ಚಿಕ್ಕಬಳ್ಳಾಪುರ, (ಜುಲೈ.08): ನನ್ನ ರಾಜಕೀಯ ಜೀವನದಲ್ಲ ಎಂದಿಗೂ ಮದ್ಯ ಹಂಚಿಕೆ ಮಾಡಿಲ್ಲ. ಮದ್ಯ ಹಂಚಿಕೆ ಮಾಡುವ ರಾಜಕೀಯ ನನಗೆ ಅವಶ್ಯಕತೆ ಇಲ್ಲ. ಈ ರೀತಿ ಮದ್ಯ ಹಂಚಿ ರಾಜಕೀಯ ಮಾಡುವುದು ತಪ್ಪು. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಸಂಸದ ಡಾ. ಕೆ.ಸುಧಾಕರ್ ಹೇಳಿದ್ದಾರೆ.
ನೆಲಮಂಗಲ ಬಳಿ ಭಾನುವಾರ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು ಆಯೋಜಿಸಿದ್ದ ಸಂಸದ ಸುಧಾಕರ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಆರೋಪ ವಿಚಾರ ಕುರಿತು ಅವರು ಪ್ರತಿಕ್ರಿಯೆ ನೀಡಿದರು.
ನೆಲಮಂಗಲ ತಾಲೂಕಿನ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು ನನಗೆ ಅಭಿನಂದಿಸಲು ನಾನು ಹಾಗೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಕರೆದಿದ್ದರು. ಎಲ್ಲ ಆಯೋಜನೆಯನ್ನು ಅವರೇ ಮಾಡಿದ್ದರು. ನಾವು ಅಲ್ಲಿಗೆ ಹೋಗಿ ಕಾರ್ಯಕ್ರಮ ಮುಗಿಸಿ ಬಂದಿದ್ದೇವೆ.
ನಂತರದ ಅಲ್ಲಿ ನಡೆದ ವಿಚಾರದ ಬಗ್ಗೆ ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಅದು ಆಯೋಜಿಸಿದವರು ಮಾಡಿದ್ದಾರಾ? ಅಥವಾ ಅಲ್ಲಿಗೆ ಬಂದವರು ಮದ್ಯ ಸೇವಿಸಿದ್ದರಾ ಎಂಬ ಮಾಹಿತಿ ನನಗಿಲ್ಲ. ನಮ್ಮ ಅಥವಾ ದಳ ಪಕ್ಷದ ಯಾರಾದರೂ ಕಾರ್ಯಕರ್ತರು ಹೀಗೆ ಮಾಡಿದ್ದರೆ, ಆಯೋಜನೆ ಮಾಡಿದ್ರೆ ಅದು ತಪ್ಪಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ; ಮಾಜಿ ಕೃಷಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ..!
ಯಾಕೆಂದರೆ, ನಾನು 20 ವರ್ಷದ ರಾಜಕೀಯ ಜೀವನದಲ್ಲಿ ಮದ್ಯ ಹಂಚಿಕೆ ಮಾಡಿಲ್ಲ. ಚುನಾವಣೆಗೂ, ಕಾರ್ಯಕ್ರಮಕ್ಕೂ ಮದ್ಯ ಹಂಚಿಲ್ಲ. 20 ವರ್ಷದ ನನ್ನ ಇತಿಹಾಸದಿಂದಲೇ ನಿಮಗೆ ಅದು ತಿಳಿಯುತ್ತದೆ. ಈ ಒಂದು ಪ್ರಕರಣದಿಂದ ನನಗೂ ನೋವಾಗಿದೆ. ಯಾವುದೇ ಕಾರ್ಯಕ್ರಮ ಇರಲಿ, ಅಲ್ಲಿ ಮದ್ಯ ಕೊಡುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….