ಹೊಸಕೋಟೆ, (ಜುಲೈ.08): ಹಳೆಯ ದ್ವೇಷದಿಂದ ಗ್ರಾಮಪಂಚಾಯಿತಿ ಸದಸ್ಯನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಬೈಲ್ ನರಸಾಪುರ ಗ್ರಾಮದಲ್ಲಿ ಸಂಭವಿಸಿದೆ.
ಮೃತ ಗ್ರಾಮಪಂಚಾಯಿತಿ ಸದಸ್ಯನನ್ನು 45 ವರ್ಷದ ಅಪಾಕ್ ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ 10.00 ಗಂಟೆಗೆ ತಾಲೂಕಿನ ನಂದಗುಡಿ ಹೋಬಳಿಯ ನಂದಗುಡಿ ಪೋಲಿಸ್ ಠಾಣಾ ವ್ಯಾಪ್ತಿಯ ಬೈಲ್ ನರಸಾಪುರ ಗ್ರಾಮ ಪಂಚಾಯತಿ ಕಛೇರಿಯ ಬಳಿ ಹಾಲಿ ಗ್ರಾಮ ಪಂಚಾಯತಿಯ ಕಾಂಗ್ರೆಸ್ ಬೆಂಬಲಿತ ಸದಸ್ಯ ಅಪಾಕ್, ಮೊಬೈಲ್ ಪೋನ್ ಬಳಿ ಮಾತನಾಡುತ್ತಿದ್ದ ದುಷ್ಕರ್ಮಿಗಳು ಲಾಂಗ್ ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಅರೋಪಿಗಳು ಪರಾರಿಯಾಗಿದ್ದಾರೆ
ಘಟನೆಯಲ್ಲಿ ತೀವ್ರ ರಕ್ತಸ್ರಾವದಿಂದ ಅಪಾಕ್ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ವಿಷಯ ತಿಳಿದ ನಂದಗುಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.
ಈ ಕೃತ್ಯವು ಹಳೆಯ ದ್ವೇಷದಿಂದ ಅಗಿರುವ ಶಂಕೆ ವ್ಯಕ್ತವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….