ಹರಿತಲೇಖನಿ ದಿನಕ್ಕೊಂದು ಕಥೆ: ಜೀವನದಲ್ಲಿ ಸಾಕ್ಷಾತ್ಕಾರವಾಗದಿದ್ದರೆ ಎಲ್ಲಾ ಸಾಧನೆ ವ್ಯರ್ಥವೇ ?

ಎಲ್ಲರನ್ನೂ ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ, ಮೊದಲು ಹುಟ್ಟು, ಆನಂತರ ಅಧ್ಯಯನ, ಸಾಧನೆ, ನಂತರ ಸಾವು. ಪುನಃ ಮರುಹುಟ್ಟು ಮತ್ತೆ ಅದೇ ಸಾಧನೆ ಮತ್ತೆ ಸಾವು ! ಇದರಿಂದ ಏನು ಉಪಯೋಗ.

ಒಂದು ಜನ್ಮದಲ್ಲಿ ಬ್ರಹ್ಮಸಾಕ್ಷಾತ್ಕಾರವಾಗದೇ ಇದ್ದರೆ ಆ ಎಲ್ಲಾ ಸಾಧನೆ ವ್ಯರ್ಥವೇ ? ಖಂಡಿತವಾಗಿ ಇಲ್ಲ ಎನ್ನುತ್ತಾನೆ ಕೃಷ್ಣ. ನಮ್ಮ ಜೀವನದಲ್ಲಿ ಗಳಿಸಿದ ಐಹಿಕ ಸಂಪತ್ತು (ಧನ, ಒಡವೆ, ಕೀರ್ತಿ, ಆಸ್ತಿ ಇತ್ಯಾದಿ) ಸತ್ತ ನಂತರ ನಮ್ಮೊಂದಿಗೆ ಬಾರದು ನಿಜ. ಆದರೆ ಅಧ್ಯಾತ್ಮ ಸಾಧನೆ ಹಾಗಲ್ಲ. ಒಂದು ಜನ್ಮದಲ್ಲಿ ಮಾಡಿದ ಅಧ್ಯಾತ್ಮ ಸಾಧನೆ ಎಂದೂ ನಾಶವಾಗದು.

ಈ ಜನ್ಮದಲ್ಲಿ ಅಧ್ಯಾತ್ಮದ ಒಂದು ಮೆಟ್ಟಿಲನ್ನು ಹತ್ತಿದರೆ ಮುಂದಿನ ಜನ್ಮದಲ್ಲಿ ಹುಟ್ಟುವಾಗಲೇ ನಾವು ಎರಡನೇ ಮೆಟ್ಟಲಲ್ಲಿರುತ್ತೇವೆ. ಹಿಂದಿನ ಜನ್ಮದಲ್ಲಿ ಎಲ್ಲಿ ನಿಂತಿದ್ದೇವೋ ಅಲ್ಲಿಂದ ಮುಂದುವರಿಯುವ ಪರಿಸರದಲ್ಲಿ ನಮ್ಮ ಜನನವಾಗುತ್ತದೆ.

ಸಾಮಾಜಿಕವಾಗಿ ನೀವು ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳು ಜನಿಸುವುದನ್ನು, ಹಾಗೂ ಅತ್ಯಂತ ಕಡಿಮೆ ಸಮಯದಲ್ಲಿ ಮಹಾನ್ ಸಾಧನೆ ಮಾಡುವುದನ್ನು ಕಾಣುತ್ತೀರಿ. ಇದು ಅವರು ಹಿಂದಿನ ಜನ್ಮದಿಂದ ಪಡೆದು ಬಂದ ಜ್ಞಾನ. ಹಿಂದಿನ ಜನ್ಮದ ಅಧ್ಯಾತ್ಮದ ಸಾಧನೆಯ ಮುಂದುವರಿದ ಭಾಗವೇ ಈ ಜನ್ಮ. ನಾವು ಆ ಜನ್ಮದಲ್ಲಿ ಎಲ್ಲಿ ನಿಲ್ಲಿಸಿದ್ದೇವೋ ಅಲ್ಲಿಂದಲೇ ಈ ಜನ್ಮದ ಸಾಧನೆ ಪ್ರಾರಂಭವಾಗಿ ಮುಂದುವರಿಯುತ್ತದೆ.

ಒಂದು ವೇಳೆ ನಮಗೆ ಅಧ್ಯಾತ್ಮ ಸಾಧನೆ ಮಾಡಬೇಕು ಎನ್ನುವ ಅಂತರಂಗದ ತುಡಿತವಿದ್ದು, ಅದನ್ನು ಈ ಜನ್ಮದಲ್ಲಿ ಸಾಧಿಸಲಾಗದಿದ್ದಲ್ಲಿ ಮುಂದಿನ ಜನ್ಮದಲ್ಲಿ ಸಾಧನೆಗೆ ಬೇಕಾದ ವಾತಾವರಣದಲ್ಲಿ, ವಿದ್ವಾಂಸರ ಸಂಗವಿರುವ ಕಡೆ ನಮ್ಮ ಜನ್ಮವಾಗುತ್ತದೆ. ಆದ್ದರಿಂದ ನಮ್ಮ ಅಧ್ಯಾತ್ಮ ಚಿಂತನೆಯಲ್ಲಿ ನಮ್ಮ ಒಂದೊಂದು ಜನ್ಮ ಒಂದೊಂದು ತರಗತಿ ಇದ್ದಂತೆ.

ಒಂದು ಗ್ರಂಥವನ್ನು ಸಂಪೂರ್ಣ ತಿಳಿಯಲು ನಾವು ಅನೇಕ ಜನ್ಮ ಸಾಧನೆ ಮಾಡಬೇಕು. ಈ ಕಾರಣದಿಂದ ಅಧ್ಯಾತ್ಮ ಸಾಧನೆ ಎಂದೂ ವ್ಯರ್ಥವಲ್ಲ. ಇಂದು ನೀವು ನಿಮ್ಮ ಜೀವನದ ಯಾವ ಘಟ್ಟದಲ್ಲಿದ್ದರೂ ಸರಿ, ಅಧ್ಯಾತ್ಮ ಸಾಧನೆಗೆ ಇದು ಸಕಾಲ. ಇಂದೇ ನಿಮ್ಮ ಸಾಧನೆಯನ್ನು ಆರಂಭಿಸಿ. ಅದು ನಿಮ್ಮನ್ನು ಮೋಕ್ಷ ಮಾರ್ಗದತ್ತ ಕೊಂಡೊಯ್ಯುತ್ತದೆ ಎನ್ನುವುದು ಕಟುಸತ್ಯ.

ಅಧ್ಯಾತ್ಮ ಪ್ರದರ್ಶನದ ವಸ್ತುವಲ್ಲ, ಅದು ಅಂತರಂಗದ ಸಾಧನೆ. ನಮ್ಮ ಜನ್ಮದಲ್ಲಿ ನಾವು ಅಧ್ಯಾತ್ಮದ ಕಿಂಚಿತ್ ಸಾಧನೆ ಮಾಡಿದರೂ ಕೂಡಾ, ಅದು ನಮ್ಮನ್ನು ಭಯದಿಂದ ಪಾರು ಮಾಡುತ್ತದೆ. ಭಯದಿಂದ ಅಭಯದತ್ತ ನಮ್ಮನ್ನು ಸಾಗಿಸುವ ಏಕಮಾತ್ರ ಸಾಧನ ಅಧ್ಯಾತ್ಮ.

ಕೃಪೆ: ಸನಾತನ ಸಂಸ್ಥೆ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್- ಬಿಜೆಪಿ ನಾಯಕರ ಪ್ರತಿಕ್ರಿಯೆ

ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ( D.K. Shivakumar)

[ccc_my_favorite_select_button post_id="112052"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಾಲೆಯ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ

[ccc_my_favorite_select_button post_id="112064"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!