ಹರಿತಲೇಖನಿ ದಿನಕ್ಕೊಂದು ಕಥೆ: ಕವಿ ಕಾಳಿದಾಸರ ಉಪಾಯ

ರಾಜಾ ಭೋಜ ಹೆಸರಿನ ಪ್ರಸಿದ್ಧ ರಾಜನಿದ್ದನು. ಅವನ ದರಬಾರಿನಲ್ಲಿ ಅನೇಕ ವಿದ್ವಾಂಸರಿದ್ದರು. ರಾಜಾ ಭೋಜರ ಸಭೆಯಲ್ಲಿ ಕಾಳಿದಾಸ ಹೆಸರಿನ ಮಹಾನ್ ಕವಿಗಳಿದ್ದರು. ಕವಿ ಕಾಳಿದಾಸರ ಹೆಸರನ್ನು ನೀವು ಕೇಳಿರಬಹುದು.

ಅವರ ಬುದ್ಧಿವಂತಿಕೆಯ ಕೀರ್ತಿಯು ನಾಲ್ಕೂ ದಿಕ್ಕಿನಲ್ಲಿ ಹರಡಿತ್ತು. ಸ್ವಯಂ ರಾಜಾ ಭೋಜರು ಅನೇಕ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೊದಲು ಅವರ ಅಭಿಪ್ರಾಯವನ್ನು ಪಡೆದುಕೊಳ್ಳುತ್ತಿದ್ದರು. ಕಾಳಿದಾಸರು ಎಲ್ಲಾ ವಿದ್ವಾಂಸರನ್ನೂ ಗೌರವಿಸುತ್ತಿದ್ದರು. ಅವರು ವಿದ್ವಾಂಸರಿಗೆ ಅವರ ಯೋಗ್ಯತೆಗೆ ತಕ್ಕಂತೆ ಸಹಾಯ ಮಾಡುತ್ತಿದ್ದರು.

ಹೀಗೆ ಒಂದು ದಿನನಡೆದ ವಿಷಯವಿದು. ಓರ್ವ ಬಡ ಬ್ರಾಹ್ಮಣನು ಕಾಳಿದಾಸರ ಹತ್ತಿರ ಬಂದನು. ಅವನು ಕಾಳಿದಾಸರಿಗೆ ಸಮಾನವಾದ ಕವಿಯಾಗಿರಲಿಲ್ಲ. ಆದರೆ ಯೋಗ್ಯ-ಅಯೋಗ್ಯವನ್ನು ಅರಿಯುವವನಾಗಿದ್ದನು. ಸರಳ-ಸಾಮಾನ್ಯ, ಆದರೆ ಸನ್ಮಾರ್ಗದಲ್ಲಿ ನಡೆಯುವವನಾಗಿದ್ದನು. ಅವನು ರಾಜಾ ಭೋಜನ ಬಳಿ ಏನಾದರೂ ಸಹಾಯ ಸಿಗಬಹುದೆಂಬ ಆಸೆಯಿಂದ ಬಂದಿದ್ದನು. ಅವನು ಈ ಅಭಿಲಾಷೆಯೊಂದಿಗೆ ಧಾರಾನಗರವನ್ನು ಪ್ರವೇಶಿಸಿದನು.

ಕಾಳಿದಾಸರು ಅವನ ಸಂಪೂರ್ಣ ಸ್ಥಿತಿಯನ್ನು ಅರಿತುಕೊಂಡರು. ಅನಂತರ ಕಾಳಿದಾಸರು ಅವನನ್ನು  ‘ರಾಜಸಭೆಯಲ್ಲಿ ರಾಜನನ್ನು ಭೇಟಿಯಾಗಲು ಬರಿಗೈಯಲ್ಲಿ ಹೋಗುವುದಿಲ್ಲ. ರಾಜನಿಗೆ ನೀಡಲು ಏನಾದರೂ ಉಡುಗೊರೆಯನ್ನು ತಂದಿದ್ದೀರಾ?’ ಎಂದು ಕೇಳಿದರು. ಅದಕ್ಕೆ ಆ ಬಡ ಬ್ರಾಹ್ಮಣನು ‘ಕವಿರಾಜ, ನಾನಂತೂ ಕಡುಬಡವ ಹಾಗೂ ರಾಜನಿಗೆ ನೀಡಲು ನನ್ನ ಬಳಿ ಏನೂ ಇಲ್ಲ. ಆದರೆ ನನ್ನ ಮನೆಯ ಪಕ್ಕದಲ್ಲಿರುವ ರೈತನಿಂದ ಭಿಕ್ಷೆ ಬೇಡಿ ಸ್ವಲ್ಪ ಕಬ್ಬನ್ನು ತಂದಿದ್ದೇನೆ. ಅದನ್ನೇ ಅವರಿಗೆ ಕೊಡುತ್ತೇನೆ’ ಎಂದು ಹೇಳಿ ತಾನು ತಂದಿದ್ದ ಕಬ್ಬನ್ನು ತೋರಿಸಿದನು. ಅದಕ್ಕೆ ಕಾಳಿದಾಸರು ‘ಸರಿ ಹಾಗಾದರೆ, ನಾಳೆ ಆ ಕಬ್ಬನ್ನು ತೆಗೆದುಕೊಂಡು ದರಬಾರಿಗೆ ಬನ್ನಿ’ ಎಂದು ಹೇಳಿದರು.

ಬ್ರಾಹ್ಮಣನು ರಾತ್ರಿ ತಂಗಲು ಸ್ಥಳೀಯ ಧರ್ಮಶಾಲೆಯಲ್ಲಿ ಒಂದು ಜಾಗ ಹುಡುಕಿ, ರಾತ್ರಿ ಕಳೆದ ಮೇಲೆ ಬೆಳಗ್ಗೆ ಬೇಗ ಎದ್ದು ಸಂಧ್ಯಾದಿ ಕರ್ಮಗಳನ್ನು ಮಾಡಿ ರಾಜಸಭೆಗೆ ಹೋಗಲು ನಿಶ್ಚಯಿಸಿದನು. ಬಾಲಮಿತ್ರರೇ, ಎಲ್ಲಾ ಕಡೆಯಲ್ಲಿಯೂ ಸ್ವಲ್ಪ ಕೆಟ್ಟ ಜನರು ಇರುತ್ತಾರೆ ಎನ್ನುವುದು ನಿಮಗೆ ತಿಳಿದಿದೆ. ಅದೇ ರೀತಿ ಆ ಧರ್ಮಶಾಲೆಯಲ್ಲಿದ್ದ ಕೆಲವು ಕೆಟ್ಟ ಜನರು ಆ ಬಡಬ್ರಾಹ್ಮಣನ ಹತ್ತಿರವಿದ್ದ ಗಂಟಿನಲ್ಲಿ ಏನಿದೆ ಎಂದು ಅದನ್ನು ಕದ್ದು ನೋಡಿದರು. ಅದರಲ್ಲಿದ್ದ ಕಬ್ಬನ್ನು ತೆಗೆದುಕೊಂಡು ತಿಂದರು ಹಾಗೂ ಅಲ್ಲೇ ಒಲೆಯಿಂದ ಅರ್ಧ ಸುಟ್ಟಿದ್ದ ಕಟ್ಟಿಗೆಗಳನ್ನು ಆ ಗಂಟಿನೊಳಗೆ ಇಟ್ಟು ಮೊದಲಿನಂತೆ ಇಟ್ಟುಬಿಟ್ಟರು. ಇದರಿಂದ ಬ್ರಾಹ್ಮಣನು ಬೆಳಗ್ಗೆ ಎದ್ದು ನೋಡಿದಾಗ ಅವನಿಗೆ ತಾನು ರಾಜನಿಗೋಸ್ಕರ ತಂದಿದ್ದ ಕಬ್ಬನ್ನು ಯಾರೋ ಕದ್ದು ತಿಂದಿದ್ದಾರೆ ಎನ್ನುವುದು ಗೊತ್ತಾಗಲೇ ಇಲ್ಲ.

ಬ್ರಾಹ್ಮಣನು ಮುಂಜಾನೆ ಎದ್ದು ತನ್ನ ನಿತ್ಯ ಕರ್ಮಗಳನ್ನು ಮುಗಿಸಿ ರಾಜಸಭೆಯನ್ನು ತಲುಪಿದನು. ರಾಜನು ದರಬಾರಿನವರೊಂದಿಗೆ ಬಂದು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡನು. ಕಾಳಿದಾಸರು ಒಂದು ಪ್ರಮುಖ ಆಸನದ ಮೇಲೆ ಕುಳಿತುಕೊಂಡಿದ್ದರು. ಬೇರೆ ಗೌರವಾನ್ವಿತ ವ್ಯಕ್ತಿಗಳು ಕೂಡ ಅಲ್ಲಿ ಉಪಸ್ಥಿತರಿದ್ದರು.

ಬ್ರಾಹ್ಮಣನು ಸ್ವಲ್ಪ ಅಂಜಿಕೆಯಿಂದಲೇ ನಿಧಾನವಾಗಿ ಮುಂದೆ ಬಂದನು ಹಾಗೂ ರಾಜನಿಗೆ ಸಾದರ ಪ್ರಣಾಮಗಳನ್ನು ಸಲ್ಲಿಸಿದನು. ಅವನು ರಾಜನಿಗೆ ‘ಹೇ ಮಹಾರಾಜಾ, ರಾಜರು, ದೇವರು ಹಾಗೂ ಗುರುಗಳ ಬಳಿಗೆ ಬರಿಗೈಯಲ್ಲಿ ಹೋಗಬಾರದು ಎನ್ನುವುದನ್ನು ನಾನು ಕೇಳಿದ್ದೇನೆ. ಆದ್ದರಿಂದ ದಯವಿಟ್ಟು ನನ್ನ ಈ ತುಚ್ಛ ಕಾಣಿಕೆಯನ್ನು ಸ್ವೀಕರಿಸಿ’ ಎಂದು ಹೇಳಿ ಅವನು ತನ್ನ ಗಂಟನ್ನು ಬಿಚ್ಚಿದನು.

ಅವನು ತನ್ನ ಗಂಟನ್ನು ಬಿಚ್ಚಿದ ತಕ್ಷಣ ಅವನಿಗೆ ಕಬ್ಬಿನ ಬದಲಾಗಿ ಅಲ್ಲಿ ಅರ್ಧ ಸುಟ್ಟ ಕಟ್ಟಿಗೆಗಳು ಕಂಡವು ! ಬ್ರಾಹ್ಮಣನು ಗಾಬರಿಗೊಂಡನು. ಅವನ ಬಳಿ ಸ್ಪಷ್ಟೀಕರಣ ನೀಡಲು ಶಬ್ದಗಳೇ ಇರಲಿಲ್ಲ. ಅವನು ತುಂಬ ಗಾಬರಿಗೊಂಡನು. ಅವನಿಗೆ ಕಬ್ಬಿನ ಜಾಗದಲ್ಲಿ ಯಾರು ಆ ಸುಟ್ಟ ಕಟ್ಟಿಗೆಗಳನ್ನು ಇಟ್ಟಿದ್ದಾರೆ ಎನ್ನುವುದು ತಿಳಿಯಲಿಲ್ಲ. ಇದಂತೂ ರಾಜನ ಅವಮಾನವಾಗಿತ್ತು. ರಾಜ ದರಬಾರಿನಲ್ಲಿ ‘ಬ್ರಾಹ್ಮಣನನ್ನು ಶಿಕ್ಷಿಸಿ’ ಎಂಬ ಕೂಗು ಎದ್ದ ಕೇಳಿಸಿತು.

ಇಷ್ಟರವರೆಗೆ ಕವಿ ಕಾಳಿದಾಸರು ಸುಮ್ಮನೆ ಇದ್ದರು. ಅವರು ಬ್ರಾಹ್ಮಣನ ಪರಿಸ್ಥಿತಿಯನ್ನು ಅರಿತರು. ಅವರು ಎದ್ದುನಿಂತು ರಾಜದರಬಾರಿನಲ್ಲಿದ್ದ ಜನರನ್ನು ಸುಮ್ಮನಾಗಿಸಿದರು. ಮತ್ತು ರಾಜ ದರಬಾರನ್ನು ಸಂಬೋಧಿಸುತ್ತಾ ‘ಈ ಬ್ರಾಹ್ಮಣನು ಅಪರಾಧಿಯಲ್ಲ. ಅವನಂತೂ ಧರ್ಮ-ಕರ್ಮವನ್ನು ಅರಿಯುವವನಾಗಿದ್ದಾನೆ. ಆದರೆ ಅವನು ಬಡವ. ಇಂತಹ ಸುಖ ಸಮೃದ್ಧಿಯಿರುವ ರಾಜ್ಯದಲ್ಲಿ ತನ್ನ ಸ್ಥಿತಿ ಹೀಗಿರುವ ಬಗ್ಗೆ ಆ ಬಡ ಬ್ರಾಹ್ಮಣನು ಮಾತಿನಲ್ಲಿ ಹೇಗೆ ತಾನೆ ಹೇಳಬಹುದು. ಆ ಕಟ್ಟಿಗೆಗಳು ಅರ್ಧ ಸುಟ್ಟಿವೆ. ಇದರರ್ಥವೇನೆಂದರೆ, ಬಡತನವು ಅವನನ್ನು ಸಾಯಲೂ ಬಿಡುತ್ತಿಲ್ಲ ಹಾಗೂ ಸರಿಯಾಗಿ ಜೀವಿಸಲು ಆಗುತ್ತಿಲ್ಲ. ಅವನ ಈ ಅವಸ್ಥೆ ಬಹಳ ದಯನೀಯವಾಗಿದೆ! ಈ ಅರ್ಧ ಸುಟ್ಟುಹೋಗಿರುವ ಕಟ್ಟಿಗೆಯಿಂದ ಅವನ ಈ ಅವಸ್ಥೆ ಪ್ರಕಟವಾಗುತ್ತಿದೆ. ಆದ್ದರಿಂದ ರಾಜರು ಅವನಿಗೆ ಹಣವನ್ನು ನೀಡಿ ಅವನ ಎಲ್ಲ ಚಿಂತೆಯನ್ನೂ ದೂರಗೊಳಿಸಲಬೇಕಾಗಿ ವಿನಂತಿಸುತ್ತೇನೆ’ ಎಂದು ಹೇಳಿದನು. 

ಕಾಳಿದಾಸರ ಈ ಮಾತುಗಳನ್ನು ಕೇಳಿ ಸಂಪೂರ್ಣ ರಾಜ ದರಬಾರವು ಆಶ್ಚರ್ಯಗೊಂಡಿತು. ಯಾರೂ ಕೂಡ ಅವರ ಮಾತನ್ನು ಖಂಡಿಸಲಿಲ್ಲ. ಸ್ವತಃ ರಾಜಾ ಭೋಜರೂ ಕಾಳಿದಾಸರ ಈ ಮಾತನ್ನು ಕೇಳಿ ತಲೆದೂಗಿದರು. ಅವರು ಸ್ವರ್ಣ ಮುದ್ರೆಗಳನ್ನು ನೀಡಿ ಆ ಬ್ರಾಹ್ಮಣನನ್ನು ಗೌರವಿಸಿದರು. ಧನಹೀನ ಬ್ರಾಹ್ಮಣನು ಸ್ವರ್ಣಮುದ್ರೆಗಳಿಂದ ತುಂಬಿರುವ ಜೋಳಿಗೆಯನ್ನು ತೆಗೆದುಕೊಂಡು ಮರಳಿ ಊರಿಗೆ ಹೋದನು. ಹೊರಡುವ ಮುಂಚೆ ಅವನು ಕಾಳಿದಾಸರಿಗೆ ಕೃತಜ್ಞತೆಯನ್ನು ಅರ್ಪಿಸಿದನು.

ಕೃಪೆ: ಹಿಂದೂ ಜಾಗೃತಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!