭಾಜಿರಾಜರು ತಮ್ಮ ರಾಜ್ಯದಲ್ಲಿ ‘ಶುದ್ಧೀಕರಣಕ್ಕಾಗಿ’ ಸ್ವತಂತ್ರ ವಿಭಾಗವನ್ನು ಸ್ಥಾಪಿಸಿರುವುದು ಮಹತ್ತ್ವದ ವಿಷಯವಾಗಿದೆ. 

ಹರಸೂಲ ಎಂಬ ಊರಿನ ಕುಲಕರ್ಣಿ ಮನೆತನದ ಬ್ರಾಹ್ಮಣನ ಕಥೆಯು ಸಂಭಾಜಿರಾಜರ ಇತಿಹಾಸದಲ್ಲಿ ಬರೆದಿಡಲಾಗಿದೆ. ಒತ್ತಾಯಪೂರ್ವಕವಾಗಿ ಮುಸಲ್ಮಾನನಾಗಿದ್ದ ಈ ಕುಲಕರ್ಣಿಯು ಹಿಂದೂ ಧರ್ಮಕ್ಕೆ ಮರಳಲು ಬಹಳ ಪ್ರಯತ್ನಿಸುತ್ತಿದ್ದನು; ಆದರೆ ಸ್ಥಳೀಯ ಬ್ರಾಹ್ಮಣರು ಅವನಿಗೆ ಸಹಾಯ ಮಾಡುತ್ತಿರಲಿಲ್ಲ.

ಕೊನೆಗೆ ಈ ಬ್ರಾಹ್ಮಣನು ಸಂಭಾಜಿರಾಜರನ್ನು ಭೇಟಿಯಾಗಿ ತನ್ನ ವ್ಯಥೆಯನ್ನು ಅವರ ಎದುರು ಮಂಡಿಸಿದನು. ಮಹಾರಾಜರು ತಕ್ಷಣ ಅವನ ಶುದ್ಧೀಕರಣದ ವ್ಯವಸ್ಥೆ ಮಾಡಿ ಅವನಿಗೆ ಪುನಃ ಸ್ವಧರ್ಮದಲ್ಲಿ ಪ್ರವೇಶ ನೀಡಿದರು. ರಾಜನ ಔದಾರ್ಯದಿಂದ ಬಹಳಷ್ಟು ಹಿಂದೂಗಳು ಪುನಃ ಸ್ವಧರ್ಮಕ್ಕೆ ಮರಳಿದರು.

ಜನರಿಗೆ ಸಂಭಾಜಿ ರಾಜರ ಬಲಿದಾನದ ಇತಿಹಾಸದ ಸರಿಯಾದ ಮಾಹಿತಿ ಇಲ್ಲ. ಸಂಭಾಜಿರಾಜರು ಫೆಬ್ರವರಿ 01, 1689 ರಂದು ಸಂಗಮೇಶ್ವರದಲ್ಲಿ ಕೆಲವರ ಆಸ್ತಿಯ ಬಗೆಗಿನ ಜಗಳದ ಬಗ್ಗೆ ತಿಳಿದುಕೊಳ್ಳುತ್ತಿದ್ದಾಗ,ಗಣೋಜಿ ಶಿರ್ಕೆಯ ಪಿತೂರಿಯಿಂದಬಂಧಿಸಲ್ಪಟ್ಟರು.

ಆಗ ಮೋಘಲರು ಲಕ್ಷಾಂತರ ಸೈನಿಕರ ಬಂದೋಬಸ್ತಿನಲ್ಲಿ ರಾಜರ ಮೆರವಣಿಗೆ ಮಾಡಿದರು. ಅವರಿಗೆ ಶಾರೀರಿಕ ಹಾಗೂ ಮಾನಸಿಕ ಯಾತನೆ ನೀಡಿದರು. ವಿದೂಷಕನ ಬಟ್ಟೆ ಹಾಕಿಸಿ, ಕಟ್ಟಿಗೆಯ ಪಂಜರದಲ್ಲಿ ಕೈ ಕಾಲುಗಳನ್ನು ಸಿಕ್ಕಿಸಲಾಯಿತು. 

ಆ ಕಾಲದ ಚಿತ್ರಕಾರನು ಬಿಡಿಸಿದ ರಕ್ತದಿಂದ ತುಂಬಿದ ಸ್ಥಿತಿಯಲ್ಲಿರುವ ಸಂಭಾಜಿರಾಜರ ಚಿತ್ರವು ಕರ್ನಾವತಿ(ಅಹಮದಾಬಾದ)ನಗರ್ ಎಂಬಲ್ಲಿ ಸಂಗ್ರಹಾಲಯದಲ್ಲಿ ಇಂದಿಗೂ ಇದೆ. ಆ ಚಿತ್ರದಲ್ಲಿ ಅಸಂಖ್ಯ ಯಾತನೆಗಳನ್ನು ಸಹಿಸುವ ಈ ತೇಜಸ್ವಿ ಹಿಂದೂ ರಾಜನ ದೃಷ್ಟಿಯು ಅತ್ಯಂತ ಕ್ರುದ್ಧವಾಗಿದೆ, ಎಂಬುದು ಕಾಣುತ್ತದೆ. ಸಂಭಾಜಿರಾಜರ ಸ್ವಾಭಿಮಾನದ ಪರಿಚಯವು ಆ ಕ್ರುದ್ಧ ದೃಷ್ಟಿಯಿಂದಲೇ ತಿಳಿಯುತ್ತದೆ.

ಪೇಡಗಾವನ ಕೋಟೆಯಲ್ಲಿ ಔರಂಗಜೇಬನನೊಂದಿಗೆ ರಾಜರ ಮುಖತಭೇಟಿ ಆಯಿತು. ‘ಕಾಫೀರರ ರಾಜ ಸಿಕ್ಕಿದನು’ ಎಂದು ಔರಂಗಜೇಬನು ನಾಮಾಜು ಪಠಿಸಿ ಅಲ್ಲಾನ ಉಪಕಾರವೆಂದು ತಿಳಿದು ಅತ್ಯಾನಂದ ವ್ಯಕ್ತಪಡಿಸಿದನು. ಆಗ ಔರಂಗಜೇಬನ ಪ್ರಧಾನ ಮಂತ್ರಿ ಇರವಲಾಸಖಾನನು ಸಂಭಾಜಿರಾಜರಿಗೆ ಶರಣಾಗಲು ತಿಳಿಸಿದನು. ಸಂತಪ್ತಗೊಂಡ ಸಂಭಾಜಿ ರಾಜರು ಔರಂಗಜೇಬನಿಗಾಗಿ’ಮುಜರಾ’ ಮಾಡಲು ನಿರಾಕರಿಸಿದರು. ಅದೊಂದು ನಿರ್ಣಾಯಕ ಕ್ಷಣವಾಗಿತ್ತು.

ಮಹಾರಾಜರು ವೈಯಕ್ತಿಕ ಸುಖದ ಅಭಿಲಾಷೆಗಿಂತಲೂ ಹಿಂದುತ್ವದ ಅಭಿಮಾನವನ್ನು ಮಹತ್ತ್ವದ್ದೆಂದು ತಿಳಿದಿದ್ದರು. ತಮ್ಮ ತಂದೆ ನಿರ್ಮಿಸಿದ ಸ್ವಾಭಿಮಾನದ ಮಹಾನ ಪರಂಪರೆಯನ್ನು ಅವರು ಕಾಪಾಡಿದರು. ಇದರ ನಂತರ ಎರಡು ದಿನಗಳಲ್ಲಿ ಔರಂಗಜೇಬನ ಅನೇಕ ಸರದಾರರು ಅವರ ಮನ ಒಲಿಸಲು ಪ್ರಯತ್ನಿಸಿದರು. ಅವರಿಗೆ ‘ಮುಸಲ್ಮಾನರಾದರೆ ಜೀವದಾನ ಸಿಗುವುದು’, ಎಂಬುದಾಗಿ ಹೇಳಲಾಯಿತು; ಆದರೆ ಸ್ವಾಭಿಮಾನಿ ಸಂಭಾಜಿ ರಾಜರು ಸತತವಾಗಿ ಈ ಮುಸಲ್ಮಾನ ಸರದಾರರನ್ನು ಅವಮಾನಗೊಳಿಸಿದರು.

ಕೊನೆಗೆ ಆ ಪಾಪೀ ಔರಂಗಜೇಬ ಅವರ ಕಣ್ಣು ಕುಕ್ಕಿಸಿದನು, ನಾಲಿಗೆ ಕತ್ತರಿಸಿದನು ಆದರೂ ಮೃತ್ಯುವು ರಾಜನನ್ನು ಸ್ಪರ್ಷಿಸಲಿಲ್ಲ. ದುಷ್ಟ ಮೊಘಲ ಸರದಾರರು ಅವರಿಗೆ ಪ್ರಚಂಡ ಯಾತನೆ ನೀಡಿದರು. ಅವರ ದಿವ್ಯ ಧರ್ಮಾಭಿಮಾನದಿಂದಾಗಿ ಅವರಿಗೆ ಈ ಎಲ್ಲ ಕಷ್ಟಗಳನ್ನು ಅನುಭವಿಸಲೇಬೇಕಾಯಿತು. 

ಮಾರ್ಚ್ 12, 1989 ರಂದು ಯುಗಾದಿ ಹಬ್ಬವಿತ್ತು. ಹಿಂದೂಗಳ ಹಬ್ಬದಂದು ಅವರನ್ನು ಅಪಮಾನಗೊಳಿಸಲು ಮಾರ್ಚ್ 11 ಫಾಲ್ಗುಣ ಅಮಾವಾಸ್ಯೆಯಂದು ಸಂಭಾಜಿರಾಜರ ಕೊಲೆ ಮಾಡಲಾಯಿತು. ಅವರ ಮಸ್ತಕವನ್ನು ಬರ್ಚಿಗೆ ಚುಚ್ಚಿ ಮೊಘಲರು ಅವರನ್ನು ಅಪಮಾನಗೊಳಿಸಿ ಮೆರವಣಿಗೆ ಮಾಡಿದರು. 

ಈ ರೀತಿ ಫೆಬ್ರುವರಿ 01 ರಿಂದ ಮಾರ್ಚ 11 ರವರೆಗೆ ಹೀಗೆ 39ದಿನಗಳ ಯಮಯಾತನೆಯನ್ನು ಸಹಿಸಿ ಸಂಭಾಜಿರಾಜರು ಹಿಂದುತ್ವದ ತೇಜವನ್ನು ಬೆಳೆಸಿದರು. ಧರ್ಮಕ್ಕಾಗಿ ಬಲಿದಾನ ಮಾಡಿದ ಈ ರಾಜನು ಇತಿಹಾಸದಲ್ಲಿ ಅಮರನಾದನು. ಔರಂಗಜೇಬನು ಮಾತ್ರ ರಾಜಧರ್ಮವನ್ನು ತುಳಿಯುವ ಇತಿಹಾಸದ ದರಬಾರಿನಲ್ಲಿ ಅಪರಾಧಿಯಾದನು.

ಸಂಭಾಜಿ ರಾಜರ ಈ ಬಲಿದಾನದಿಂದ ಸಂಪೂರ್ಣ ಮಹಾರಾಷ್ಟ್ರವು ಹೊತ್ತಿ ಉರಿಯಿತು ಹಾಗೂ ಪಾಪಿ ಔರಂಗಜೇಬನ ಜೊತೆ ಮರಾಠರ ನಿರ್ಣಾಯಕ ಹೋರಾಟ ಪ್ರಾರಂಭವಾಯಿತು. ಆ ಕಾಲವನ್ನು ‘ಹುಲ್ಲಿನ ಕಡ್ಡಿಗೆ ಬರ್ಚಿಗಳು ಹುಟ್ಟಿಕೊಂಡವು ಹಾಗೂ ಮನೆಮನೆಗಳು ಕೋಟೆಗಳಾದವು, ಮನೆ ಮನೆಯಲ್ಲಿ ಮಾತೆ ಭಗಿನಿಯರೆಲ್ಲರೂ ತಮ್ಮ ಗಂಡಸರಿಗೆ ರಾಜನ ಹತ್ಯೆಯ ಸೇಡು ತೀರಿಸಲು ಹೇಳತೊಡಗಿದರು’, ಎಂದು ವರ್ಣಿಸಿದ್ದಾರೆ. 

ಸಂಭಾಜಿ ಮಹಾರಾಜರ ಬಲಿದಾನದಿಂದ ಮರಾಠರ ಸ್ವಾಭಿಮಾನವು ಪುನಃ ಜಾಗೃತವಾಯಿತು. ಇದು ಮುನ್ನೂರು ವರ್ಷಗಳ ಹಿಂದಿನ ರಾಷ್ಟ್ರ ಜೀವನದಲ್ಲಿನ ಅತ್ಯಂತ ಮಹತ್ತ್ವದ ಅಂಗವಾಗಿತ್ತು. ಇದರಿಂದ ಇತಿಹಾಸದಲ್ಲಿ ತಿರುವು ಮೂಡಿತು. ಜನರ ಬೆಂಬಲದಿಂದ ಮರಾಠರ ಸೈನ್ಯ ಬೆಳೆಯುತ್ತ ಹೋಯಿತು ಹಾಗೂ ಸೈನ್ಯದ ಸಂಖ್ಯೆಯು ಎರಡು ಲಕ್ಷದವರೆಗೆ ತಲುಪಿತು. ಅಲ್ಲಲ್ಲಿ ಮೊಘಲರಿಗೆ ಪ್ರಖರವಾದ ವಿರೋಧ ಪ್ರಾರಂಭವಾಯಿತು ಹಾಗೂ ಕೊನೆಗೆ ಮಹಾರಾಷ್ಟ್ರದಲ್ಲಿಯೇ 27 ವರ್ಷಗಳ ನಿಷ್ಫಲ ಯುದ್ಧದ ನಂತರ ಔರಂಗಜೇಬನ ಅಂತ್ಯವಾಯಿತು.ಮೊಘಲರ ಅಧಿಕಾರ ಕ್ಷೀಣಸಿ ಹಿಂದೂಗಳ ಶಕ್ತಿಶಾಲಿ ಸಾಮ್ರಾಜ್ಯವು ಉದಯಗೊಂಡಿತು.

27 ವರ್ಷ ಔರಂಗಜೇಬನ ಪಾಶವಿ ಆಕ್ರಮಣದ ವಿರುದ್ಧ ಮರಾಠರು ಮಾಡಿದ ಹೋರಾಟದಲ್ಲಿ ಹಂಬೀರರಾವ, ಸಂತಾಜಿ, ಧನಾಜಿಯಂತಹ ಅನೇಕ ಯೋಧರಿದ್ದರು; ಆದರೆ ಈ ಹೋರಾಟಕ್ಕೆ ತಿರುವು ಮೂಡಿದ್ದು ಸಂಭಾಜಿ ರಾಜರ ಬಲಿದಾನದಿಂದ ಆಗಿರುವ ಜಾಗೃತಿಯಿಂದಲೇ ಎಂಬುದನ್ನು ಮರೆಯುವಂತಿಲ್ಲ.

ಕೃಪೆ ಸಾಮಾಜಿಕ ಜಾಲತಾಣ: ಹಿಂದು ಜಾಗೃತಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!