ನವದೆಹಲಿ, (ಜುಲೈ.08); ಹಿಂದುಗಳು ಎಂದು ಕೊಳ್ಳುವವರು ದ್ವೇಷ, ಹಿಂಸೆ, ಸುಳ್ಳನ್ನು ಹರಡುತ್ತಾರೆ ಎಂದು ಬಿಜೆಪಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇತ್ತೀಚೆಗೆ ಸಂಸತ್ನಲ್ಲಿ ಭಾಷಣದ ಮಧ್ಯೆ ನೀಡಿರುವ ಹೇಳಿಕೆಯನ್ನು ತಿರುಚಿ, ಹಿಂದೂಗಳನ್ನು ಎತ್ತಿಕಟ್ಟಲು ಷಡ್ಯಂತ್ರ ರೂಪಿಸುತ್ತಿರುವವರಿಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿಗಳು ತೀಕ್ಷ್ಣ ಉತ್ತರ ನೀಡಿದ್ದು, ಹೇಳಿಕೆ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿರುವ ಬಿಜೆಪಿ ನಾಯಕರು ಈ ಕುರಿತು ವಾಗ್ದಾಳಿ ನಡೆಸುವುದನ್ನು ಮುಂದುವರಿಸಿದ್ದಾರೆ. ಆದರೆ ಪ್ರಚಾರಗೊಂಡಿರುವ ವೀಡಿಯೊ ನಕಲಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇವೆಲ್ಲದರ ಮಧ್ಯೆ ಜ್ಯೋತಿರ್ ಮಠದ 46ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿಗಳು ರಾಹುಲ್ ಗಾಂಧಿ ಅವರ ಬೆಂಬಲಕ್ಕೆ ನಿಂತಿದ್ದು, ರಾಹುಲ್ ಗಾಂಧಿಗೆ ಆನೆ ಬಲ ದೊರೆತಂದಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಶ್ರೀಗಳು, ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಮಾಡಿದ ಸಂಪೂರ್ಣ ಭಾಷಣವನ್ನು ನಾನು ಕೇಳಿದ್ದೇನೆ, ಅವರು ಹಿಂದೂ ಧರ್ಮದ ವಿರುದ್ಧವಾಗಿ ಏನನ್ನೂ ಮಾತನಾಡಿಲ್ಲ. ಹಿಂದೂ ಧರ್ಮದಲ್ಲಿ ಹಿಂಸೆಗೆ ಸ್ಥಾನವಿಲ್ಲ ಎಂದು ಅವರು ಹೇಳುತ್ತಾರೆ. ಅವರು ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ ಎಂದಾದ ಮೇಲೆ ಅವರು ವಿರುದ್ಧ ಇಂತಹ ಆರೋಪ ಮಾಡುವುದು ತಪ್ಪು.
ಅವರ ಭಾಷಣದ ಅರ್ಧದಷ್ಟು ಹೇಳಿಕೆಯನ್ನು ಹರಡಿ ಅಪಪ್ರಚಾರ ಮಾಡುವುದು ಅಪರಾಧವಾಗಿದೆ, ಇದನ್ನು ಮಾಡಿದ ವ್ಯಕ್ತಿಗೆ ಶಿಕ್ಷೆಯಾಗಬೇಕು. ಹೀಗೆ ಮಾಡುವವರು ಪತ್ರಕರ್ತರೇ ಆಗಿದ್ದರೂ, ವಿದ್ಯುನ್ಮಾನ ಮಾಧ್ಯವೇ ಆಗಿದ್ದರೂ ಅದು ತಪ್ಪು.
ಆ ವ್ಯಕ್ತಿ ಹಿಂದೂ ಧರ್ಮದ ವಿರುದ್ಧ ಮಾತನಾಡೇ ಇಲ್ಲ ಎಂದಾದ ಮೇಲೆ ಅವರ ವಿರುದ್ಧ ಅಪಪ್ರಚಾರ ಮಾಡುವುದು ಸರಿಯಲ್ಲ.
ತಮ್ಮನ್ನು ಹಿಂದೂ ಎಂದು ಕರೆದುಕೊಳ್ಳುತ್ತ ಸುಳ್ಳು, ದ್ವೇಷ ಮತ್ತು ಹಿಂಸಾಚಾರದಲ್ಲಿ ತೊಡಗುವವರು ಹಿಂದೂ ಧರ್ಮದ ನಿಜವಾದ ಸಾರವನ್ನು ತಪ್ಪಾಗಿ ಪ್ರತಿನಿಧಿಸುತ್ತಿದ್ದಾರೆ ಎಂದು ಎದುರಿದ್ದ ಸರ್ಕಾರದವರಿಗೆ ಅವರು ಹೇಳಿದ್ದಾರೆ ಎಂದು ಶ್ರೀಗಳು ಹೇಳಿದ್ದಾರೆ.
ಪ್ರಧಾನಿ ಮೋದಿ ಈ ವಿಷಯವನ್ನು ಹಿಡಿದು ಪ್ರತಿಕ್ರಿಯಿಸಿದಾಗ, ರಾಹುಲ್ ಗಾಂಧಿ ತಮ್ಮ ನಿಲುವನ್ನು ಸಮರ್ಥಿಸಿಕೊಂಡು, ಆರ್ಎಸ್ಎಸ್, ಬಿಜೆಪಿ ಮತ್ತು ಮೋದಿ ಇಡೀ ಹಿಂದೂ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….