ಅಡ್ವಾಣಿಯಂತೆ ಯೋಗಿಗೂ ಅನ್ಯಾಯ‌ ಮಾಡ್ತಾರೆ.. ಬಿಜೆಪಿ ಗೆದ್ದರೆ ಮುಂದಿನ ಪ್ರಧಾನಿ ಅಮಿತ್ ಶಾ; ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭವಿಷ್ಯ

ನವದೆಹಲಿ, (ಮೇ.11); ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭರ್ಜರಿ ಆಕ್ಟಿವ್ ಆಗಿದ್ದು, ಅವರ ಪ್ರಶ್ನೆಗಳಿಗೆ ಬಿಜೆಪಿ ಒಳಗೆ ತಳಮಳವನ್ನು ಉಂಟು ಮಾಡಿದೆ.

ದೆಹಲಿಯಲ್ಲಿ ಹನುಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಅಧಿಕಾರಕ್ಕೆ ಬಂದರೆ ಮುಂದಿನ ಪ್ರಧಾನಿ ಅಮಿತ್ ಶಾ ಎಂದು ಭವಿಷ್ಯ ನುಡಿದು ಬಿಜೆಪಿಯಲ್ಲಿದ್ದ ಬಾಂಬ್ ಸ್ಪೋಟಿಸಿದ್ದಾರೆ.

ಬಿಜೆಪಿಯ ಉದ್ದೇಶ ಒಂದು ರಾಷ್ಟ್ರ ಒಬ್ಬ ನಾಯಕ ವ್ಯವಸ್ಥೆಯನ್ನು ತರುವುದು. ಹೀಗಾಗಿಯೇ ವಿಪಕ್ಷಗಳ ನಾಯಕರನ್ನು ಟಾರ್ಗೆಟ್ ಮಾಡಿ ಜೈಲಿಗೆ ಕಳುಹಿಸಲಾಗುತ್ತಿದೆ.

ನನ್ನನ್ನು ಜೈಲಿಗೆ ಕಳುಹಿಸಿ ಪ್ರಧಾನಿ ಮೋದಿ ಯಾವುದೇ ಅಪರಾಧವಿಲ್ಲದಿದ್ದರೂ ತಾನು ಯಾರನ್ನು ಬೇಕಾದರೂ ಜೈಲಿಗೆ ಕಳುಹಿಸುವ ತಾಕತ್ತು ಹೊಂದಿದ್ದೇನೆ ಎಂದು ಸಮಾಜಕ್ಕೆ ಸಂದೇಶ ನೀಡಿದ್ದಾರೆ. ಮುಂದೆ ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್, ಉದ್ಧವ್ ಠಾಕ್ರೆ ಎಲ್ಲರೂ ಮೋದಿ ಲಿಸ್ಟ್‌ನಲ್ಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.

ಮುಂದಿನ ಪ್ರಧಾನಿ ಅಮಿತ್ ಶಾ!; ವಿಪಕ್ಷಗಳ ನಾಯಕರನ್ನು ಮಾತ್ರವಲ್ಲ ತನ್ನದೇ ಪಕ್ಷದ ನಾಯಕರನ್ನೂ ತುಳಿಯುತ್ತಿದೆ. ಬಿಜೆಪಿ ಸರ್ಕಾರ ಅಡ್ವಾಣಿ, ಸುಮಿತ್ರಾ ಮಹಾಜನ್, ಶಿವರಾಜ್ ಸಿಂಗ್ ಚೌಹಾಣ್, ಮುರಳಿ ಮನೋಹರ್ ಜೋಶಿ ಹೀಗೆ ಅನೇಕರ ರಾಜಕೀಯ ಭವಿಷ್ಯವನ್ನು ಹಾಳು ಮಾಡಿದೆ.

ಅವರ ಮುಂದಿನ ಟಾರ್ಗೆಟ್ ಯೋಗಿ ಆದಿತ್ಯನಾಥ್. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಎರಡು ತಿಂಗಳ ಒಳಗೆ ಸಿಎಂ ಸ್ಥಾನದಿಂದ ಕೆಳಗಿಳಿಸುತ್ತಾರೆ, ಮೋದಿ ಗೆಳೆಯ ಅಮಿತ್ ಶಾ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಕೇಜ್ರಿವಾಲ್ ಭವಿಷ್ಯ ನುಡಿದು ಬಿಜೆಪಿಯಲ್ಲಿ ಚರ್ಚೆಯನ್ನು ಉಂಟು ಮಾಡಿದ್ದಾರೆ.

ಪ್ರಧಾನಿ ಮೋದಿ ಅವರೇ ಭ್ರಷ್ಟಾಚಾರದ ವಿರುದ್ಧ ಹೋರಾಟ ಹೇಗೆ ನಡೆಸಬೇಕು ಎಂಬುದನ್ನು ನನ್ನಿಂದ ಕಲಿಯಿರಿ ಎಂದ ಕೇಜ್ರಿವಾಲ್, ನನ್ನದೇ ಪಕ್ಷದ ಒಬ್ಬ ಮಂತ್ರಿ ಲಂಚ ಪಡೆದಿದ್ದಾರೆ ಎಂದು ಮಾಹಿತಿ ಬಂದ ತಕ್ಷಣ ಆತನನ್ನು ಸಿಬಿಐಗೆ ಒಪ್ಪಿಸಿ ಜೈಲಿಗೆ ಕಳುಹಿಸಿದ್ದೆ. ಪಂಜಾಬ್‌ನಲ್ಲಿ ಒಬ್ಬ ಭ್ರಷ್ಟಾಚಾರ ನಡೆಸಿದ ಮಾಹಿತಿ ಬಂತು ಅಲ್ಲಿನ ಸಿಎಂ ತಕ್ಷಣ ಆತನನ್ನ ಜೈಲಿಗೆ ಕಳುಹಿಸಿದ್ದರು. ಹೋರಾಟ ಹೇಗೆ ನಡೆಸಬೇಕು ಎಂದು ಕಲಿಯಿರಿ. ಪ್ರಧಾನಿ ಮೋದಿ ಎಲ್ಲಾ ಕಳ್ಳರನ್ನು ಪಕ್ಷಕ್ಕೆ ಸೇರಿಸಿಕೊಂಡು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಅಂತಾರೆ ಎಂದು ಲೇವಡಿ‌ ಮಾಡಿದರು.

ಪ್ರಧಾನಿ ಮೋದಿ 10 ವರ್ಷ ಹಳೆಯ ಸಣ್ಣ ಪಕ್ಷವನ್ನು ನಾಶ ಮಾಡಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ನನ್ನನ್ನು ಸೇರಿಸಿ 4 ಮುಖಂಡರನ್ನು ಜೈಲಿಗೆ ಕಳಿಹಿಸಿ ಆಗಿದೆ ಈ ಮೂಲಕ ಪಕ್ಷ ಮುಗಿದು ಹೋಗುತ್ತೇ ಎಂದು ಪ್ರಧಾನಿ ಎನಿಸಿದ್ದರು ಆದರೆ ಆಮ್ ಆದ್ಮಿ ಒಂದು ಪಕ್ಷವಲ್ಲ ಯೋಚನೆ, ಕೆಣಕಿದಷ್ಟು ದೊಡ್ಡದಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!