ಹುಬ್ಬಳ್ಳಿ, (ಜುಲೈ.08); ಕೇಂದ್ರ ಸರ್ಕಾರದ ಭಾರತ್ ಅಕ್ಕಿ ಬಂದ್ ಆಗಿಲ್ಲ. ಈ ತಿಂಗಳಿಂದ ಮತ್ತೆ ವಿತರಣೆ ಆರಂಭವಾಗಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ಚುನಾವಣೆಗೂ ಮೊದಲು ವಿತರಿಸುತ್ತಿದ್ದ ಭಾರತ್ ಅಕ್ಕಿ, ದಾಲ್ ಹಾಗೂ ಮೈದಾ ಬಂದ್ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ ನಾವು ಭಾರತ್ ಅಕ್ಕಿ ಬಂದ್ ಮಾಡಿಲ್ಲ. ಭಾರತ್ ಅಕ್ಕಿ ವಿತರಣೆಗೆ ಸಂಬಂಧಿಸಿದ ಮೊದಲನೇ ಆದೇಶ ಜೂ.30ರ ವರೆಗೆ ಮಾತ್ರ ಇತ್ತು. ಅದನ್ನು ಮತ್ತೆ ವಿಸ್ತರಿಸಲಿದ್ದೇವೆ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….