ಫಸಲ್ ವಿಮೆಗೆ ಹಣ ಕಟ್ಟಿದ ದೊಡ್ಡಬಳ್ಳಾಪುರದ ರೈತರಿಗೆ ಭಾರೀ ಮೋಸ..!?; ಕೇಳೋರ್ ಯಾರು ಅನ್ನದಾತರ ಗೋಳು

ದೊಡ್ಡಬಳ್ಳಾಪುರ, (ಜೂ.15); ತೀವ್ರವಾಗಿ ಕಾಡಿದ ಬರದ ನಡುವೆಯೂ ಕೇಂದ್ರ ಬಿಜೆಪಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಫಸಲ್‌ ವಿಮೆ ಯೋಜನೆಯು ತಾಲೂಕಿನ ರೈತರ ಕೈಹಿಡಿಯದೆ ಹೋಗಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಿಮೆ ಕಟ್ಟಿದ ರೈತರ ಆಕ್ರೋಶ ವ್ಯಕ್ತವಾಗಿದೆ‌.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಪಾಲು ಭರಿಸುವ ಸದ್ಯದ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ವಿಮಾ ಕಂಪನಿಗಳ ಪರವಾಗಿದ್ದು, ವಿಮೆ ಕಂಪನಿ ಮತ್ತು ಕೃಷಿ ಅಧಿಕಾರಿಗಳು ಷಾಮೀಲಾಗಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪ ರೈತರದ್ದಾಗಿದೆ.

ಕಳೆದ ವರ್ಷ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 15545 ರೈತರು ಒಟ್ಟು ಫಸಲ್ ವಿಮೆಗೆ ಹಣ ಕಟ್ಟಿದ್ದು, ದೊಡ್ಡಬಳ್ಳಾಪುರ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಸರಕಾರ ಘೋಷಿಸಿದ್ದರೂ ಕೂಡ ಕೇವಲ 4111ಮಂದಿ ರೈತರಿಗೆ ಮಾತ್ರ ಪರಿಹಾರ ನೀಡಲಾಗಿದೆ.

ಇದರಲ್ಲಿ ರಾಗಿ ಬೆಳೆಗೆ ವಿಮೆ ಮಾಡಿಸಿದ ದೊಡ್ಡಬಳ್ಳಾಪುರ ತಾಲೂಕಿನ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, 2023-24 ನೇ ಸಾಲಿನಲ್ಲಿ 12966 ರೈತರು ರಾಗಿ ಬೆಳೆಗೆ ವಿಮೆ ಹಣ ಪಾವತಿಸಿದರೆ, ಬಂದಿರುವುದು ಕೇವಲ 2668 ಮಂದಿಗೆ ಮಾತ್ರ.

ಉಳಿದಂತೆ ಜೋಳದ ಬೆಳೆಗೆ 2008 ರೈತರು ವಿಮೆ ಮಾಡಿಸಿದ್ದು, 1428 ರೈತರಿಗೆ ಮಾತ್ರ ಪರಿಹಾರ ದೊರೆತಿದೆ‌. ಅನಾವೃಷ್ಟಿಯಿಂದ ವ್ಯಾಪಕ ಬೆಳೆ ನಷ್ಟ ಸಂಭವಿಸಿದರೂ ವಿಮಾ ಕಂಪನಿ ತಾಲೂಕಿನ ರೈತರಿಗೆ ಅನ್ಯಾಯ ಎಸಗಿದೆ ಎಂಬ ಆರೋಪ ರೈತರದ್ದು.

ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಪಾಲು ಭರಿಸುವ ಒಪ್ಪಂದದಂತೆ ಜಾರಿ ಮಾಡಲಾಗಿದೆ. ಆದರೆ, ವಿಮಾ ಕಂಪನಿ ಆಯ್ಕೆ, ನಿಯಮಾವಳಿ ರಚನೆ ಅಧಿಕಾರ ಕೇಂದ್ರ ಸರಕಾರಕ್ಕಿದ್ದು, ಅನುಷ್ಠಾನ ಮಾತ್ರ ರಾಜ್ಯ ಸರಕಾರದ್ದಾಗಿದೆ. ಇಷ್ಟಾದರೂ, ಯೋಜನೆಯಿಂದ ರೈತ ಸಮುದಾಯಕ್ಕೂ ಅನುಕೂಲವಾಗುತ್ತಿಲ್ಲ. ನಷ್ಟ ಪರಿಹಾರಕ್ಕೆ ನಿಯಮಾವಳಿ ತೊಡಕುಗಳು ರೈತ ಹಿತಾಸಕ್ತಿಗೆ ವಿರುದ್ಧವಾಗಿವೆ.

ಫಸಲ್‌ ಬಿಮಾ ಯೋಜನೆ ರೈತರ ಶ್ರಮದಲ್ಲಿ ವಿಮಾ ಕಂಪನಿಗಳು ಲಾಭ ಮಾಡಿಕೊಳ್ಳಲು ಪೂರಕವಾಗಿದೆ. ಕಂತು ಪಾವತಿಸಿ ಬೆಳೆ ವಿಮೆ ಮಾಡಿಸಿದ ರೈತರಿಗೆ, ಬೆಳೆ ನಷ್ಟವಾದರೂ ಪರಿಹಾರ ಮೊತ್ತ ಸಮರ್ಪಕವಾಗಿ ಸಿಗುತ್ತಿಲ್ಲ. ನಷ್ಟ ಪರಿಹಾರ ಬಯಸಿದ ಸಂದರ್ಭದಲ್ಲಿ ವಿಮಾ ಕಂಪನಿಗಳು ನಿಯಮಾವಳಿ ತೊಡಕು ಮುಂದಿಟ್ಟು ವಂಚಿಸುತ್ತಿವೆ ಎಂಬ ದೂರುಗಳಿವೆ. ಹೀಗಾಗಿ,ರೈತರಿಗೆ ಅನುಕೂಲವಾಗದ ಸದ್ಯದ ಯೋಜನೆ ಮುಂದುವರಿಸುವುದಕ್ಕೆ ಅರ್ಥವಿಲ್ಲ

ವಿಮಾ ಕಂಪನಿಗಳಿಂದ ರೈತರಿಗೆ ಆಗುತ್ತಿರುವ ಈ ಮೋಸದಲ್ಲಿ ಬ್ಯಾಂಕ್‌ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಷಾಮೀಲಾಗುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ.

ಅಲ್ಲದೆ ನಿರಂತರ ಅನಾವೃಷ್ಟಿಯಿಂದ ನೊಂದಿರುವ ರೈತರ ಗಾಯದ ಮೇಲೆ ವಿಮೆ ಕಂಪನಿಗಳು ಬರೆ ಎಳೆಯುತ್ತಿರುವುದು ಕಣ್ಣಿಗೆ ಕಾಣುತ್ತಿದ್ದರು ಯಾವುದೇ ರಾಜಕಾರಣಿಗಳು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿರುವುದು ಅನ್ನದಾತರಿಗೆ ಮಾಡುತ್ತಿರುವ ದ್ರೋಹ ಎಂಬ ಆಕ್ರೋಶ ರೈತರದ್ದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!