ಇಂದಿನಿಂದ ದೇಶಾದ್ಯಂತ 3 ನೂತನ ಕಾನೂನು ಜಾರಿ..!: ಬ್ರಿಟಿಷ್ ಕಾಲದ ಮೂರು ಅಪರಾಧ ಕಾಯ್ದೆ ರದ್ದು

ನವದೆಹಲಿ, (ಜುಲೈ.01); ದೇಶದಲ್ಲಿ ಜುಲೈ 1ರಿಂದ 3 ನೂತನ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿವೆ. ಇದರನ್ವಯ ಬ್ರಿಟಿಷರ ವಸಾಹತುಶಾಹಿ ಯುಗದ 3 ಅಪರಾಧ ಕಾನೂನುಗಳನ್ನು ಅಂತ್ಯಗೊಳಿಸಿ ನೂತನ ಕ್ರಿಮಿನಲ್ ಕಾನೂನುಗಳು ಜಾರಿಗೆ ತರಲಾಗಿದೆ. 

ಗೃಹ ಸಚಿವ ಅಮಿತ್ ಶಾ ಈ ಹೊಸ ಕಾನೂನುಗಳು ದಂಡದ ಕ್ರಮಕ್ಕೆ ಪ್ರಾಮುಖ್ಯತೆ ನೀಡುವುದಕ್ಕಿಂತ ನ್ಯಾಯ ಒದಗಿಸುವಲ್ಲಿ ಆದ್ಯತೆ ನೀಡುತ್ತವೆ ಎಂದು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಮೂರು ಕಾನೂನುಗಳು ಬ್ರಿಟಿಷರ ಭಾರತೀಯ ದಂಡ ಸಂಹಿತಾ(ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತಾ (ಸಿಆರ್‌ಪಿಸಿ), ಭಾರತೀಯ ಸಾಕ್ಷ್ಯ ಸಂಹಿತಾ ಕಾನೂನುಗಳನ್ನು ಬದಲಾಗಿದೆ.

ಈ ಹೊಸ ಕಾನೂನುಗಳು ಕಳೆದ ವರ್ಷವೇ ಸಂಸತ್‌ನಲ್ಲಿ ಅನುಮೋದನೆಗೊಂಡಿದ್ದು, ರಾಷ್ಟ್ರಪತಿಗಳ ಅಂಕಿತ ಕೂಡ ಪಡೆದುಕೊಂಡಿವೆ. ಲೋಕಸಭೆ ಚುನಾವಣೆ ಜಾರಿಗೊಂಡಿವೆ.

ಬಳಿಕ ಜೀರೋ ಎಫ್‌ಐಆ‌ರ್, ಆನ್‌ಲೈನ್ ಮೂಲಕ ಪೊಲೀಸ್ ದೂರು ದಾಖಲು, ಎಸ್‌ಎಂಎಸ್‌ನಂತಹ ವಿದ್ಯುನ್ಮಾನ ಸಂದೇಶಗಳ ಮೂಲಕ ಸಮನ್ಸ್ ಜಾರಿ, ಘೋರ ಅಪರಾಧ ದೃಶ್ಯಗಳ ಕಡ್ಡಾಯ ವಿಡಿಯೋಗ್ರಫಿ ಮೂಲಕ ಈ ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಯನ್ನು ಪರಿಚಯಿಸುತ್ತವೆ.

ನೂತನ ಕ್ರಿಮಿನಲ್ ಕಾನೂನು ಪ್ರಮುಖಾಂಶಗಳು

• ಭಾರತೀಯ ಸಾಕ್ಷ್ಯ ಅಧಿನಿಯಮವನ್ನು 3 ಭಾಗಗಳಾಗಿ ವಿಂಗಡಿಸಲಾಗಿದ್ದು, 11 ಅಧ್ಯಾಯಗಳನ್ನು ಒಳಗೊಂಡಿದೆ.

• ಜೀರೋ ಎಫ್‌ಐಆರ್ ಪರಿಚಯದ ಮೂಲಕ ಅಪರಾಧ ನಡೆದ ಠಾಣೆ ವ್ಯಾಪ್ತಿಯ ಜತೆಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಬಹುದಾಗಿದೆ.

• ಕ್ರಿಮಿನಲ್ ಪ್ರಕರಣಗಳ ತೀರ್ಪು ವಿಚಾರಣೆ ಮುಗಿಸಿದ 45 ದಿನಗಳೊಳಗಾಗಿ ನೀಡಬೇಕು ಹಾಗೂ ಮೊದಲ ವಿಚಾರಣೆಯ 60 ದಿನಗಳ ಒಳಗೆ ಆರೋಪ ಪಟ್ಟಿ ದಾಖಲಿಸಬೇಕು

• ಅತ್ಯಾಚಾರ ಸಂತ್ರಸ್ತೆಯ ಹೇಳಿಕೆಗಳನ್ನು ಮಹಿಳಾ ಅಧಿಕಾರಿಗಳು ಆಕೆಯ ಗಾರ್ಡಿಯನ್ ಅಥವಾ ಸಂಬಂಧಿಕರ ಎದುರು ಪಡೆಯಬೇಕು ಹಾಗೂ ಮೆಡಿಕಲ್‌ ವರದಿಗಳು 7 ದಿನಗಳೊಳಗಾಗಿ ದಾಖಲಿಸಬೇಕು. ಈ ಹೇಳಿಕೆಗಳ ಆಡಿಯೋ, ವಿಡಿಯೋ ರೆಕಾರ್ಡ್ ಕಡ್ಡಾಯ.

• ಸಂಘಟಿತ ಅಪರಾಧಗಳು ಹಾಗೂ ಭಯೋತ್ಪಾದನೆ ಕೃತ್ಯಗಳನ್ನು ವ್ಯಾಖ್ಯಾನಿಸಲಾಗಿದ್ದು, ಎಲ್ಲಾ ಕಾರ್ಯಾಚರಣೆ ಹಾಗೂ ಅಪರಾಧಕ್ಕೆ ಸಂಬಂಧಿಸಿದ ಸಾಕ್ಷ್ಯ ಸಂಗ್ರಹ ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯುವ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ಕಡ್ಡಾಯವಾಗಿದೆ.

• ಮಕ್ಕಳು ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ವಿಶೇಷ ಅಧ್ಯಾಯ ಸೇರಿಸಲಾಗಿದ್ದು, ಅಕ್ರಮ ಮಕ್ಕಳ ಮಾರಾಟ ಹಾಗೂ ಖರೀದಿಯನ್ನು ಘೋರ ಅಪರಾಧ ಎಂದು ಪರಿಗಣಿಸಲಾಗಿದೆ. ಅಪ್ರಾಪ್ತರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಗೆ ಯೋಗ್ಯ ಎಂದು ಪ್ರಸ್ತಾಪಿಸಲಾಗಿದೆ.

• ಹಳೆಯ ಕಾನೂನಿನಲ್ಲಿದ್ದ ಕೆಲವು ಸೆಕ್ಷನ್‌ಗಳನ್ನು ಒಗ್ಗೂಡಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯಲ್ಲಿದ್ದ 511 ಸೆಕ್ಷನ್‌ಗಳನ್ನು 358ಕ್ಕೆ ಇಳಿಸಲಾಗಿದೆ.

• ಮದುವೆಯ ಸುಳ್ಳು ಭರವಸೆಯ ಮೇಲೆ ಲೈಂಗಿಕ ಸಂಬಂಧಗಳನ್ನು ಬೆಳೆಸಿದ ನಂತರ ಮಹಿಳೆಯರನ್ನು ದೂರ ಮಾಡುವ ಪ್ರಕರಣಗಳಿಗೆ ಹೊಸ ನಿಬಂಧನೆಯನ್ನು ಮಾಡಲಾಗಿದೆ.

• ಹೊಸ ಕಾನೂನಿನ ಅನ್ವಯ ಆಸ್ಪತ್ರೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳಲ್ಲಿ ಸಂತ್ರಸ್ತರಿಗೆ ಉಚಿತ ಪ್ರಥಮ ಚಿಕಿತ್ಸೆ ಅಥವಾ ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಲಾಗಿದೆ.

* ಹೊಸ ಕಾನೂನುಗಳ ಅಡಿಯಲ್ಲಿ, ಮಹಿಳೆಯರ ವಿರುದ್ಧದ ಅಪರಾಧದಗಳಲ್ಲಿ ಸಂತ್ರಸ್ತರು ತಮ್ಮ ಪ್ರಕರಣದ ಪ್ರಗತಿಯ ಬಗ್ಗೆ 90 ದಿನಗಳೊಳಗಾಗಿ ಎಲ್ಲಾ ಮಾಹಿತಿಯನ್ನು ಪಡೆಯುವ ಹಕ್ಕು ಹೊಂದಿರುತ್ತಾರೆ. ಇದರಿಂದ ತನಿಖೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಹೊಸ ಕಾನೂನು ಖಚಿತಪಡಿಸುತ್ತದೆ.

• ಸಮನ್ಸ್‌ಗಳನ್ನು ಈಗ ವಿದ್ಯುನ್ಮಾನವಾಗಿ ಸಲ್ಲಿಸಬಹುದಾಗಿದೆ. ಈ ಮೂಲಕ ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ಕಾಗದ ಪತ್ರ ಕೆಲಸಗಳನ್ನು ಕಡಿಮೆ ಮಾಡಬಹುದು ಮತ್ತು ಪ್ರಕರಣದಲ್ಲಿ ಭಾಗಿಯಾದವರ ಮಧ್ಯೆ ಸಮರ್ಥ ಸಂವಹನಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.

• ಆರೋಪಿ ಮತ್ತು ಸಂತ್ರಸ್ತ ಇಬ್ಬರೂ ಎಫ್‌ಐಆರ್, ಪೊಲೀಸ್ ವರದಿ, ಚಾರ್ಜ್ ಶೀಟ್, ದಾಖಲಿಸ ಲಾದ ಹೇಳಿಕೆ, ತಪ್ರೊಪ್ಪಿಗೆ ಸೇರಿ ಸಂಬಂಧ ಪಟ್ಟ ದಾಖಲೆಗಳ ಪ್ರತಿಯನ್ನು 14 ದಿನಗಳೊಳಗೆ ಪಡೆಯಲು ಅಧಿಕಾರ ಹೊಂದಿರುತ್ತಾರೆ.

• ಪ್ರಕರಣಗಳ ವಿಚಾರಣೆಯಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಹಾಗೂ ಸಕಾಲಿಕ ನ್ಯಾಯ ವಿತರಣೆಗೆ ಗರಿಷ್ಠ ಎರಡು ವಿಚಾರಣೆ ಮುಂದೂಡಿಕೆಯನ್ನು ಮಾತ್ರ ನೀಡುತ್ತದೆ.

• ಸಾಕ್ಷಿಗಳ ಸುರಕ್ಷತೆ ಮತ್ತು ಸಹಕಾರವನ್ನು ಸಾಧಿಸುವ ನಿಟ್ಟಿನಲ್ಲಿ, ಕಾನೂನು ಪ್ರಕ್ರಿಯೆಗಳ ವಿಶ್ವಾಸಾರ್ಹತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಎಲ್ಲಾ ರಾಜ್ಯ ಸರ್ಕಾರಗಳು ಸಾಕ್ಷಿ ರಕ್ಷಣೆ ಯೋಜನೆಗಳನ್ನು ಜಾರಿಗೆ ತರುವುದನ್ನು ಕಡ್ಡಾಯಗೊಳಿಸಲಾಗಿದೆ.

• ಲಿಂಗ’ ಪದದ ವ್ಯಾಖ್ಯಾನವು ತೃತೀಯ ಲಿಂಗ ವ್ಯಕ್ತಿಗಳನ್ನೂ ಒಳಗೊಂಡಿದ್ದು, ಸಮಾನತೆಯನ್ನು ಉತ್ತೇಜಿಸುತ್ತದೆ.

• 15 ವರ್ಷದ ಒಳಗಿನ ಹಾಗೂ 60 ವರ್ಷ ಮೇಲ್ಪಟ್ಟವರು, ಅನಾರೋಗ್ಯಕ್ಕೆ ಒಳಗಾದವರು ಹಾಗೂ ವಿಶೇಷಚೇತನ ವ್ಯಕ್ತಿಗಳಿಗೆ ಪೊಲೀಸ್ ಠಾಣೆಗೆ ಭೇಟಿ ನೀಡುವುದಕ್ಕೆ ವಿನಾಯಿತಿ ನೀಡಲಾಗಿದ್ದು ಅವರಿದ್ದ ಸ್ಥಳದಲ್ಲೇ ಪೊಲೀಸ್ ನೆರವನ್ನು ಪಡೆಯಬಹುದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!