ಕೇಂದ್ರದ ತೆರಿಗೆ ತಾರತಮ್ಯದ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ನೀಡಿದ ಬಜೆಟ್ : ಬಿಜೆಪಿ ಪ್ರತಿಭಟನೆ ಪಲಾಯನವಾದದ ಪ್ರತೀಕ – ಎಂ.ಎಸ್. ರಕ್ಷಾ ರಾಮಯ್ಯ

ಬೆಂಗಳೂರು, (ಫೆ, 16); ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 15 ನೇ ದಾಖಲೆಯ ಬಜೆಟ್ ರಾಜ್ಯಕ್ಕೆ ಕೇಂದ್ರದಿಂದ ಉಂಟಾಗಿರುವ ತೆರಿಗೆ ಹಂಚಿಕೆ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿಯಾಗಿದೆ. ಕರ್ನಾಟಕದ ಏಳು ಕೋಟಿ ಜನರಿಗೆ ಕೇಂದ್ರದ ತಾರತಮ್ಯದ ವಿರುದ್ಧ ಹೋರಾಟ ಮಾಡಲು ಶಕ್ತಿ ನೀಡಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. 

2024 – 25 ನೇ ಸಾಲಿನ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರದ ವಿರುದ್ಧ ಹೋರಾಟ ಮಾಡಿದ ನಂತರ ಬಿಜೆಪಿಯ ಜಂಘಾಬಲ ಉಡಗಿ ಹೋಗಿದೆ. ರಾಜ್ಯ ಬಿಜೆಪಿ ನಾಯಕರು ಬಜೆಟ್ ಭಾಷಣದ ಕಲಾಪದಿಂದ ದೂರ ಸರಿದು ಪ್ರತಿಭಟನೆ ಮಾಡುವ ಹಂತಕ್ಕೆ ತಲುಪಿರುವುದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ.

ಬಜೆಟ್ ಅಂಕಿ ಅಂಶಗಳ ಕುರಿತು ವಿಧಾನಮಂಡದಲ್ಲಿ ಚರ್ಚೆ ಮಾಡುವ ಬದಲು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ ಘೋಷಣೆ ಕೂಗಿರುವುದನ್ನು ನೋಡಿದರೆ ಇವರಿಗೆ ಸಂಸದೀಯ ಪ್ರಜಾತಂತ್ರ ವ್ಯವಸ್ಥೆಯ ಬಗ್ಗೆ ಕಾಳಜಿ ಇಲ್ಲ. ಇದು ಬಿಜೆಪಿ ನಾಯಕರ ಪಲಾಯನವಾದವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. 

ಡಬಲ್‌ ಇಂಜಿನ್‌ ಎಂದು ಹೇಳಿಕೊಳ್ಳುತ್ತಿದ್ದ ಹಿಂದಿನ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರಾಜ್ಯಕ್ಕೆ 11,495 ಕೋಟಿ ರೂ.ಗಳ ವಿಶೇಷ ಅನುದಾನ ಕೈತಪ್ಪಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದ ಹಿತ ರಕ್ಷಣೆ ಮಾಡುವಲ್ಲಿ ವಿಫಲವಾಗಿದ್ದು, ತನ್ನ ಅಸಮರ್ಥತೆಯನ್ನು ಪ್ರದರ್ಶಿಸಿದೆ.

ತೆರಿಗೆ ಹಂಚಿಕೆಯಲ್ಲಿ ಉತ್ತರ ಭಾರತದ ಹಿಂದಿ ಭಾಷಿಕ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡಿ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವುದು ಬಜೆಟ್ ಅಂಕಿ ಅಂಶಗಳು ಸಾಬೀತುಪಡಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ಪ್ರಜಾತಂತ್ರ ಮಾರ್ಗದಲ್ಲಿ ಅಂಕಿ ಅಂಶಗಳೊಂದಿಗೆ ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸುವುದಾಗಿ ಘೋಷಿಸಿದ್ದು, ರಾಜ್ಯದ ತನ್ನ ಪಾಲು ಪಡೆಯುವ ನಿಟ್ಟಿನಲ್ಲಿ ಅವರು ಇಟ್ಟಿರುವ ಮಹತ್ವದ ಹೆಜ್ಜೆ ಎಂದು ಎಂ.ಎಸ್. ರಕ್ಷಾ ರಾಮಯ್ಯ ಬಣ್ಣಿಸಿದ್ದಾರೆ. 

ಸಿದ್ದರಾಮಯ್ಯ ದೇಶದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳ ಸಾಲಿನಲ್ಲಿ ಮೊದಲಿಗರಾಗಿದ್ದಾರೆ. ಪ್ರತಿಯೊಂದು ಬಜೆಟ್ ನಲ್ಲೂ ಅವರು ಪಕ್ವತೆಯನ್ನು ಕಾಯ್ದುಕೊಂಡು ಬರುತ್ತಿದ್ದು, ಹಿಂದಿನ 14 ಬಜೆಟ್ ಗಳಿಗೆ ಹೋಲಿಸಿದರೆ ಈ ಬಜೆಟ್ ಅತ್ಯಂತ ದಿಟ್ಟತನದಿಂದ ಕೂಡಿದೆ. “ನಮ್ಮ ತೆರಿಗೆ – ನಮ್ಮ ಹಕ್ಕು” ಹೋರಾಟಕ್ಕೆ ಈ ಬಜೆಟ್ ಮತ್ತೊಂದು ಹೊಸ ಆಯಾಮ ನೀಡಿದೆ ಎಂದು ಎಂದರು. 

ರಾಜ್ಯದ ಎಲ್ಲಾ ಭಾಗಗಳು, ಎಲ್ಲಾ ಜನಾಂಗಗಳಿಗೆ ಆದ್ಯತೆ ನೀಡಲಾಗಿದೆ. ಹಿಂದುಳಿದ ಜನಾಂಗದ ಶ್ರೇಯೋಭಿವೃದ್ಧಿ, ಶಿಕ್ಷಣ, ಕೃಷಿ, ಆರೋಗ್ಯ ಕ್ಷೇತ್ರಗಳಿಗೆ ಮುಖ್ಯಮಂತ್ರಿಯವರು ವಿಶೇಷ ಒತ್ತು ನೀಡಿದ್ದಾರೆ. ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ, ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಅನುಷ್ಠಾನಕ್ಕೆ ಆದ್ಯತೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಮುನ್ನೋಟ ನೀಡುವ ಬಜೆಟ್ ಇದಾಗಿದೆ. 

ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್‌ ಅಲ್ಲ ಎಂಬುದನ್ನು ಬಜೆಟ್ ನಿರೂಪಿಸಿದೆ. ಐದು ಗ್ಯಾರಂಟಿಗಳ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುವಂತಾಗಿದೆ. ಬಿಜೆಪಿ ನಾಯಕರ ಹಸಿ ಸುಳ್ಳುಗಳಿಗೆ ಮುಖ್ಯಮಂತ್ರಿಯವರು ತಕ್ಕ ಉತ್ತರ ನೀಡಿದ್ದಾರೆ  ಎಂದು ಎಸ್. ರಕ್ಷಾ ರಾಮಯ್ಯ ವಿಶ್ಲೇಷಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!