ಸಮಾಜಮುಖಿ ಆರೋಗ್ಯಕರ ಚಟುವಟಿಕೆಗಳಿಗೆ ನಿವೃತ್ತ ನೌಕರರು ಮಾದರಿ; ರಾಂ.ಕೆ.ಹನುಮಂತಯ್ಯ

ದೊಡ್ಡಬಳ್ಳಾಪುರ, (ಜುಲೈ.06); ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ದೊಡ್ಡಬಳ್ಳಾಪುರ ತಾಲೂಕು ಶಾಖೆ ವತಿಯಿಂದ ನಡೆಯುವ ಮಾಸಿಕ ಸಭೆಯಲ್ಲಿ ಕೈಗೊಳ್ಳುವ ಹಲವು ಸಮಾಜಮುಖಿ ಕಾರ್ಯಗಳು ಆರೋಗ್ಯಕರ ಚಟುವಟಿಕೆಗಳಿಗೆ ಮಾದರಿ ಎಂದು ಬೆಂಗಳೂರಿನ ಕನ್ನಡಿಗರ ಸ್ನೇಹ ಕೂಟದ ಸಂಸ್ಥಾಪಕ ಅಧ್ಯಕ್ಷ, ಸಾಹಿತಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಆರಕ್ಷಕ ರತ್ನ ರಾಂ.ಕೆ.ಹನುಮಂತಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಪ್ರತಿ ತಿಂಗಳು ಸಭೆ ಸೇರಿ ಹಿರಿಯ ಚೇತನಗಳಿಗೆ ಚೈತನ್ಯ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುತ್ತಿರುವುದು ಶ್ಲಾಘನೀಯ ಎಂದರು.

ರಾಂ.ಕೆ ಅವರು 96 ವರ್ಷ ವಯೋಮಾನದ ನರಸಯ್ಯನ ಅಗ್ರಹಾರ ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಕೆ.ವೀರೇಗೌಡ,‌90 ವರ್ಷ ವಯೋಮಾನದ ಹಾದ್ರಿಪುರದ ನಿವೃತ್ತ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಹನುಮಂತರಾಯಪ್ಪ, 85 ವರ್ಷ ವಯೋಮಾನದ ರೋಜಿಪುರದ ನಿವೃತ್ತ ಶಿಕ್ಷಕಿ ಸರ್ವಮಂಗಳಮ್ಮ ,85 ವರ್ಷ ವಯೋಮಾನದ ಸೋಮೇಶ್ವರ ಬಡಾವಣೆ ನಿವೃತ್ತ ಮುಖ್ಯ ಶಿಕ್ಷಕ ಸಿ.ಬಸವರಾಜು ಮತ್ತು 80 ವಯೋಮಾನದ ಗುಂಡಪ್ಪ ನಾಯಕನಹಳ್ಳಿಯ ನಿವೃತ್ತ ಶಿಕ್ಷಕ ಉಗ್ರೇಗೌಡ ಇವರುಗಳಿಗೆ ಹೆಣ್ಣೂರು ಕನ್ನಡಿಗರ ಸ್ನೇಹ ಕೂಟ ಪರವಾಗಿ ಸನ್ಮಾನ ನೀಡುವ ಮೂಲಕ ಗೌರವಿಸಿದರು.

ಸಂಘದ ಬೆನ್ನೆಲುಬಾಗಿ ನಿಂತು ಸದಾ ಚೈತನ್ಯದ ಚಿಲುಮೆಯಂತೆ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದ ನಿವೃತ್ತ ಬಂಧು ಕದರಪ್ಪ ವಿಧಿವಶರಾಗಿದ್ದು ಅವರಿಗೆ ಸಭೆಯ ಮೂಲಕ ಮೌನ ಶ್ರದ್ಧಾಂಜಲಿ ಸಲ್ಲಿಸಿ ಅವರ ಪವಿತ್ರವಾದ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಮಹಾಲಿಂಗಯ್ಯ ಮಾತನಾಡಿ, ಅರವತ್ತು ವರ್ಷ ಮೇಲ್ಪಟ್ಟವರ ಜೀವನ ಶೈಲಿ ಹೇಗಿರಬೇಕು? ಅನ್ನುವ ಅತ್ಯುತ್ತಮ ಮಾಹಿತಿಯನ್ನು ಓದಿ ಮನವರಿಕೆ ಮಾಡಿಕೊಟ್ಟರು. ಸಂಘದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲು ಎಲ್ಲಾ ಇಲಾಖೆಗಳ ನಿವೃತ್ತ ನೌಕರರು ಅಧಿಕಾರ ಅಂತಸ್ತು ಮರೆತು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಕೋರಿದರು.

ಇದೇ ವೇಳೆ  ವಕೀಲರು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಟಿ.ನಂಜಪ್ಪನವರು ಸಂಘದ ವರದಿಯನ್ನು ಆಧರಿಸಿ ಮಾತನಾಡಿ, ಸಂಘದ ಪ್ರಗತಿ ಪರ ಚಟುವಟಿಕೆಗಳನ್ನು ಪ್ರಶಂಸಿಸಿದರು.

ಬೆಂಗಳೂರು ಉತ್ತರ ತಾಲೂಕಿನ ನಿವೃತ್ತ ಉಪನ್ಯಾಸಕ ಶಿವರಾಜು ರವರು ಪೌರಾಣಿಕ ಭಕ್ತಿ ಗೀತೆಗಳನ್ನು ಹಾಡಿ ಹಿರಿಯ ಚೇತನಗಳನ್ನು ಭಾವ ಪರವಶರನ್ನಾಗಿ ಮಾಡಿದರು.

ನವೋದಯ ವಿದ್ಯಾಲಯದ ನಿವೃತ್ತ ಜಿ.ಎಸ್ ಹೆಗಡೆ ಅವರು ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಸಾಧ್ಯವಾದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ನೆರವಾಗುವ ಅಂಶಗಳನ್ನು ತಿಳಿಸಿದರು.

 ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಟಿ.ಮುನಿರಾಜು ರವರು ಪ್ರತಿಯೊಬ್ಬ ನಿವೃತ್ತಿ ಹೊಂದಿದ ಸದಸ್ಯರು ಸಂಘದ ಸದಸ್ಯತ್ವ ಪಡೆದು ಕೈಗೊಳ್ಳುವಂತೆ ಸಲಹೆ ನೀಡಿದರು.ಪ್ರಸ್ತುತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಎಲ್ಲರೂ ಜಾಗರೂಕರಾಗಿರಿ ಎಂದು ಕರೆ ನೀಡಿದರು.

ಸಭೆಯಲ್ಲಿ ವರದಿಯನ್ನು ಕಾರ್ಯದರ್ಶಿ ಕೆ.ಚನ್ನಪ್ಪ ಓದಿ ದಾಖಲಿಸಿದರು.ಸಂಘದ ಆಯವ್ಯಯವನ್ನು ಕೋಶಾಧ್ಯಕ್ಷ ರಂಗಸ್ವಾಮಯ್ಯ ಮಂಡಿಸಿ, ಅನುಮೋದನೆ ಪಡೆದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಅಬ್ದುಲ್ ಕರೀಂ, ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್ ಪ್ರಭಾಕರ್, ಉಪಾಧ್ಯಕ್ಷ ಕರಿಬಸವದೇವರು ,ಉಳಿದಂತೆ ಸಂಘದ ಹಿರಿಯರಾದ ತಿಪ್ಪೇಸ್ವಾಮಿ, ಶಿವರುದ್ರಯ್ಯ, ಪ್ರೊ.ಈಶ್ವರಾಚಾರ್, ಕೆ.ಎನ್ ಸರೋಜಮ್ಮ, ಗಂಗಾಂಬಿಕೆ, ಡಿ.ವಿ ಪದ್ಮಾವತಮ್ಮ, ರಾಧಾ ಲಕ್ಷ್ಮೀ, ಮಹಾದೇವಯ್ಯ, ಲಕ್ಷ್ಮೀಪತಿ, ಕೆ.ಜಿ.ಮುನಿರಾಜು, ನಜೀರ್, ರಾಮಕೃಷ್ಣಯ್ಯ, ನರಸಿಂಹಯ್ಯ, ಕಗ್ಗೇರಪ್ಪ ಮುಂತಾದವರು ಉಪಸ್ಥಿತರಿದ್ದರು.

ಹಾಡೋನಹಳ್ಳಿ ಜಾನಪದ ಕಲಾವಿದ ಗೋವಿಂದರಾಜು ಮತ್ತು ಜಯರಾಂ ಗೀತೆಗಳನ್ನು ಹಾಡಿ ರಂಜಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. D.K.Shivakumar

[ccc_my_favorite_select_button post_id="109990"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]