ಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ 2ನೇ ತರಗತಿ ಬಾಲಕಿ ದುರ್ಮರಣ.!

ವಿಜಯನಗರ, (ಜೂ.07): ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರಿ ವಿಧಿಯಾದ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. 

ಹೌದು, ಇಂದು ಬೆಳಗ್ಗೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (ಎಲೆಕ್ಟ್ರಿಕ್ ಶಾಕ್) ಬಾಲಕಿ ದಾರುಣ ಅಂತ್ಯ ಕಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. 

ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಬಾಲಕಿ‌. ತುಳಸಿ ಅದೇ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.

ಬಾಲಕಿ ತುಳಸಿ ಕರೆಂಟ್‌ ಶಾಕ್‌ನಿಂದ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ದುಃಖ ಮಡುಗಟ್ಟಿದೆ.  ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೂಡ್ಲಿಗಿ ಪಿಎಸ್‌ಐ ಎರಿಯಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ. 

ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….