ದೊಡ್ಡಬಳ್ಳಾಪುರ, (ಜೂ.23); ಕೈಗಾರಿಕಾ ಪ್ರದೇಶ ಸ್ಥಾಪನೆಯಿಂದ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಯುತ ಬೆಲೆ ದೊರಕಿಸುವ ನಿಟ್ಟಿನಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದ್ದಾರೆ.
ಇಂದು ಅವರ ನೇತೃತ್ವದಲ್ಲಿ ಜೆಪಿ ನಗರದ ಕುಮಾರಸ್ವಾಮಿ ಮನೆಗೆ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿ ನಾರಾಯಣ ಹೊಸಹಳ್ಳಿ ವ್ಯಾಪ್ತಿಯ ರೈತರೊಂದಿಗೆ ಭೇಟಿ ಕುರಿತು ಹರೀಶ್ ಗೌಡ ಮಾಹಿತಿ ನೀಡಿದರು.
ಕೈಗಾರಿಕಾ ಪ್ರದೇಶ ಸ್ಥಾಪಿಸಲು KIADB ಭೂಮಿಯನ್ನು ಗುರುತಿಸಿದೆಯೇ ಹೊರತು ರೈತರಿಗೆ ವೈಜ್ಞಾನಿಕ ಬೆಲೆ ನಿಗದಿ ಪಡೆಸದೆ ಬೇಕಬಿಟ್ಟಿ ಬೆಲೆ ನಿಗದಿ ಮಾಡಿದೆ. ಈ ವ್ಯಾಪ್ತಿಯಲ್ಲಿ ಮಾರುಕಟ್ಟೆ ಬೆಲೆ ಎಕರೆಗೆ 4ರಿಂದ 6 ಕೋಟಿವರೆವಿಗೂ ಇದೆ. ಆದರೆ ಅಧಿಕಾರಿಗಳು 1 ಕೋಟಿ 55 ಲಕ್ಷ ರೂ. ಮಾತ್ರ ನಿಗದಿ ಮಾಡಿರುವುದರಿಂದ ರೈತರಿಗೆ ಅನ್ಯಾಯವಾಗುತ್ತಿದೆ.
ಅಲ್ಲದೆ ಎತ್ತಿನಹೊಳೆ, ರಾಷ್ಟ್ರೀಯ ಹೆದ್ದಾರಿಗೆ ಭೂಮಿ ವಶ ಪಡಿಸಿಕೊಂಡಾಗ ಒಂದಕ್ಕೆ ನಾಲ್ಕು ಪಟ್ಟು ಪರಿಹಾರ ನೀಡಿದಂತೆ ಇದ್ದಕ್ಕೂ ಪರಿಹಾರ ನೀಡಬೇಕೆಂಬುದನ್ನು ಕುಮಾರಸ್ವಾಮಿ ಅವರಿಗೆ ವಿವರಿಸಲಾಯಿತು.
ಈ ಕುರಿತು ರಾಜ್ಯ ಕೈಗಾರಿಕಾ ಸಚಿವ ಎಂಬಿ ಪಾಟೀಲರೊಂದಿಗೆ ರೈತರು, ಅಧಿಕಾರಿಗಳ ಸಭೆ ನಡೆಸುವುದಾಗಿ ಕುಮಾರಸ್ವಾಮಿ ಅವರು ಹೇಳಿದ್ದು, ಕೇಂದ್ರ ಮತ್ತು ರಾಜ್ಯ ಕೈಗಾರಿಕೆ ಇಲಾಖೆಯ ಬೆಲೆ ನಿಗದಿ ವಿಚಾರವಾಗಿ ಮಾಹಿತಿ ಸಂಗ್ರಹಿಸಲು 15 ದಿನ ಸಮಯ ನೀಡುವಂತೆ ಮನವಿ ಮಾಡಿದ್ದಾರೆ.
ಅಲ್ಲದೆ ರೈತರನ ನಡುವೆ ಯಾವುದೇ ಒಡಕು ಉಂಟಾಗದಂತೆ ನನ್ನ ನೇತೃತ್ವದಲ್ಲಿ ಒಟ್ಟಾಗಿ ಹೋರಾಟ ನಡೆಸುವಂತೆ ಸಲಹೆ ನೀಡಿದ್ದಾರೆಂದು ಹರೀಶ್ ಗೌಡ ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….