ಬೆಂಗಳೂರು, (ಜುಲೈ.08); ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಘಿ ಪ್ರಕರಣಗಳನ್ನೇ ಮುಂದಿಟ್ಟು ರಾಜಕೀಯವಾಗಿ ವಿಪಕ್ಷಗಳ ಬಳಸಬಾರದು, ವಿಪಕ್ಷನಾಯಕ ಆರ್.ಅಶೋಕ ಅವರು ಏನೇನೋ ಮಾತನಾಡುವ ಬದಲು ವೈಜ್ಞಾನಿಕವಾಗಿ ಮಾತನಾಡಲಿ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೊಳ್ಳೆ ಕಚ್ಚುವುದರಿಂದ ಹರಡುವ ಡೆಂಘಿಕ್ಕಿಂತಲೂ ಬಿಜೆಪಿಗರು ಹೇಳುವ ಸುಳ್ಳುಗಳೇ ವೇಗವಾಗಿ ಹರಡುತ್ತಿವೆ. ಜನರಲ್ಲಿ ಭಯ ಹುಟ್ಟಿಸುವ, ತಪ್ಪು ಸಂದೇಶ ನೀಡುವ ಹೇಳಿಕೆಗಳನ್ನು ವಿರೋಧ ಪಕ್ಷದವರು ನೀಡಬಾರದು. ಬೇಕಿದ್ದರೆ ಡೆಂಘಿ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಕೈಜೋಡಿಸಬೇಕು. ಅದು ಅವರ ಜವಾಬ್ದಾರಿಯಾಗಿರುತ್ತದೆ ಎಂದರು.
ಈಜು ಮಾಡುವುದು ಒಂದು ವ್ಯಾಯಾಮದ ಭಾಗ. ನನ್ನ ದೈಹಿಕ ಹಿತದೃಷ್ಟಿಯಿಂದ ಈಜು ಆಡಿದ್ದೆ. ಅದನ್ನೇ ಬಿಜೆಪಿಗರು ಟೀಕಿಸುತ್ತಾರೆ. ಅವರಿಗೆ ಸ್ವಿಮ್ ಮಾಡುವುದೆಂದರೆ ಬಿಜೆಪಿಯವರಿಗೆ ಬರೀ ಮೋಜು ಮಸ್ತಿ ಎಂದು ಮಾತನಾಡಿ ಅಭ್ಯಾಸ ಇದೆ.
???? ಇದನ್ನು ಓದಿ: ಮಾಜಿ ಕೃಷಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ..!
ನಿನ್ನೆ ನೆಲಮಂಗಲ ಬಳಿ ಜನರಿಗೆ ಮದ್ಯ, ಬಾಡೂಟ ಹಂಚಿದ್ದರಲ್ಲ ಆ ರೀತಿ ನಾನೇನಾದ್ರೂ ಮಾಡಿದ್ದೀನಾ ಎಂದು ಪ್ರಶ್ನಿಸಿದ ಸಚಿವ ದಿನೇಶ್ ಗುಂಡೂರಾವ್, ಕಾರ್ಪೊರೇಷನ್ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ವಿಮ್ ಮಾಡ್ದೆ ತಪ್ಪೇನಿದೆ? ನಂತರ ಆಸ್ಪತ್ರೆಗಳಿಗೆ ಭೇಟಿ ನೀಡಿ ನನ್ನ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರು ಸುಮ್ಮನೆ ಸುಳ್ಳುಗಳನ್ನು ಹಬ್ಬಿಸುತ್ತಾರೆ ಎಂದು ತಿರುಗೇಟು ನೀಡಿದರು.
ಅಲ್ಲದೆ ಒಂದಿಷ್ಟು ಜನ ಮೆಡಿಕಲ್ ಎಮರ್ಜೆನ್ಸಿ ಅಂತ ಘೋಷಿಸಿ ಎಂದಿದ್ದಾರೆ. ಆತಂಕ ಸೃಷ್ಟಿ ಮಾಡುವ ಪರಿಸ್ಥಿತಿಯೂ ಇಲ್ಲ. ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದ ಡಾ ಮಂಜುನಾಥ್ ಅವರ ಹೇಳಿಕೆಗೆ ಟಾಂಗ್ ಕೊಟ್ಟರು.
ಹೆಚ್ಚು ಹಣ ಕೇಳಿದರೆ ದೂರು ನೀಡಿ: ಹೆಚ್ಚು ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಇದರಿಂದ ಡೆಂಘಿ ಪ್ರಕರಣಗಳು ಹೆಚ್ಚೆಚ್ಚು ಪತ್ತೆಯಾಗುತ್ತಿವೆ. ಡೆಂಘಿ ನಿಯಂತ್ರಣಕ್ಕೆ ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಅಗತ್ಯಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಮಾರ್ಗಸೂಚಿಗಳನ್ನು ನೀಡಲಾಗಿದೆ.
ಇನ್ನು ಡೆಂಘಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿರುವ ಮೊತ್ತಕ್ಕಿಂತ ಜಾಸ್ತಿ ಕೇಳಿದರೆ, ಅಂತಹ ಆಸ್ಪತ್ರೆಗಳ ವಿರುದ್ಧ ದೂರು ನೀಡಿ. ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….