ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಸೆ.17): ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ  ಹೆಚ್ಚು ಮಾಡಲಾಗುವುದು ಎಂದು ಭರವಸೆ  ನೀಡಿದರು. 

ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು: ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ  ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ  ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟ: ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಹಿಂದುಳಿದ ಜಾತಿಗಳ ಜಯಂತಿ ಹಾಗೂ ನಿಗಮಗಳನ್ನೂ ರಚನೆ ಮಾಡಲು ತೀರ್ಮಾನ ಮಾಡಿ ಹಣವನ್ನೂ ಒದಗಿಸಿದ್ದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟವಾಗುತ್ತದೆ. 

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ: ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ  ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು. 

 ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ  ಸಮಾನತೆ ತರಲು ಸಾಧ್ಯ.

ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು: ಸಂವಿಧಾನದ ವಿರುದ್ಧ ಇರುವವರ ಬಳಿ ಅಧಿಕಾರ ಇದ್ದರೆ ಸಾಧ್ಯವಿಲ್ಲ. ಬಹುತ್ವದ ಸಮಾಜ ಉಳ್ಳ ನಾವು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು. ವೈವಿಧ್ಯ ತೆಯಲ್ಲಿ ಏಕತೆ ಕಾಣಬೇಕು. ಒಂದು ಧರ್ಮ ಆಧಾರಿತ ದೇಶವಲ್ಲ ಇದು. ಒಂದು ಜಾತಿ, ಭಾಷೆ ಆಧಾರಿತ ದೇಶವಲ್ಲ. ಸಹಿಷ್ಣುತೆ, ಸಹಬಾಳ್ವೆ ಎಂದು ಸಂವಿಧಾನ ಹೇಳುತ್ತದೆ ಎಂದರು.

ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ  ದ್ವೇಷಿಸದಿರಿ: ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು  ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ.  ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ  ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು. 

ಜಾತಿ ವ್ಯವಸ್ಥೆಗೆ  ಚಾಲನೆ ಇಲ್ಲ:  ಶಿಕ್ಷಣ ಪಡೆಯದಿದ್ದರೆ  ಸಮಾಜ ಮುಂದುವರೆಯುವುದಿಲ್ಲ. ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಅದಕ್ಕೆ ಚಲನೆ ಇಲ್ಲ. ಸಾಮಾಜಿಕ ವ್ಯವಸ್ಥೆಗೆ ಆರ್ಥಿಕ, ಸಮಾಜಿಕ ಶಕ್ತಿ ಇಲ್ಲದಿದ್ದರೆ, ವ್ಯವಸ್ಥೆ ಬದಲಾಗುವುದಿಲ್ಲ. ಇದು ಬಂದಾಗ ಮಾತ್ರ  ಚಲನೆ ಸಾಧ್ಯ. ಬದಲಾವಣೆಗೆ ವಿರುದ್ಧ ಇರುವವರು ಸಾಮಾಜಿಕ ವೈರಿಗಳು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!