ಚೆನ್ನೈ, (ಸೆ.12): ಚೆನ್ನೈನ ಪೂರ್ವ ಕರಾವಳಿ ರಸ್ತೆಯಲ್ಲಿ ಆಯೋಜನೆಗೊಂಡಿದ್ದ ಎಆರ್ ರಹಮಾನ್ ಸಂಗೀತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಉಂಟಾಗಿದ್ದರಿಂದ ಪಲ್ಲಿಕರನೈನ ಆಯುಕ್ತೆ ದಿಶಾ ಮಿತ್ತಲ್ ಹಾಗೂ ಉಪ ಪೊಲೀಸ್ ಆಯುಕ್ತಯಾದ ದೀಪಾ ಸತ್ಯನ್ ಅವರಿಗೆ ಮುಂದಿನ ಆದೇಶದವರೆಗೆ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರ ಆದೇಶಿಸಿದೆ.
ಪೂರ್ವ ಕರಾವಳಿ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಿಂದ ಉಂಟಾದ ಸಂಚಾರ ದಟ್ಟಣೆಯಿಂದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ಬೆಂಗಾವಲು ಪಡೆಯು ಸಿಲುಕಿಕೊಂಡಿದ್ದರಿಂದ ಭದ್ರತಾ ಲೋಪದ ಭೀತಿಯೂ ಎದುರಾಗಿತ್ತೆಂದು thenewsminute.com ವರದಿ ಮಾಡಿದೆ.
ಕರಾವಳಿ ರಸ್ತೆಯಲ್ಲಿರುವ ಆದಿತ್ಯರಾಮ್ ಪೂರ್ವ ಕರಾವಳಿ ನಗರದ ಅರಮನೆ ರಸ್ತೆಯಲ್ಲಿ ಆಯೋಜನೆಗೊಂಡಿದ್ದ ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮದಲ್ಲಿ ಭಾರಿ ಅವ್ಯವಸ್ಥೆ ಉಂಟಾದ ಎರಡು ದಿನಗಳ ನಂತರ ಈ ಆದೇಶ ಹೊರಬಿದ್ದಿದೆ.
ಅವ್ಯವಸ್ಥೆಯಿಂದ ಅಸಮಾಧಾನಗೊಂಡ ಅಭಿಮಾನಿಗಳು, ಕಾರ್ಯಕ್ರಮವನ್ನು ಸರಿಯಾಗಿ ಆಯೋಜಿಸಿರಲಿಲ್ಲ ಸಂಗೀತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ ಉಂಟಾಯಿತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಗೀತ ಕಾರ್ಯಕ್ರಮ ಆಯೋಜನೆಗೊಂಡಿದ್ದ ಸ್ಥಳದಲ್ಲಿ ಭಾರಿ ಜನಜಂಗುಳಿ ನೆರೆದಿತ್ತು ಎಂದು ಹಲವರು ದೂರಿದ್ದಾರೆ. ಸಂಗೀತ ಕಾರ್ಯಕ್ರಮದ ಪ್ರಾರಂಭಕ್ಕೂ ಹಲವಾರು ಗಂಟೆಗಳ ಮುನ್ನ ಆಗಮಿಸಿದ್ದರೂ, ಸಂಗೀತ ಕಾರ್ಯಕ್ರಮ ಆಯೋಜನೆಗೊಂಡಿದ್ದ ಪ್ರದೇಶದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂದು ಹಲವರು ಕಿಡಿ ಕಾರಿದ್ದಾರೆ.
ಪೋಟೋ ಕೃಪೆ: thenewsminute.com
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….