ಇಂದಿನಿಂದ ದೇಶಾದ್ಯಂತ 3 ನೂತನ ಕಾನೂನು ಜಾರಿ..!: ಬ್ರಿಟಿಷ್ ಕಾಲದ ಮೂರು ಅಪರಾಧ ಕಾಯ್ದೆ ರದ್ದು

ನವದೆಹಲಿ, (ಜುಲೈ.01); ದೇಶದಲ್ಲಿ ಜುಲೈ 1ರಿಂದ 3 ನೂತನ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿವೆ. ಇದರನ್ವಯ ಬ್ರಿಟಿಷರ ವಸಾಹತುಶಾಹಿ ಯುಗದ 3 ಅಪರಾಧ ಕಾನೂನುಗಳನ್ನು ಅಂತ್ಯಗೊಳಿಸಿ ನೂತನ ಕ್ರಿಮಿನಲ್ ಕಾನೂನುಗಳು ಜಾರಿಗೆ ತರಲಾಗಿದೆ. 

ಗೃಹ ಸಚಿವ ಅಮಿತ್ ಶಾ ಈ ಹೊಸ ಕಾನೂನುಗಳು ದಂಡದ ಕ್ರಮಕ್ಕೆ ಪ್ರಾಮುಖ್ಯತೆ ನೀಡುವುದಕ್ಕಿಂತ ನ್ಯಾಯ ಒದಗಿಸುವಲ್ಲಿ ಆದ್ಯತೆ ನೀಡುತ್ತವೆ ಎಂದು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಮೂರು ಕಾನೂನುಗಳು ಬ್ರಿಟಿಷರ ಭಾರತೀಯ ದಂಡ ಸಂಹಿತಾ(ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತಾ (ಸಿಆರ್‌ಪಿಸಿ), ಭಾರತೀಯ ಸಾಕ್ಷ್ಯ ಸಂಹಿತಾ ಕಾನೂನುಗಳನ್ನು ಬದಲಾಗಿದೆ.

ಈ ಹೊಸ ಕಾನೂನುಗಳು ಕಳೆದ ವರ್ಷವೇ ಸಂಸತ್‌ನಲ್ಲಿ ಅನುಮೋದನೆಗೊಂಡಿದ್ದು, ರಾಷ್ಟ್ರಪತಿಗಳ ಅಂಕಿತ ಕೂಡ ಪಡೆದುಕೊಂಡಿವೆ. ಲೋಕಸಭೆ ಚುನಾವಣೆ ಜಾರಿಗೊಂಡಿವೆ.

ಬಳಿಕ ಜೀರೋ ಎಫ್‌ಐಆ‌ರ್, ಆನ್‌ಲೈನ್ ಮೂಲಕ ಪೊಲೀಸ್ ದೂರು ದಾಖಲು, ಎಸ್‌ಎಂಎಸ್‌ನಂತಹ ವಿದ್ಯುನ್ಮಾನ ಸಂದೇಶಗಳ ಮೂಲಕ ಸಮನ್ಸ್ ಜಾರಿ, ಘೋರ ಅಪರಾಧ ದೃಶ್ಯಗಳ ಕಡ್ಡಾಯ ವಿಡಿಯೋಗ್ರಫಿ ಮೂಲಕ ಈ ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಯನ್ನು ಪರಿಚಯಿಸುತ್ತವೆ.

ನೂತನ ಕ್ರಿಮಿನಲ್ ಕಾನೂನು ಪ್ರಮುಖಾಂಶಗಳು

• ಭಾರತೀಯ ಸಾಕ್ಷ್ಯ ಅಧಿನಿಯಮವನ್ನು 3 ಭಾಗಗಳಾಗಿ ವಿಂಗಡಿಸಲಾಗಿದ್ದು, 11 ಅಧ್ಯಾಯಗಳನ್ನು ಒಳಗೊಂಡಿದೆ.

• ಜೀರೋ ಎಫ್‌ಐಆರ್ ಪರಿಚಯದ ಮೂಲಕ ಅಪರಾಧ ನಡೆದ ಠಾಣೆ ವ್ಯಾಪ್ತಿಯ ಜತೆಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಬಹುದಾಗಿದೆ.

• ಕ್ರಿಮಿನಲ್ ಪ್ರಕರಣಗಳ ತೀರ್ಪು ವಿಚಾರಣೆ ಮುಗಿಸಿದ 45 ದಿನಗಳೊಳಗಾಗಿ ನೀಡಬೇಕು ಹಾಗೂ ಮೊದಲ ವಿಚಾರಣೆಯ 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಬೇಕು

• ಅತ್ಯಾಚಾರ ಸಂತ್ರಸ್ತೆಯ ಹೇಳಿಕೆಗಳನ್ನು ಮಹಿಳಾ ಅಧಿಕಾರಿಗಳು ಆಕೆಯ ಗಾರ್ಡಿಯನ್ ಅಥವಾ ಸಂಬಂಧಿಕರ ಎದುರು ಪಡೆಯಬೇಕು ಹಾಗೂ ಮೆಡಿಕಲ್‌ ವರದಿಗಳು 7 ದಿನಗಳೊಳಗಾಗಿ ದಾಖಲಿಸಬೇಕು. ಈ ಹೇಳಿಕೆಗಳ ಆಡಿಯೋ, ವಿಡಿಯೋ ರೆಕಾರ್ಡ್ ಕಡ್ಡಾಯ.

• ಸಂಘಟಿತ ಅಪರಾಧಗಳು ಹಾಗೂ ಭಯೋತ್ಪಾದನೆ ಕೃತ್ಯಗಳನ್ನು ವ್ಯಾಖ್ಯಾನಿಸಲಾಗಿದ್ದು, ಎಲ್ಲಾ ಕಾರ್ಯಾಚರಣೆ ಹಾಗೂ ಅಪರಾಧಕ್ಕೆ ಸಂಬಂಧಿಸಿದ ಸಾಕ್ಷ್ಯ ಸಂಗ್ರಹ ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯುವ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ಕಡ್ಡಾಯವಾಗಿದೆ.

• ಮಕ್ಕಳು ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ವಿಶೇಷ ಅಧ್ಯಾಯ ಸೇರಿಸಲಾಗಿದ್ದು, ಅಕ್ರಮ ಮಕ್ಕಳ ಮಾರಾಟ ಹಾಗೂ ಖರೀದಿಯನ್ನು ಘೋರ ಅಪರಾಧ ಎಂದು ಪರಿಗಣಿಸಲಾಗಿದೆ. ಅಪ್ರಾಪ್ತರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಯೋಗ್ಯ ಎಂದು ಪ್ರಸ್ತಾಪಿಸಲಾಗಿದೆ.

• ಹಳೆಯ ಕಾನೂನಿನಲ್ಲಿದ್ದ ಕೆಲವು ಸೆಕ್ಷನ್‌ಗಳನ್ನು ಒಗ್ಗೂಡಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯಲ್ಲಿದ್ದ 511 ಸೆಕ್ಷನ್‌ಗಳನ್ನು 358ಕ್ಕೆ ಇಳಿಸಲಾಗಿದೆ.

• ಮದುವೆಯ ಸುಳ್ಳು ಭರವಸೆಯ ಮೇಲೆ ಲೈಂಗಿಕ ಸಂಬಂಧಗಳನ್ನು ಬೆಳೆಸಿದ ನಂತರ ಮಹಿಳೆಯರನ್ನು ದೂರ ಮಾಡುವ ಪ್ರಕರಣಗಳಿಗೆ ಹೊಸ ನಿಬಂಧನೆಯನ್ನು ಮಾಡಲಾಗಿದೆ.

• ಹೊಸ ಕಾನೂನಿನ ಅನ್ವಯ ಆಸ್ಪತ್ರೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಲ್ಲಿ ಸಂತ್ರಸ್ತರಿಗೆ ಉಚಿತ ಪ್ರಥಮ ಚಿಕಿತ್ಸೆ ಅಥವಾ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಲಾಗಿದೆ.

* ಹೊಸ ಕಾನೂನುಗಳ ಅಡಿಯಲ್ಲಿ, ಮಹಿಳೆಯರ ವಿರುದ್ಧದ ಅಪರಾಧದಗಳಲ್ಲಿ ಸಂತ್ರಸ್ತರು ತಮ್ಮ ಪ್ರಕರಣದ ಪ್ರಗತಿಯ ಬಗ್ಗೆ 90 ದಿನಗಳೊಳಗಾಗಿ ಎಲ್ಲಾ ಮಾಹಿತಿಯನ್ನು ಪಡೆಯುವ ಹಕ್ಕು ಹೊಂದಿರುತ್ತಾರೆ. ಇದರಿಂದ ತನಿಖೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಹೊಸ ಕಾನೂನು ಖಚಿತಪಡಿಸುತ್ತದೆ.

• ಸಮನ್ಸ್‌ಗಳನ್ನು ಈಗ ವಿದ್ಯುನ್ಮಾನವಾಗಿ ಸಲ್ಲಿಸಬಹುದಾಗಿದೆ. ಈ ಮೂಲಕ ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ಕಾಗದ ಪತ್ರ ಕೆಲಸಗಳನ್ನು ಕಡಿಮೆ ಮಾಡಬಹುದು ಮತ್ತು ಪ್ರಕರಣದಲ್ಲಿ ಭಾಗಿಯಾದವರ ಮಧ್ಯೆ ಸಮರ್ಥ ಸಂವಹನಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.

• ಆರೋಪಿ ಮತ್ತು ಸಂತ್ರಸ್ತ ಇಬ್ಬರೂ ಎಫ್‌ಐಆರ್, ಪೊಲೀಸ್ ವರದಿ, ಚಾರ್ಜ್ ಶೀಟ್, ದಾಖಲಿಸ ಲಾದ ಹೇಳಿಕೆ, ತಪ್ರೊಪ್ಪಿಗೆ ಸೇರಿ ಸಂಬಂಧ ಪಟ್ಟ ದಾಖಲೆಗಳ ಪ್ರತಿಯನ್ನು 14 ದಿನಗಳೊಳಗೆ ಪಡೆಯಲು ಅಧಿಕಾರ ಹೊಂದಿರುತ್ತಾರೆ.

• ಪ್ರಕರಣಗಳ ವಿಚಾರಣೆಯಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಹಾಗೂ ಸಕಾಲಿಕ ನ್ಯಾಯ ವಿತರಣೆಗೆ ಗರಿಷ್ಠ ಎರಡು ವಿಚಾರಣೆ ಮುಂದೂಡಿಕೆಯನ್ನು ಮಾತ್ರ ನೀಡುತ್ತದೆ.

• ಸಾಕ್ಷಿಗಳ ಸುರಕ್ಷತೆ ಮತ್ತು ಸಹಕಾರವನ್ನು ಸಾಧಿಸುವ ನಿಟ್ಟಿನಲ್ಲಿ, ಕಾನೂನು ಪ್ರಕ್ರಿಯೆಗಳ ವಿಶ್ವಾಸಾರ್ಹತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಎಲ್ಲಾ ರಾಜ್ಯ ಸರ್ಕಾರಗಳು ಸಾಕ್ಷಿ ರಕ್ಷಣೆ ಯೋಜನೆಗಳನ್ನು ಜಾರಿಗೆ ತರುವುದನ್ನು ಕಡ್ಡಾಯಗೊಳಿಸಲಾಗಿದೆ.

• ಲಿಂಗ’ ಪದದ ವ್ಯಾಖ್ಯಾನವು ತೃತೀಯ ಲಿಂಗ ವ್ಯಕ್ತಿಗಳನ್ನೂ ಒಳಗೊಂಡಿದ್ದು, ಸಮಾನತೆಯನ್ನು ಉತ್ತೇಜಿಸುತ್ತದೆ.

• 15 ವರ್ಷದ ಒಳಗಿನ ಹಾಗೂ 60 ವರ್ಷ ಮೇಲ್ಪಟ್ಟವರು, ಅನಾರೋಗ್ಯಕ್ಕೆ ಒಳಗಾದವರು ಹಾಗೂ ವಿಶೇಷಚೇತನ ವ್ಯಕ್ತಿಗಳಿಗೆ ಪೊಲೀಸ್ ಠಾಣೆಗೆ ಭೇಟಿ ನೀಡುವುದಕ್ಕೆ ವಿನಾಯಿತಿ ನೀಡಲಾಗಿದ್ದು ಅವರಿದ್ದ ಸ್ಥಳದಲ್ಲೇ ಪೊಲೀಸ್ ನೆರವನ್ನು ಪಡೆಯಬಹುದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]