ವಂಚನೆ ವಿಚಾರ ಮೊದಲೇ ತಿಳಿದಿತ್ತು..!; ನನಗೆ ಚೈತ್ರಾ ಹೆಚ್ಚು ಪರಿಚಯ ಇಲ್ಲ – ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು, (ಸೆ.18): ವಿಧಾನಸಭೆ ಚುನಾವಣೆಗೆ ಬಿಜೆಪಿ ಸ್ಪರ್ಧೆ ಕುರಿತಂತೆ ವಂಚನೆಗೆ ಒಳಗಾಗಿರುವ ಗೋವಿಂದ ಬಾಬು ಪೂಜಾರಿ ಬಹಳ ಆತ್ಮೀಯರಾಗಿದ್ದು, ದೂರು ನೀಡುವ ಕೆಲ ದಿನ ಮುಂಚೆಯೇ ಕರೆ ಮಾಡಿ, ಹಣಕೊಟ್ಟು ಮೋಸ ಹೋದ ವಿಚಾರವಾಗಿ ಹೇಳಿಕೊಂಡಿದ್ದರೆಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ವಿಚಾರ ಚಕ್ರವರ್ತಿ ಸೂಲಿಬೆಲೆ ಮೂಲಕ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿತ್ತು ಎಂದು ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ ಬೆನ್ನಲ್ಲೇ ಖಾಸಗಿ ಸುದ್ದಿ ವಾಹಿನಿಗೆ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ.

ಬಹಳ ಆತ್ಮೀಯರಾಗಿದ್ದು ಕೂಡ ಗೋವಿಂದ ಬಾಬು ಪೂಜಾರಿ ವಂಚನೆಗೆ ಒಳಗಾಗಿರುವ ಕುರಿತು ಮಾಹಿತಿ ನೀಡಲಿಲ್ಲ‌. ಮೊದಲೇ ಹೇಳಿದ್ದರೆ ಇದೆಲ್ಲ ನಡೆಯೋದಿಲ್ಲ ಎಂದು ಮೊದಲೇ ಹೇಳ್ತಾ ಇದ್ದೆ. ಇದಾದ ಬಂತರ ವಜ್ರದೇಹಿ ಶ್ರೀಗಳು ಕರೆ ಮಾಡಿದ್ದರು, ಆಗ ತಮಾಷೆ ಮಾಡಿ ಹೇಳಿದ್ದೆ ಏಕೆಂದರೆ ಈ ಪ್ರಕರಣದಲ್ಲಿ ಗೋವಿಂದ ಬಾಬು ಪೂಜಾರಿ ಹೇಳಿದ್ದ ಹೆಸರುಗಳಲ್ಲಿ ವಜ್ರದೇಹಿ ಶ್ರೀಗಳ ಹೆಸರು ಇರಲಿಲ್ಲ. 

ಇದೆಲ್ಲ ವಿಚಾರ ಗೊತ್ತಿರುವುದಾಗಿ ಶ್ರೀಗಳಿಗೆ ತಿಳಿಸಿದ್ದೆ, ಆಗ ಅವರು ಇದು ಹೊರಬಂದರೆ ಬಹಳ ಕೆಟ್ಟಾದಾಗುತ್ತೆ, ಏನಾದ್ರು ಮಾಡಬೇಕಲ್ಲ ಎಂದಿದ್ದರು. ಆಗ ನಾನು ದುಡ್ಡು ಮತ್ತು ವಂಚನೆ ಆಗಿದ್ದು ಅವರವರ ವಿಚಾರ ಬಗೆ ಹರಿಸಿಕೊಳ್ಳಲಿ ಎಂದು ಹೇಳಿದ್ದೀನಿ. ಅಲ್ಲದೆ ಈ ಕುರಿತಂತೆ ಕೆಲ ಪ್ರಮುಖರ ಗಮನಕ್ಕೆ ತಂದಿದ್ದೆ.

ಇದು ನನಗೆ ಮುಂಚಿತವಾಗಿ ಗೊತ್ತಿದ್ದ ಸಂಗತಿಯೇ, ಗೋವಿಂದ ಬಾಬು ಪೂಜಾರಿ ಅವರಿಗೆ ನಾನೇ ಹೇಳಿದ್ದೆ ಕುಳಿತು ದುಡ್ಡು ಸೇರಿದಂತೆ ಏನ್ ಏನ್ ಪಡ್ಕೋಬೇಕೋ ಎಲ್ಲ ಪಡ್ಕೊಳಿ ಎಂದು ಸಲಹೆ ನೀಡಿದ್ದೆ.

ಚೈತ್ರಾ ಕುಂದಾಪುರ ಸಂಪರ್ಕ ಹೆಚ್ಚು ಕಡಿಮೆ ಇಲ್ಲವೇ ಎನ್ನಬಹುದು. ಈ ಮುಂಚೆ ಆಕೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುವ ವೇಳೆ ಸಂದರ್ಶನದ ಸಂದರ್ಭದಲ್ಲಿ ಆಕೆಯೊಂದಿಗೆ ಮಾತನಾಡಿದ್ದು ಮಾತ್ರ. ಅದು ಬಿಟ್ಟು ಆಕೆಯೊಂದಿಗೆ ಮಾತಾಗಲಿ, ವೇದಿಕೆ ಹಂಚಿಕೊಂಡಿದ್ದಾಗಲ್ಲಿ ಇಲ್ಲ.

ಹಾಲಶ್ರೀಗಳು ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲವೆಂದಿದ್ದರು. ಅವರಿಗೂ ಹೇಳಿದೆ, ಮಾತಾಡಿ ಕ್ಲಿಯರ್ ಮಾಡಿಕೊಳ್ಳಿ, ದುಡ್ಡಿದ್ರೆ ವಾಪಸ್ ಕೊಡಿ ಎಂದು ಸಲಹೆ ನೀಡಿದ್ದೆ ಎಂದು ಹೇಳಿದ್ದೆ.

ಪ್ರವಾಸ, ಕಾರ್ಯಕ್ರಮ ಹೆಚ್ಚಾಗಿರುವ ಕಾರಣ ಸಾಧುಗಳ ಸಂಪರ್ಕ ಎಲ್ಲರೊಂದಿಗಿದ್ದು, ಅದು ವಿಶೇಷವೇನಲ್ಲ. ಅಂತೆಯೇ ಹಾಲಶ್ರೀ ಸ್ವಾಮಿಗಳು ಅನೇಕ ವೇದಿಕೆಗಳಲ್ಲಿ ಇದ್ದರು. ಆದರೆ ಅದುಕ್ಕೂ, ಇದಕ್ಕು ತಳಕು ಹಾಕುವ ಅಗತ್ಯವಿಲ್ಲ. ಈ ಪ್ರಕರಣದಲ್ಲಿ ದೂರ ದೂರಕ್ಕೂ ನಾನು ಸಂಬಂಧ ಹೊಂದಿಲ್ಲ. ಕಾರಣ ಈ ಪ್ರಕರಣದಲ್ಲಿ ದುಡ್ಡು ಕಳೆದುಕೊಂಡ ಗೋವಿಂದ ಬಾಬು ಪೂಜಾರಿ ನನಗೆ ಅತ್ಯಂತ ಆತ್ಮೀಯರು ಎಂದು ಸ್ಪಷ್ಟಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!