ಬಿಜೆಪಿಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ; ಯತ್ನಾಳ್ ಬೆನ್ನಲ್ಲೆ ಡಿವಿಎಸ್ ಗುಟುರು

ಬೆಂಗಳೂರು, (ಡಿ.28); ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಕುರಿತು ಮಾಡಿರುವ ಆರೋಪ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಬೆನ್ನಲ್ಲೇ, ಅದೇ ಬಿಜೆಪಿಯ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರು ಪಕ್ಷದ ವರಿಷ್ಠರ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.

ಪಕ್ಷದ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಯಾರಾರಿಗೆ ಏನು ಹೇಳಬೇಕೋ ಅದನ್ನು ಹೇಳಿ ಹೋಗಬೇಕು. ಕೇಂದ್ರದಿಂದ ತಂಡವೊಂದು ಆಗಮಿಸಿ ಈಗ ಬೇಸರಗೊಂಡಿರುವ ಮುಖಂಡರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸೂಕ್ತ ವೇದಿಕೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಕ್ಷದಲ್ಲಿ ಸಮಾಲೋಚನೆಗೆ ಆದ್ಯತೆ ನೀಡಬೇಕಾಗಿದೆ. ಆದರೆ, ಕರ್ನಾಟಕಲ್ಲಿ ಬಿಜೆಪಿಗೆ ಹೇಳುವವರು ಕೇಳುವವರು ಯಾರೂ ಇಲ್ಲ. ಸರ್ವಾಧಿಕಾರಿ ಮನೋಭಾವ ಬಿಜೆಪಿಯಲ್ಲಿ ಬಂದಿದೆ ಎಂದು ಕಾರ್ಯಕರ್ತರು ಮಾತನಾಡುತ್ತಿದ್ದಾರೆ. ಹೀಗಾಗಿ ಸರ್ವಾಧಿಕಾರಿ ಧೋರಣೆ ದೂರ ಆಗಬೇಕು ಎಂದೂ ಅವರು ತೀಕ್ಷ್ಮವಾಗಿ ಹೇಳಿದ್ದಾರೆ.

ಬುಧವಾರ ತುರ್ತು ಪತ್ರಿಕಾ ಗೋಷ್ಠಿ ನಡೆಸಿದ ಅವರು, ತುಂಬಾ ಬೇಸರದಿಂದ ಈ ಪತ್ರಿಕಾಗೋಷ್ಠಿ ಮಾಡುತ್ತಿದ್ದೇನೆ. ಬಿಜೆಪಿ ಹಿತ ದೃಷ್ಟಿಯಿಂದ ಮಾಡುತ್ತಿದ್ದೇನೆ. ಅನಿವಾರ್ಯ ಸಮಯದಲ್ಲಿ ಇಂಥ ಪತ್ರಿಕಾಗೋಷ್ಠಿ ಅವಶ್ಯಕತೆ ಇದೆ ಎಂದು ಸಮರ್ಥಿಸಿಕೊಂಡರು.

ಪಕ್ಷದಲ್ಲಿ ಕೆಲವೊಂದು ತೀರ್ಮಾನಗಳು ಏಕಪಕ್ಷೀಯವಾಗಿ ನಡೆಯುತ್ತಿವೆ. ಇದು ಸರಿಯಲ್ಲ ಕ್ರಮವಲ್ಲ. ಸಮಾಲೋಚನೆ ನಡೆಸಬೇಕಾಗಿದೆ. ಪಕ್ಷದ ಕೆಲವರಿಗೆ ಚರ್ಚೆ ಮಾಡದೆ ತೀರ್ಮಾನಗಳನ್ನು ತೆಗೆದುಕೊಳ್ಳಲಾ ಗುತ್ತಿದೆ ಎಂಬ ಭಾವನೆ ಬಂದಿದೆ. ಇದನ್ನು ಹೋಗಲಾಡಿಸಬೇಕಾಗಿದೆ.

ಸರ್ವಾಧಿಕಾರಿ ಧೋರಣೆ ಅನುಸರಿಸಿದರೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಎಂತಹ ಸನ್ನಿವೇಶಗಳನ್ನು ಎದುರಿಸಿದರು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಆಸ್ಪದ ನೀಡಬಾರದು ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಘಟಕ ರಚನೆಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ, ಪದಾಧಿಕಾರಿಗಳ ನೇಮಕ ಎಲ್ಲವೂ ನಡೆದಿದೆ. ಆದರೂ ಪಕ್ಷದ ಆಂತರಿಕ ವ್ಯವಸ್ಥೆ ಸರಿಹೋಗಿಲ್ಲ. ಡಜನ್‌ಗಟ್ಟಲೇ ವ್ಯಕ್ತಿಗಳು ಪಕ್ಷದ ಪ್ರಮುಖ ಸ್ಥಾನದಲ್ಲಿರುವವರ ಕುರಿತು ನಿರಂತವಾಗಿ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಪಕ್ಷದ ಪ್ರಮುಖರು ಯಾರೂ ಪ್ರಶ್ನಿಸುತ್ತಿಲ್ಲ. ಚುನಾವಣೆಯಲ್ಲಿ ಹೊಂದಾಣಿಕೆ ಆಗಿದೆ ಎನ್ನುವ ಆರೋಪದ ಬಗ್ಗೆಯೂ ಚರ್ಚೆ ಆಗಬೇಕಿತ್ತು. ಅದು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮನಬಂದಂತೆ ಹೇಳಿಕೆ ನೀಡುತ್ತಿರುವುದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯತೆ ಇದೆ. ಇದಕ್ಕಾಗಿ ಕೇಂದ್ರದ ತಂಡದವರು ರಾಜ್ಯಕ್ಕೆ ಆಗಮಿಸಿ ಅಸಮಾಧಾನಿತರ ಅಭಿಪ್ರಾಯಗಳನ್ನು ಕೇಳಲುವೇದಿಕೆಕಲ್ಪಿಸಬೇಕು. ಈ ಬಗ್ಗೆ ರಾಜ್ಯಾಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಗುರುವಾರದ ಪಕ್ಷದ ಪ್ರಮುಖರ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದಲ್ಲಿನ ಬೆಳವಣಿಗೆ ಕುರಿತು ಪ್ರಸ್ತಾಪಿಸಲಾಗುವುದು. ವಿಭಜಿತ ಬಿಜೆಪಿಗೆ ಜನರು ಆಶೀರ್ವಾದ ಮಾಡುವುದಿಲ್ಲ. ಪಕ್ಷದಲ್ಲಿ ಅಶಿಸ್ತು ಮೂಡಿದರೆ ಅದು ಕೆಳಹಂತದಲ್ಲಿ ಪರಿಣಾಮ ಬೀರಲಿದೆ. ಕಾರ್ಯಕರ್ತರಿಗೆ ಕಷ್ಟವಾಗಲಿದ್ದು, ಎದುರಾಳಿಗೆ ತಕ್ಕ ಉತ್ತರ ನೀಡಲಾಗುವುದಿಲ್ಲ. ಪಕ್ಷದ ಪ್ರಮುಖರುಸರ್ವಾಧಿಕಾರಿ ಧೋರಣೆ ಅನುಸರಿಸಿದರೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಎಂತಹ ಸನ್ನಿವೇಶಗಳನ್ನು ಎದುರಿಸಿದರು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಆಸ್ಪದ ನೀಡಬಾರದು ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಘಟಕ ರಚನೆಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ, ಪದಾಧಿಕಾರಿಗಳ ನೇಮಕ ಎಲ್ಲವೂ ನಡೆದಿದೆ. ಆದರೂ ಪಕ್ಷದ ಆಂತರಿಕ ವ್ಯವಸ್ಥೆ ಸರಿಹೋಗಿಲ್ಲ. ಡಜನ್‌ಗಟ್ಟಲೇ ವ್ಯಕ್ತಿಗಳು ಪಕ್ಷದ ಪ್ರಮುಖ ಸ್ಥಾನದಲ್ಲಿರುವವರ ಕುರಿತು ನಿರಂತವಾಗಿ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಪಕ್ಷದ ಪ್ರಮುಖರು ಯಾರೂ ಪ್ರಶ್ನಿಸುತ್ತಿಲ್ಲ. ಚುನಾವಣೆಯಲ್ಲಿ ಹೊಂದಾಣಿಕೆ ಆಗಿದೆ ಎನ್ನುವ ಆರೋಪದ ಬಗ್ಗೆಯೂ ಚರ್ಚೆ ಆಗಬೇಕಿತ್ತು. ಅದು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮನಬಂದಂತೆ ಹೇಳಿಕೆ ನೀಡುತ್ತಿರುವುದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯತೆ ಇದೆ. ಇದಕ್ಕಾಗಿ ಕೇಂದ್ರದ ತಂಡದವರು ರಾಜ್ಯಕ್ಕೆ ಆಗಮಿಸಿ ಅಸಮಾಧಾನಿತರ ಅಭಿಪ್ರಾಯಗಳನ್ನು ಕೇಳಲುವೇದಿಕೆಕಲ್ಪಿಸಬೇಕು. ಈ ಬಗ್ಗೆ ರಾಜ್ಯಾಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಗುರುವಾರದ ಪಕ್ಷದ ಪ್ರಮುಖರ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದಲ್ಲಿನ ಬೆಳವಣಿಗೆ ಕುರಿತು ಪ್ರಸ್ತಾಪಿಸಲಾಗುವುದು. ವಿಭಜಿತ ಬಿಜೆಪಿಗೆ ಜನರು ಆಶೀರ್ವಾದ ಮಾಡುವುದಿಲ್ಲ. ಪಕ್ಷದಲ್ಲಿ ಅಶಿಸ್ತು ಮೂಡಿದರೆ ಅದು ಕೆಳಹಂತದಲ್ಲಿ ಪರಿಣಾಮ ಬೀರಲಿದೆ. ಕಾರ್ಯಕರ್ತರಿಗೆ ಕಷ್ಟವಾಗಲಿದ್ದು, ಎದುರಾಳಿಗೆ ತಕ್ಕ ಉತ್ತರ ನೀಡಲಾಗುವುದಿಲ್ಲ. ಪಕ್ಷದ ಪ್ರಮುಖರು ಸುಮ್ಮನೆ ಕುಳಿತರೆ ಅದು ಬಂಡಾಯ ಮಾಡಲು ಬೇರೆಯವರಿಗೆ ಪ್ರೇರಣೆಯಾಗಲಿದೆ. ಹೀಗಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೆಲವರು ಮಾಧ್ಯಮದ ಮೂಲಕ ಹೇಳಿಕೆಗಳನ್ನು ನೀಡಿ ತಾವೇ ನಾಯಕರು ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಮನಬಂದಂತೆ ಹೇಳಿಕೆ ನೀಡುವವರ ವಿರುದ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್‌ನ ಆಡಳಿತವು ಸಂಪೂರ್ಣ ವಿಫಲಗೊಂಡಿದೆ. ಇದರ ವಿರುದ್ಧ ಬಿಜೆಪಿಯಲ್ಲಿ ಒಂದೇ ಧ್ವನಿಯಲ್ಲಿ ಹೋರಾಟ ನಡೆಸಿದರೆ ಮನೆಯಿಂದ ಹೊರಬರಲು ಸಚಿವರಿಗೆ ನಡುಕ ಉಂಟಾಗುತ್ತದೆ. ಅಶಿಸ್ತು ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಅವರ ವಿರುದ್ಧ ಕಾರ್ಯಾಚರಣೆ ಮಾಡುವ ತಾಕತ್ತೇ ಇಲ್ಲ ಎಂಬ ವ್ಯವಸ್ಥೆ ಬಿಂಬಿಸಲಾಗುತ್ತದೆ. ಇದು ಪಕ್ಷದ ಮೇಲೆ ದೊಡ್ಡಮಟ್ಟದಲ್ಲಿ ಪರಿಣಾಮ ಬೀರಲಿದೆ ಎಂದು ತಿಳಿಸಿದರು.

ಸುಳ್ಯ ವಿಧಾನಸಭಾ ಕ್ಷೇತ್ರ ಸಂಘಟನೆ ಬಲವಾಗಿರುವ ಕ್ಷೇತ್ರ. ನಾನು ಅಲ್ಲಿ ಕಾರ್ಯಕ್ರಮವೊಂದರ ನಿಮಿತ್ತ ಹೋಗಿದ್ದೆ. ಅಲ್ಲಿದ್ದ ಕಾರ್ಯಕರ್ತರ ದಂಡು ಬಿಜೆಪಿ ಪರಿಸ್ಥಿತಿ ಇಂದು ಹೇಗಾಗಿದೆ? ಬಿಜೆಪಿ ಹೊಸ ಘಟಕ ಆಗಿದೆ. ಪದಾಧಿಕಾರಿಗಳ ಪಟ್ಟಿ ಕೂಡ ಆಗಿದೆ. ಆದರೆ ಪಾರ್ಟಿಯ ಆಂತರಿಕ ವ್ಯವಸ್ಥೆ ಸರಿ ಯಾಕೆ ಸರಿ ಆಗುತ್ತಿಲ್ಲ ಎಂದು ಪ್ರಶ್ನಿಸಿದರು. 

ಪಕ್ಷದಲ್ಲಿ ಜವಾಬ್ದಾರಿ ಇರುವ ನಾಯಕರು ಮಾತಾಡುತ್ತಿದ್ದಾರೆ. ಇದರ ಬಗ್ಗೆ ಹೈಕಮಾಂಡ್ ಯಾಕೆ ಮಾತಾಡುತ್ತಿಲ್ಲ. ಇದರಿಂದ ಕಾರ್ಯಕರ್ತರು ಮಾತನಾಡುವುದಕ್ಕೆ ಆಗುತ್ತಿಲ್ಲ. ಬಿಜೆಪಿಯನ್ನು ಕುಲಗೆಡಿಸುವುದಕ್ಕೆ ಬೇರೆ ಪಕ್ಷದಿಂದ ಸಾಧ್ಯವಿಲ್ಲ. ಹತ್ತು ಹಲವು ಪಕ್ಷ ವಿರೋಧ ಮಾಡುತ್ತಿರುವವರೇ ಸಾಕು ಎಂದು ಗೌಡರು ಮಾರ್ಮಿಕವಾಗಿ ಹೇಳಿದರು.

ನಾನು ಯಾರ ಹೆಸರರನ್ನೂ ಹೇಳುವುದಿಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ಆದ ಮೇಲೂ ಸರಿಯಾಗಿಲ್ಲ. ಕೇಂದ್ರ ನಾಯಕರು ಕೂಡ ಸುಮ್ಮನೆ ಕುಳಿತಿದ್ದಾರೆ. ಕೇಂದ್ರ ನಾಯಕರು ನಿಮ್ಮನ್ನೆಲ್ಲ ಕೂರಿಸಿ ಮಾತನಾಡಿದ್ದಾರಾ ಎಂದು ಕಾರ್ಯಕರ್ತರು ಕೇಳುತ್ತಾರೆ. ಹೊಸ ತಂಡ ಮಾಡುವಾಗ ನಿಮ್ಮ ಜೊತೆ ಸಮಾಲೋಚನೆ ಮಾಡಬೇಕಿತ್ತು ಎಂದಿದ್ದಾರೆ. ಅದೆಲ್ಲಾ ಆಗಿಲ್ಲ. ನನಗೆ ತೀರಾ ನೋವಾಗುತ್ತದೆ. ಇನ್ನೂ ಕೂಡ ಕೇಂದ್ರದ ನಾಯಕರು ಮಾತನಾಡುತ್ತಿಲ್ಲ ಎಂದರು. 

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸದಾನಂದಗೌಡರು, ಯತ್ನಾಳ್ ಅವರನ್ನು ಹಿಂದೆ ಅಮಾನತುಮಾಡಿದ್ದೇವೆ. ಆದರೆ ಯಡಿಯೂರಪ್ಪ ಒತ್ತಡದಿಂದ ಮತ್ತೆ ಸೇರಿಸಿಕೊಂಡಿದ್ದೇವೆ. ಅದಕ್ಕಾಗಿ ಈಗ ಅನುಭವಿಸುತ್ತಿದ್ದೇವೆ ಎಂದು ತಿಳಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!