ಹರಿತಲೇಖನಿ ದಿನಕ್ಕೊಂದು ಕಥೆ; ಕರ್ಣನ ಕವಚಕುಂಡಲ

ಮಹಾಭಾರತ ಕಥೆಯಲ್ಲಿ ಬರುವ ಕರ್ಣನಷ್ಟು ನತದ್ರಷ್ಟ ಪಾತ್ರ ಮತ್ತೊಂದಿಲ್ಲ ಎನ್ನಬಹದು. ಜೇವನದುದ್ದಕ್ಕೂ ಸೂತಪುತ್ರನೆಂದು ಹಣೆಪಟ್ಟಿ ಹೊತ್ತುಕೊಂಡು ಮಹಾವೀರನಾಗಿದ್ದನೂ ಸಹ ಅವಮಾನಗಳಿಗೆ ಎದುರಾಗಬೇಕಾಯಿತು. ಅರ್ಜುನನನಿಗಿಂತ ಶಕ್ತಿಶಾಲಿ ಎನಿಸಿದ್ದ ಕರ್ಣ ತಾನು ಮಾಡದ ತಪ್ಪಿನಿಂದ ಸಂದರ್ಭಕ್ಕೆ ಸಿಕ್ಕಿ ಬಲಿಯಾಗುತ್ತಾನೆ. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಕರ್ಣನೂ ಒಬ್ಬ.

ಕರ್ಣನಲ್ಲಿ ಅದೆಷ್ಟೆ ಸದ್ಗುಣಗಳಿದ್ದರೂ ನತದೃಷ್ಟನಾಗಿದ್ದ. ಪೂರ್ವಜನ್ಮ ಕೃತಂ ಪಾಪಂ ವ್ಯಾಧಿ ರೂಪೇಣ ಭಾದಯೇತ್‌ ಎನ್ನುವಂತೆ ಕರ್ಣನ ಕರ್ಮಫಲಕ್ಕೆ ಪೂರ್ವಜನ್ಮದ ಕರ್ಮಫಲವೇ ಕಾರಣ ಎಂದರೆ ಅತಿಶಯೋಕ್ತಿಯಲ್ಲ.

ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ.

ಒಂದು ಸಲ ಭಗವಾನ ಶ್ರೀಕೃಷ್ಣ ಮತ್ತು ಅರ್ಜುನ ಕುಳಿತು ಮಾತಾಡುತ್ತಿದ್ದರು. ಮಾತಾಡುತ್ತಾ ಮಾತಾಡುತ್ತಾ ಕರ್ಣನ ದಾನಶೂರತೆಯ ಬಗ್ಗೆ ಚರ್ಚೆಯಾಯಿತು. ಶ್ರೀಕೃಷ್ಣನು ಕರ್ಣನ ದಾನಶೂರತೆಯನ್ನು ಪ್ರಶಂಸಿಸಿದನು. ಶ್ರೀಕೃಷ್ಣನು ಹೇಳಿದನು, “ಕರ್ಣನಂತ ಉದಾರಿ ವ್ಯಕ್ತಿಯು ಯಾರೂ ಇಲ್ಲ.” ಇದನ್ನು ಕೇಳಿ ಅರ್ಜುನನು ಆಶ್ಚರ್ಯಚಕಿತನಾದನು ಮತ್ತು ಹೇಳಿದನು.

“ಶ್ರೀಕೃಷ್ಣಾ, ಧರ್ಮರಾಜ ಕೂಡ ದಾನವೀರನೇ ಇದ್ದಾನೆ”. ಹಾಗಿದ್ದರೆ ಯಾರು ಹೆಚ್ಚು ದಾನವೀರರಿದ್ದಾರೆ ಎಂದು ಅವರುಚರ್ಚಿಸಲು ಪ್ರಾರಂಭಿಸಿದರು. ಆಗ ಶ್ರೀಕೃಷ್ಣನು, “ಸರಿ ಹಾಗಿದ್ದರೆ, ನಾಳೆಯೇ ನಾವು ಕರ್ಣ ಮತ್ತು ಧರ್ಮರಾಜರ ಬಳಿ ಹೋಗಿ ಪರೀಕ್ಷಿಸೋಣ” ಎಂದು ಹೇಳಿದರು.

ಆಗ ಮಳೆಗಾಲವಿತ್ತು, ಮರುದಿನ ಸೂರ್ಯನು ಉದಯಿಸುತ್ತಿದ್ದಂತೆಯೇ ಶ್ರೀಕೃಷ್ಣ ಮತ್ತು ಅರ್ಜುನರು ಧರ್ಮರಾಜರ ಬಳಿಗೆ ಹೋದರು. ಅವರನ್ನು ನೋಡಿ ಧರ್ಮರಾಜನಿಗೆ ತುಂಬಾ ಆನಂದವಾಯಿತು. ಅವರನ್ನು ಆದರದಿಂದ ಸತ್ಕರಿಸಿದನು ಮತ್ತು ಅಲ್ಲಿಗೆ ಆಗಮಿಸಿದ ಕಾರಣವನ್ನು ಕೇಳಿದನು.

ಆಗ ಶ್ರೀಕೃಷ್ಣನು ಹೇಳಿದನು, “ರಾಜ್ಯದಲ್ಲಿ ತಕ್ಷಣ ಒಂದು ಬೃಹತ್ ನಿರ್ಮಾಣ ಕಾರ್ಯ ಮಾಡಬೇಕಿದೆ. ಅದಕ್ಕಾಗಿ ಕಟ್ಟಿಗೆ ಬೇಕಾಗಿದೆ”. ತಕ್ಷಣ ಧರ್ಮರಾಯನು ತನ್ನ ಸೇವಕರನ್ನು ಕರೆದನು ಮತ್ತು ನಿರ್ಮಾಣಕ್ಕಾಗಿ ಅತ್ಯಂತ ಒಳ್ಳೆಯ ಗುಣಮಟ್ಟದ ಕಟ್ಟಿಗೆಯನ್ನು ತನ್ನಿರಿ ಎಂದು ಆಜ್ಞಾಪಿಸಿದನು.

ತುಂಬಾ ಹೊತ್ತಾದರೂ ಸೇವಕರು ಹಿಂತಿರುಗಲಿಲ್ಲ. ಸ್ವಲ್ಪ ಸಮಯದ ನಂತರ ಸೇವಕರು ತಲೆಯನ್ನು ಬಗ್ಗಿಸಿ ಖಾಲಿ ಕೈಯಲ್ಲಿ ಹಿಂತಿರುಗಿದರು. ಆಗ ಧರ್ಮರಾಜನು ಕೇಳಿದನು, “ಏನಾಯಿತು? ಕಟ್ಟಿಗೆಯು ಸಿಗಲಿಲ್ಲವೇ?”. ಸೇವಕರು ಹೇಳಿದರು, “ಮಳೆಯ ಕಾರಣದಿಂದಾಗಿ ಎಲ್ಲಾ ಕಟ್ಟಿಗೆಗಳು ಒದ್ದೆಯಾಗಿ ಬಿಟ್ಟಿದೆ. ಹಾಗಾಗಿ ನಾವು ಕಟ್ಟಿಗೆಯನ್ನು ತರಲಿಲ್ಲ”. ಧರ್ಮರಾಯನು ವಿಧಿ ಇಲ್ಲದೇ ಅರ್ಜುನ ಮತ್ತು ಕೃಷ್ಣನಿಗೆ ಕಟ್ಟಿಗೆ ಸಿಗಲಿಲ್ಲ ಎಂದು ತಿಳಿಸಿದನು.

ಅರ್ಜುನ ಮತ್ತು ಕೃಷ್ಣ ಹಿಂತಿರುಗಿದರು. ನಂತರ ಅವರು ಕರ್ಣನ ಬಳಿ ಹೋದರು. ಕರ್ಣನು ಅವರಿಗೆ ಆದರದಿಂದ ಕೂರಲು ಹೇಳಿದನು ಮತ್ತು ಅವರ ಕ್ಷೇಮ ಸಮಾಚಾರ ವಿಚಾರಿಸಿಕೊಂಡನು. ಆಗ ಅರ್ಜುನನು ಕಟ್ಟಿಗೆಯ ಕುರಿತು ಹೇಳಿದನು. ಆಗ ಕರ್ಣನು, “ಇಷ್ಟೇ ತಾನೇ? ಇದರಲ್ಲಿ ಇಷ್ಟು ಚಿಂತೆ ಮಾಡಲು ಏನಿದೆ?” ಎಂದು ಹೇಳುತ್ತಾತನ್ನ ಸೇವಕರನ್ನು ಕಟ್ಟಿಗೆ ತರಲು ಕಳಿಸಿದನು. ಸ್ವಲ್ಪ ಸಮಯದಲ್ಲಿ ಆ ಸೇವಕರು ಹಿಂತಿರುಗಿದರು ಮತ್ತು ಹೇಳಿದರು, “ಮಳೆಯಲ್ಲಿ ಎಲ್ಲಾ ಕಟ್ಟಿಗೆಯು ಒದ್ದೆಯಾದ ಕಾರಣಯಾವುದೇ ಕಟ್ಟಿಗೆ ಸಿಗಲಿಲ್ಲ”.

ಇದನ್ನು ಕೇಳಿದ ಕರ್ಣನು ಅರಮನೆಯ ಒಳಗೆ ಹೋದನು ಮತ್ತು ಎಷ್ಟು ಹೊತ್ತಾದರೂ ಹೊರಗೆ ಬರದಿದ್ದಾಗ ಶ್ರೀಕೃಷ್ಣನು ಅರ್ಜುನನನ್ನು ಕರೆದುಕೊಂಡು ಒಳಗೆ ಹೋದನು. ಅಲ್ಲಿ ನೋಡಿದರೆ ಕರ್ಣನು ತನ್ನ ಮಂಚದ ಮರವನ್ನು ಕಡಿಯುತ್ತಿದ್ದನು. ಅಕ್ಕಪಕ್ಕದಲ್ಲಿ ಅನೇಕ ಮರದ ಸಾಮಾನು ಮುರಿದು ಇಡಲಾಗಿತ್ತು. ಆಗ ಅವರಿಗೆ ತಿಳಿಯಿತು ಕರ್ಣ ಇಷ್ಟು ಹೊತ್ತು ಏನು ಮಾಡುತ್ತಿದ್ದನೆಂದು.

ಅರ್ಜುನನು ಕೇಳಿದನು, “ಕರ್ಣಾ, ಇಷ್ಟು ಸಣ್ಣ ವಿಷಯಕ್ಕಾಗಿ ನೀನು ಚಂದನದಮರದ, ಕರಕುಶಲ ಕೆತ್ತನೆಯನ್ನು ಮಾಡಲಾಗಿರುವ, ಸುಂದರವಾದ ಮಂಚವನ್ನೇಕೆ ಮುರಿದೆ?”. ಆಗ ಕರ್ಣನು ಹೇಳಿದನು, “ಈ ವಸ್ತುಗಳನ್ನು ಪುನಃ ಮಾಡಿಸಿಕೊಳ್ಳಬಹುದು ಆದರೆ ಯಾರಿಗಾದರು ಸಹಾಯ ಮಾಡುವಂತಹ ಅವಕಾಶವನ್ನು ಕಳೆದುಕೊಂಡರೆ ಅದಕ್ಕಿಂತ ದುಃಖದ ವಿಷಯವೇನಿದೆ ಎಂದು ಹೇಳಿದ.

ಅರ್ಜುನನಿಂದ ಹತನಾಗಿ ಯುದ್ಧಭೂಮಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕರ್ಣನ ದಾನ ಗುಣ ಎಷ್ಟಿದೆ ಎಂಬುದನ್ನು ಪರೀಕ್ಷೆ ಮಾಡಲು ಶ್ರೀಕೃಷ್ಣ ಬ್ರಾಹ್ಮಣನ ರೂಪದಲ್ಲಿ ಹೋಗಿ ಭಿಕ್ಷೆ ಕೇಳುತ್ತಾನೆ. ಕರ್ಣನಿಗೆ ಎರಡು ಚಿನ್ನದ ಹಲ್ಲು ಇರುತ್ತದೆ, ಅವುಗಳನ್ನು ದಾನವಾಗಿ ಕೇಳುತ್ತಾನೆ.

ಆದರೆ ಅದರಲ್ಲಿ ಕರ್ಣನ  ಎಂಜಲು ಇದೆ ಎಂದು ಕೃಷ್ಣನು ಸಿಟ್ಟಾಗುತ್ತಾನೆ. ಆಗ ಕರ್ಣನ ಭೂಮಿಗೆ ಬಾಣ ಬಿಟ್ಟು ನೀರನ್ನು ಚಿಮ್ಮುವಂತೆ ಮಾಡಿ ಅದರಲ್ಲಿ ಚಿನ್ನದ ಹಲ್ಲನ್ನು ತೊಳೆದು ಕೊಡುತ್ತಾನೆ . ಇದರಿಂದ ಖುಷಿಯಾದ ಕೃಷ್ಣ ವಿಶ್ವರೂಪ ದರ್ಶನ ಕೊಡುತ್ತಾನೆ. ಕರ್ಣನನ್ನು ಸೇರಿಸಿ ಮೂರೇ ಜನ ಕೃಷ್ಣನ ವಿಶ್ವರೂಪವನ್ನು ನೋಡಿರುವುದು.

ಕೃಪೆ: ಸಾಮಾಜಿಕ ಜಾಲತಾಣ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]