ನವದೆಹಲಿ, (ಜ.08): ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳಿಂದ ಭಾರತ ವಿರೋಧಿ ಹೇಳಿಕೆ ವಿರುದ್ಧ ಭಾರತದ ಕ್ರಿಕೆಟ್ ಹಾಗೂ ಬಾಲಿವುಡ್ ಸ್ಟಾರ್ ಗಳು ಕಿಡಿಕಾರಿದ್ದಾರೆ. ಅಂತೆಯೇ ಮಾಜಿ ಟೀಂ ಇಂಡಿಯಾ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್, ಭಾರತ ಮತ್ತು ಪ್ರಧಾನಿ ಮೋದಿ ವಿರುದ್ಧ ಅನಗತ್ಯ ಹೇಳಿಕೆ ಹಿನ್ನೆಲೆಯಲ್ಲಿ ಉಡುಪಿ, ಅಂಡಮಾನ್ ಬೀಚ್ ಮತ್ತಿತರ ಸುಂದರ ಬೀಚ್ ಗಳ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಮೂಲಭೂತ ಸೌಕರ್ಯಗಳ ಒದಗಿಸಿ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಡುಪಿಯ ಮರವಂತೆ, ಪೊಂಡಿಯ ಪ್ಯಾರಡೈಸ್, ಅಂಡಮಾನ್ನ ನೀಲ್ ಮತ್ತು ಹ್ಯಾವ್ಲಾಕ್ ಬೀಚ್ ಗಳ ಫೋಟೋಗಳನ್ನು ಹಂಚಿಕೊಂಡಿರುವ ಸೆಹ್ವಾಗ್, ದೇಶದಲ್ಲಿ ಅನ್ವೇಷಿಸದ ಹಲವಾರು ಸ್ಥಳಗಳಿದ್ದು, ಮೂಲಸೌಕರ್ಯ ಒದಗಿಸುವುದರೊಂದಿಗೆ ಅವುಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಇದರಿಂದ ನಮ್ಮ ಆರ್ಥಿಕತೆಯನ್ನು ಹೆಚ್ಚುತ್ತದೆ ಎಂದಿದ್ದಾರೆ.
ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಇದು ತುಂಬಾ ಪ್ರಸ್ತುತವಾಗಿದೆ ಮತ್ತು ನಮ್ಮದೇ ಅತ್ಯಂತ ಉತ್ತಮವಾಗಿದೆ. ಲಕ್ಷದ್ವೀಪ ಮತ್ತು ಅಂಡಮಾನ್ಗಳಿಗೆ ಹೋಗಿದ್ದು, ಅವುಗಳು ಆಶ್ಚರ್ಯಕರವಾದ ಸುಂದರವಾದ ಸ್ಥಳಗಳಾಗಿವೆ. ಬೆರಗುಗೊಳಿಸುವ ಕಡಲತೀರಗಳು ಮತ್ತು ನೀರೊಳಗಿನ ಅನುಭವವು ನಂಬಲಾಗದದು ಎಂದಿದ್ದಾರೆ.
ಸ್ವದೇಶಿ ಬೀಚ್ ಗಳ ಅಭಿವೃದ್ಧಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಯುತ್ತಿದ್ದು, ಸಚಿನ್ ತೆಂಡೊಲ್ಕರ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಮತ್ತಿತರರು ಕೈ ಜೋಡಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….