ಸಮಾಜಮುಖಿ ಆರೋಗ್ಯಕರ ಚಟುವಟಿಕೆಗಳಿಗೆ ನಿವೃತ್ತ ನೌಕರರು ಮಾದರಿ; ರಾಂ.ಕೆ.ಹನುಮಂತಯ್ಯ

ದೊಡ್ಡಬಳ್ಳಾಪುರ, (ಜುಲೈ.06); ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ದೊಡ್ಡಬಳ್ಳಾಪುರ ತಾಲೂಕು ಶಾಖೆ ವತಿಯಿಂದ ನಡೆಯುವ ಮಾಸಿಕ ಸಭೆಯಲ್ಲಿ ಕೈಗೊಳ್ಳುವ ಹಲವು ಸಮಾಜಮುಖಿ ಕಾರ್ಯಗಳು ಆರೋಗ್ಯಕರ ಚಟುವಟಿಕೆಗಳಿಗೆ ಮಾದರಿ ಎಂದು ಬೆಂಗಳೂರಿನ ಕನ್ನಡಿಗರ ಸ್ನೇಹ ಕೂಟದ ಸಂಸ್ಥಾಪಕ ಅಧ್ಯಕ್ಷ, ಸಾಹಿತಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಆರಕ್ಷಕ ರತ್ನ ರಾಂ.ಕೆ.ಹನುಮಂತಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಪ್ರತಿ ತಿಂಗಳು ಸಭೆ ಸೇರಿ ಹಿರಿಯ ಚೇತನಗಳಿಗೆ ಚೈತನ್ಯ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುತ್ತಿರುವುದು ಶ್ಲಾಘನೀಯ ಎಂದರು.

ರಾಂ.ಕೆ ಅವರು 96 ವರ್ಷ ವಯೋಮಾನದ ನರಸಯ್ಯನ ಅಗ್ರಹಾರ ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಕೆ.ವೀರೇಗೌಡ,‌90 ವರ್ಷ ವಯೋಮಾನದ ಹಾದ್ರಿಪುರದ ನಿವೃತ್ತ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಹನುಮಂತರಾಯಪ್ಪ, 85 ವರ್ಷ ವಯೋಮಾನದ ರೋಜಿಪುರದ ನಿವೃತ್ತ ಶಿಕ್ಷಕಿ ಸರ್ವಮಂಗಳಮ್ಮ ,85 ವರ್ಷ ವಯೋಮಾನದ ಸೋಮೇಶ್ವರ ಬಡಾವಣೆ ನಿವೃತ್ತ ಮುಖ್ಯ ಶಿಕ್ಷಕ ಸಿ.ಬಸವರಾಜು ಮತ್ತು 80 ವಯೋಮಾನದ ಗುಂಡಪ್ಪ ನಾಯಕನಹಳ್ಳಿಯ ನಿವೃತ್ತ ಶಿಕ್ಷಕ ಉಗ್ರೇಗೌಡ ಇವರುಗಳಿಗೆ ಹೆಣ್ಣೂರು ಕನ್ನಡಿಗರ ಸ್ನೇಹ ಕೂಟ ಪರವಾಗಿ ಸನ್ಮಾನ ನೀಡುವ ಮೂಲಕ ಗೌರವಿಸಿದರು.

ಸಂಘದ ಬೆನ್ನೆಲುಬಾಗಿ ನಿಂತು ಸದಾ ಚೈತನ್ಯದ ಚಿಲುಮೆಯಂತೆ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದ ನಿವೃತ್ತ ಬಂಧು ಕದರಪ್ಪ ವಿಧಿವಶರಾಗಿದ್ದು ಅವರಿಗೆ ಸಭೆಯ ಮೂಲಕ ಮೌನ ಶ್ರದ್ಧಾಂಜಲಿ ಸಲ್ಲಿಸಿ ಅವರ ಪವಿತ್ರವಾದ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಮಹಾಲಿಂಗಯ್ಯ ಮಾತನಾಡಿ, ಅರವತ್ತು ವರ್ಷ ಮೇಲ್ಪಟ್ಟವರ ಜೀವನ ಶೈಲಿ ಹೇಗಿರಬೇಕು? ಅನ್ನುವ ಅತ್ಯುತ್ತಮ ಮಾಹಿತಿಯನ್ನು ಓದಿ ಮನವರಿಕೆ ಮಾಡಿಕೊಟ್ಟರು. ಸಂಘದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲು ಎಲ್ಲಾ ಇಲಾಖೆಗಳ ನಿವೃತ್ತ ನೌಕರರು ಅಧಿಕಾರ ಅಂತಸ್ತು ಮರೆತು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಕೋರಿದರು.

ಇದೇ ವೇಳೆ  ವಕೀಲರು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಟಿ.ನಂಜಪ್ಪನವರು ಸಂಘದ ವರದಿಯನ್ನು ಆಧರಿಸಿ ಮಾತನಾಡಿ, ಸಂಘದ ಪ್ರಗತಿ ಪರ ಚಟುವಟಿಕೆಗಳನ್ನು ಪ್ರಶಂಸಿಸಿದರು.

ಬೆಂಗಳೂರು ಉತ್ತರ ತಾಲೂಕಿನ ನಿವೃತ್ತ ಉಪನ್ಯಾಸಕ ಶಿವರಾಜು ರವರು ಪೌರಾಣಿಕ ಭಕ್ತಿ ಗೀತೆಗಳನ್ನು ಹಾಡಿ ಹಿರಿಯ ಚೇತನಗಳನ್ನು ಭಾವ ಪರವಶರನ್ನಾಗಿ ಮಾಡಿದರು.

ನವೋದಯ ವಿದ್ಯಾಲಯದ ನಿವೃತ್ತ ಜಿ.ಎಸ್ ಹೆಗಡೆ ಅವರು ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಸಾಧ್ಯವಾದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ನೆರವಾಗುವ ಅಂಶಗಳನ್ನು ತಿಳಿಸಿದರು.

 ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಟಿ.ಮುನಿರಾಜು ರವರು ಪ್ರತಿಯೊಬ್ಬ ನಿವೃತ್ತಿ ಹೊಂದಿದ ಸದಸ್ಯರು ಸಂಘದ ಸದಸ್ಯತ್ವ ಪಡೆದು ಕೈಗೊಳ್ಳುವಂತೆ ಸಲಹೆ ನೀಡಿದರು.ಪ್ರಸ್ತುತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಎಲ್ಲರೂ ಜಾಗರೂಕರಾಗಿರಿ ಎಂದು ಕರೆ ನೀಡಿದರು.

ಸಭೆಯಲ್ಲಿ ವರದಿಯನ್ನು ಕಾರ್ಯದರ್ಶಿ ಕೆ.ಚನ್ನಪ್ಪ ಓದಿ ದಾಖಲಿಸಿದರು.ಸಂಘದ ಆಯವ್ಯಯವನ್ನು ಕೋಶಾಧ್ಯಕ್ಷ ರಂಗಸ್ವಾಮಯ್ಯ ಮಂಡಿಸಿ, ಅನುಮೋದನೆ ಪಡೆದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಅಬ್ದುಲ್ ಕರೀಂ, ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್ ಪ್ರಭಾಕರ್, ಉಪಾಧ್ಯಕ್ಷ ಕರಿಬಸವದೇವರು ,ಉಳಿದಂತೆ ಸಂಘದ ಹಿರಿಯರಾದ ತಿಪ್ಪೇಸ್ವಾಮಿ, ಶಿವರುದ್ರಯ್ಯ, ಪ್ರೊ.ಈಶ್ವರಾಚಾರ್, ಕೆ.ಎನ್ ಸರೋಜಮ್ಮ, ಗಂಗಾಂಬಿಕೆ, ಡಿ.ವಿ ಪದ್ಮಾವತಮ್ಮ, ರಾಧಾ ಲಕ್ಷ್ಮೀ, ಮಹಾದೇವಯ್ಯ, ಲಕ್ಷ್ಮೀಪತಿ, ಕೆ.ಜಿ.ಮುನಿರಾಜು, ನಜೀರ್, ರಾಮಕೃಷ್ಣಯ್ಯ, ನರಸಿಂಹಯ್ಯ, ಕಗ್ಗೇರಪ್ಪ ಮುಂತಾದವರು ಉಪಸ್ಥಿತರಿದ್ದರು.

ಹಾಡೋನಹಳ್ಳಿ ಜಾನಪದ ಕಲಾವಿದ ಗೋವಿಂದರಾಜು ಮತ್ತು ಜಯರಾಂ ಗೀತೆಗಳನ್ನು ಹಾಡಿ ರಂಜಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ ಕುಸಿಯುತ್ತಿಲ್ಲ.. ಡಾಲರ್ ಬಲಗೊಳ್ಳುತ್ತಿದೆ: ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥನೆ

ರೂಪಾಯಿ (Rupee) ಮೌಲ್ಯ ಕುಸಿಯುತ್ತಿಲ್ಲ, ಡಾಲರ್ (Dollar) ಮೌಲ್ಯ ಬಲಗೊಳ್ಳುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳುವ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದ್ದಾರೆ.

[ccc_my_favorite_select_button post_id="120583"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]