ರೈತರ ಬರ ಪರಿಹಾರ ಹಣ ಬ್ಯಾಂಕ್ ಸಾಲಕ್ಕೆ ಜಮೆ ಆಗುತ್ತಿದೆ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು, (ಮೇ.20): ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಹಲವು ಇಲಾಖೆಗಳಲ್ಲಿ ವೇತನ ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಕಳೆದ ಒಂದು ವರ್ಷದಲ್ಲಿ ಎಷ್ಟು ಮಂತ್ರಿಗಳು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಸಮಸ್ಯೆಗಳ ಬಗ್ಗೆ ಏನು ಸೂಚನೆಗಳನ್ನು ಕೊಟ್ಟಿದ್ದಾರೆ. ಜನರ ಕಷ್ಟಗಳನ್ನು ಬಗೆಹರಿಸಿದ್ದಾರೆಯೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಸಭೆ ನಡೆಸಿ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದ್ದರು. ಆದರೆ, ಜನರ ಕೆಲಸಗಳು ಏನಾಗಿವೆ? ಅಭಿವೃದ್ಧಿ ಕೆಲಸಗಳು ಎಲ್ಲಾದರೂ ಆಗಿವೆಯೇ? ಕೇವಲ ಗ್ಯಾರಂಟೀಗಳ ಹೆಸರು ಹೇಳಿಕೊಂಡು ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ರಾಜ್ಯದ ನೀರಾವರಿ ಯೋಜನೆಗಳ ಪರಿಸ್ಥಿತಿ ಏನಾಗಿದೆ? ರಸ್ತೆಯ ಪರಿಸ್ಥಿತಿ ಹೇಗಾಗಿದೆ? ಕಳೆದ ಒಂದು ವರ್ಷದಿಂದ ಬ್ರ್ಯಾಂಡ್ ಬೆಂಗಳೂರು ಏನಾಗಿದೆ? ಮಳೆ ಬಂದು ಬೆಂಗಳೂರಿನ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಈಗ ಕಣ್ಣಾರೆ ನೋಡುತ್ತಿದ್ದೇವೆ. ಎರಡು ದಿನ ಸುರಿದ ಮಳೆಗೆ ಬೆಂಗಳೂರು ಜನರು ನರಕ ನೋಡುತ್ತಿದ್ದಾರೆ. ಮನೆಗಳಿಗೆ ಬೀಗ ಹಾಕಿ ಹೋಟೆಲ್ ಗೆ ಹೋಗಿ ಜೀವನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಅತ್ಯಂತ ಮೌಲ್ಯವಾದ ದಿನಗಳನ್ನು ನಾವು ಒಂದು ವರ್ಷದಲ್ಲಿ ಕಳೆದುಕೊಂಡಿದ್ದೇವೆ. ರಾಜ್ಯದ ಅಭಿವೃದ್ಧಿ ಹಿಮ್ಮುಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

35,471  ಕಡತಗಳು ವಿಲೇವಾರಿ ಬಾಕಿ: ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇಲಾಖೆಗಳ ಕೆಲಸ ನೋಡಿದರೆ ಅರ್ಥ ಆಗುತ್ತದೆ. ಎಂಟು ಪ್ರಮುಖ ಇಲಾಖೆಗಳಲ್ಲಿ 35,471  ಕಡತಗಳು ವಿಲೇವಾರಿ ಆಗಿಲ್ಲ ಎಂಬ ವರದಿಯನ್ನು ಓದಿದೆ. ಇದು ಸರ್ಕಾರದ ಸಾಧನೆಯೇ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮಾಜಿ ಮುಖ್ಯಮಂತ್ರಿಗಳು.

ವರ್ಗಾವಣೆಗೆ CSR ಫಂಡ್ ಸಂಜ್ಞೆಯಾಗಿ ಬಳಕೆ: ಚುನಾವಣೆ ನಂತರ ಓರ್ವ ಮಂತ್ರಿಯಾದರೂ ಜಿಲ್ಲೆಗಳಿಗೆ ಭೇಟಿ ನೀಡಿದ್ದೀರಾ? ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಕೆಲಸ ಮಾಡಿಸಿದ್ದಾರಾ? ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ನಾಡಿನ ಅಭಿವೃದ್ಧಿಗೆ ಪೂರಕವಾದ ಕೆಲಸ ಆಗಿಲ್ಲ. ಸರ್ಕಾರದ ಐದು ವರ್ಷದ ಆಡಳಿತಾತ್ಮಕ ಮಂಜೂರಾತಿ ಮುಂದುವರಿಸಿದ್ದು ಬಿಟ್ಟರೆ ಏನೂ ಆಗಿಲ್ಲ. ವರ್ಗಾವಣೆ ದಂಧೆಯೂ ನಿಂತಿಲ್ಲ. ವರ್ಗಾವಣೆಗೆ ಸಿ ಎಸ್ ಆರ್ ಫಂಡ್ ಹೆಸರನ್ನು ಸಂಜ್ಞೆಯಾಗಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಆರೋಪ ಮಾಡಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ಸಾ.ರಾ.ಮಹೇಶ್, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಉಪಸ್ಥಿರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!