ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಸೆ.17): ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ  ಹೆಚ್ಚು ಮಾಡಲಾಗುವುದು ಎಂದು ಭರವಸೆ  ನೀಡಿದರು. 

ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು: ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ  ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ  ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟ: ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಹಿಂದುಳಿದ ಜಾತಿಗಳ ಜಯಂತಿ ಹಾಗೂ ನಿಗಮಗಳನ್ನೂ ರಚನೆ ಮಾಡಲು ತೀರ್ಮಾನ ಮಾಡಿ ಹಣವನ್ನೂ ಒದಗಿಸಿದ್ದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟವಾಗುತ್ತದೆ. 

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ: ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ  ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು. 

 ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ  ಸಮಾನತೆ ತರಲು ಸಾಧ್ಯ.

ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು: ಸಂವಿಧಾನದ ವಿರುದ್ಧ ಇರುವವರ ಬಳಿ ಅಧಿಕಾರ ಇದ್ದರೆ ಸಾಧ್ಯವಿಲ್ಲ. ಬಹುತ್ವದ ಸಮಾಜ ಉಳ್ಳ ನಾವು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು. ವೈವಿಧ್ಯ ತೆಯಲ್ಲಿ ಏಕತೆ ಕಾಣಬೇಕು. ಒಂದು ಧರ್ಮ ಆಧಾರಿತ ದೇಶವಲ್ಲ ಇದು. ಒಂದು ಜಾತಿ, ಭಾಷೆ ಆಧಾರಿತ ದೇಶವಲ್ಲ. ಸಹಿಷ್ಣುತೆ, ಸಹಬಾಳ್ವೆ ಎಂದು ಸಂವಿಧಾನ ಹೇಳುತ್ತದೆ ಎಂದರು.

ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ  ದ್ವೇಷಿಸದಿರಿ: ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು  ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ.  ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ  ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು. 

ಜಾತಿ ವ್ಯವಸ್ಥೆಗೆ  ಚಾಲನೆ ಇಲ್ಲ:  ಶಿಕ್ಷಣ ಪಡೆಯದಿದ್ದರೆ  ಸಮಾಜ ಮುಂದುವರೆಯುವುದಿಲ್ಲ. ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಅದಕ್ಕೆ ಚಲನೆ ಇಲ್ಲ. ಸಾಮಾಜಿಕ ವ್ಯವಸ್ಥೆಗೆ ಆರ್ಥಿಕ, ಸಮಾಜಿಕ ಶಕ್ತಿ ಇಲ್ಲದಿದ್ದರೆ, ವ್ಯವಸ್ಥೆ ಬದಲಾಗುವುದಿಲ್ಲ. ಇದು ಬಂದಾಗ ಮಾತ್ರ  ಚಲನೆ ಸಾಧ್ಯ. ಬದಲಾವಣೆಗೆ ವಿರುದ್ಧ ಇರುವವರು ಸಾಮಾಜಿಕ ವೈರಿಗಳು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!