ಬೆಂಗಳೂರು, (ಜುಲೈ.01); ಪಕ್ಷದ ವರ್ಚಸ್ಸಿಗೆ ಹಿನ್ನಡೆಯಾಗುವಂತಹ ಹೇಳಿಕೆ ನೀಡುವವರಿಗೆ ನೋಟಿಸ್ ನೀಡಲಾಗುವುದು ಎಂಬ ಖಡಕ್ ಸಂದೇಶವನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುನಃ ರವಾನಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಪದಾಧಿಕಾರಿಗಳ ಸಭೆ ನಡೆಸಿದೆ. ಈ ವೇಳೆ ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಕೆಪಿಸಿಸಿ ಕಾರ್ಯಾಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೆಪಿಸಿಸಿ ಉಪಾಧ್ಯಕ್ಷರೊಡನೆ ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳಿಗೆ ಕಾರ್ಯಕರ್ತರನ್ನ ಸಜ್ಜುಗೊಳಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸಿಎಂ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರಗಳ ಕುರಿತು ಅನಗತ್ಯ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವವರ ಮೇಲೂ ಹೈಕಮಾಂಡ್ ಕಣ್ಣಿಟ್ಟಿದೆ ಎಂದು ಎಚ್ಚರಿಕೆ ನೀಡಿದರು.
ಕೆಲವರಿಗೆ ಮಾಧ್ಯಮದವರ ಮುಂದೆ ಮಾತನಾಡುವ ಚಟವಿದ್ದು, ಏನೇನೋ ಮಾತನಾಡಿ ನನ್ನನ್ನು ಬಗ್ಗಿಸಬೇಕು ಎಂದು ಕೊಂಡಿದ್ದಾರೆ. ಅದನ್ನೆಲ್ಲ ಎಐಸಿಸಿ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದರು.
ಇದಲ್ಲದೇ ಮುಂಬರುವ ವಿಧಾನಸಭೆ ಉಪಚುನಾವಣೆಗೆ ಬೂತ್ ಮಟ್ಟದಿಂದ ಪಕ್ಷ ಬಲಪಡಿಸುವ ಹಾಗೂ ಗ್ಯಾರಂಟಿಗಳನ್ನು ಮನೆಮನೆಗಳಿಗೆ ತಲುಪಿಸುವ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಿ. ಪಕ್ಷದ ಪದಾಧಿಕಾರಿಗಳಿಗೆ ಐಡಿಕಾರ್ಡ್ಗಳನ್ನು ಡಿಕೆಶಿ ವಿತರಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….