ಬೆಂಗಳೂರು, (ಜುಲೈ.08): ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಅವರಿಗೆ ನೆಲಮಂಗಲದಲ್ಲಿ ಅಭಿನಂದನಾ ಸಮಾವೇಶ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಎಣ್ಣೆ, ಬಾಡೂಟಕ್ಕೆ ಮುಗಿಬಿದ್ದ ದೃಶ್ಯ ಕಂಡುಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಹೇಳುವುದು ಒಂದು ಮಾಡುವುದು ಇನ್ನೊಂದು, ನಂಬುವುದು ಹೇಗೋ ಕಾಣೆ..
ರಾಜ್ಯ ಡೆಂಗಿ ಪೀಡಿತವಾಗಿರುವಾಗ ಬಿಜೆಪಿ ನಾಯಕರು ಮದ್ಯ ಹಂಚಿಕೆಯಲ್ಲಿ ನಿರತರಾಗಿದ್ದಾರೆ. ನಾನು ಮಂಗಳೂರಿಗೆ ಭೇಟಿ ಕೊಟ್ಟಾಗ ಈಜು ಕೊಳದಲ್ಲಿ ಈಜಿದ್ದನ್ನೇ ಪ್ರಶ್ನಿಸಿದ ಬಿಜೆಪಿ ನಾಯಕರು ಈಗೆಲ್ಲಿದ್ದಾರೆ ? ಇದೇನಾ ನಿಮ್ಮ ಸಂಸ್ಕ್ರತಿ ?
ನೆಲಮಂಗಲದ ಹೊರವಲಯದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭಕ್ಕೆ ಆಗಮಿಸಿದ್ದ ಜನರಿಗಾಗಿ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು.
ಬಗೆಬಗೆಯ ಬಾಡೂಟ ಖಾದ್ಯಕ್ಕಾಗಿ ಜನರ ನೂಕುನುಗ್ಗಲು ಏರ್ಪಟ್ಟಿತ್ತು. ಸಮಾರಂಭಕ್ಕೆ ಬಂದಿದ್ದ ಕಾರ್ಯಕರ್ತರಿಗೆ ಬಾಡೂಟದ ಜೊತೆಗೆ ಎಣ್ಣೆ ಸಹ ನೀಡಲಾಗಿತ್ತು. ಎಣ್ಣೆ ಪಡೆದುಕೊಳ್ಳಲು ಜನರ ನೂಕುನುಗ್ಗಲು ಏರ್ಪಟ್ಟಿತ್ತು.
ಸಮಾವೇಶಕ್ಕೆ ಬಂದವರಿಗೆ ಬಿಯರ್ ಹಾಗೂ ಹಾಟ್ ಡ್ರಿಂಕ್ಸ್ ವ್ಯವಸ್ಥೆ ಮಾಡಲಾಗಿತ್ತು. ಜನ ಮುಗಿಬಿದ್ದು ಎಣ್ಣೆ ಪಡೆದುಕೊಂಡರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….