ಜಪಾನ್ ಮತ್ತು ದಕ್ಷಿಣ ಕೊರಿಯಾದ ಕಂಪನಿಗಳಿಂದ 1,000ಕ್ಕೂ ಹೆಚ್ಚು ಉದ್ಯೋಗಾವಕಾಶ ಸೃಷ್ಟಿ; ಎಂ.ಬಿ.ಪಾಟೀಲ

ಬೆಂಗಳೂರು, (ಜುಲೈ.10); ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ  ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ರೂ.6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ  1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ಹಂಚಿಕೊಂಡ ಸಚಿವ ಪಾಟೀಲ ಅವರು,  ‘ಜೂನ್ 24ರಿಂದ ಜುಲೈ 5ರವರೆಗಿನ ಉಭಯ ದೇಶಗಳ ಎರಡು ವಾರಗಳ ಭೇಟಿಯ ಸಮಯದಲ್ಲಿ, ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್‌ಎಂಇ) ಬಂಡವಾಳ ಹೂಡಿಕೆ ರೋಡ್‌ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತುʼ ಎಂದು ಹೇಳಿದರು.

ʼ35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗವು, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ – ʼಇನ್ವೆಸ್ಟ್ ಕರ್ನಾಟಕ 2025ʼರಲ್ಲಿ ಭಾಗವಹಿಸಲು  ಟೋಕಿಯೊ ಮತ್ತು ಸೋಲ್‌ನಲ್ಲಿ ನಡೆದ ರೋಡ್‌ ಷೋಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ  ಆಹ್ವಾನ ನೀಡಲಾಯಿತುʼ ಎಂದರು.

ʼಜಪಾನ್‌ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳು ಪ್ರಮುಖವಾಗಿವೆ.

ʼದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪ ಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್‌ ಗವರ್ನರ್ ಮತ್ತು ಸೋಲ್‌ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪ ಮೇಯರ್  ಸೇರಿದಂತೆ  ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಯಿತು.

ʼದಕ್ಷಿಣ ಕೊರಿಯಾದಲ್ಲಿ ನಡೆದ  ಸಭೆಗಳಲ್ಲಿ ಸ್ಯಾಮ್ಸಂಗ್‌ ಎಲೆಕ್ಟ್ರಾನಿಕ್ಸ್‌, ಎಲ್‌ಜಿ ಎನರ್ಜಿ ಸೊಲ್ಯೂಷನ್ಸ್, ಎಲ್‌ಎಕ್ಸ್‌ ಎಲೆಕ್ಟ್ರಾನಿಕ್ಸ್, ನಿಫ್ಕೊ ಕೊರಿಯಾ, ಒಸಿಐ ಹೋಲ್ಡಿಂಗ್ಸ್, ಕ್ರಾಫ್ಟನ್‌, ಎಚ್‌ವೈಎಸಿ, ಹುಂಡೈ ಮೋಟರ್ಸ್‌, ವೈಜಿ-1, ಹೊಯ್ಸಂಗ್‌ ಅಡ್ವಾನ್ಸಡ್‌ ಮಟೇರಿಯಲ್ಸ್‌ ಮುಂತಾದವು ಸೇರಿವೆʼ ಎಂದು ಸಚಿವ ಪಾಟೀಲ ವಿವರಿಸಿದರು.

ಹೂಡಿಕೆ ಬದ್ಧತೆಗಳು & ಒಪ್ಪಂದಗಳ ವಿವರ:

ಒಸಾಕಾ ಗ್ಯಾಸ್: ಜಪಾನಿನ ಪ್ರಮುಖ ಇಂಧನ ಕಂಪನಿಯಾಗಿರುವ ಒಸಾಕಾ ಗ್ಯಾಸ್, ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲಸೌಲಭ್ಯ ವಿಸ್ತರಿಸಲು ರೂ.5000 ಕೋಟಿ (600 ದಶಲಕ್ಷ ಡಾಲರ್‌) ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ತೋರಿದೆ.

ಡಿಎನ್‌ ಸೊಲ್ಯೂಷನ್ಸ್: ಕೊರಿಯಾದ ಮಷಿನ್ ಟೂಲ್ಸ್ ಕಂಪನಿಯಾಗಿರುವ ಡಿಎನ್‌ ಸೊಲ್ಯೂಷನ್ಸ್‌,  ಕೈಗಾರಿಕಾ ಯಂತ್ರೋಪಕರಣಗಳು ಮತ್ತು  ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು ರೂ.1000 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

ಅವೊಯಮಾ ಸೈಸಕುಶೊ: ವಾಹನ ಬಿಡಿಭಾಗಗಳನ್ನು  ಪೂರೈಸುವ  ಜಪಾನಿನ ಅವೊಯಮಾ ಸೈಸಕುಶೊ, ತುಮಕೂರು ಬಳಿಯ ಜಪಾನ್‌ ಕೈಗಾರಿಕಾ  ಟೌನ್‌ಶಿಪ್‌ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ರೂ.210 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

ಡೈಕಿ ಆ್ಯಕ್ಸಿಸ್‌, ಹೈವಿಷನ್‌ ಮತ್ತು  ಇಎಂಎನ್‌ಐ ಕಂಪನಿ ಲಿಮಿಟೆಡ್‌: ಬ್ಯಾಟರಿ ಸೆಲ್‌ಗಳ ಸಂಗ್ರಹ  ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು   ಜಂಟಿಯಾಗಿ ರೂ.210 ಮೊತ್ತದ ಬಂಡವಾಳ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿವೆ.

ಸುಮಿಟೊಮೊ ಹೆವಿ ಇಂಡಸ್ಟ್ರೀಸ್ (ಎಸ್‌ಎಚ್‌ಐ) ಬೆಂಗಳೂರಿನಲ್ಲಿ ತನ್ನ ಮುಖ್ಯ ಕಚೇರಿಯನ್ನು ತೆರೆಯಲು ಸಜ್ಜಾಗಿದ್ದು, 2024ರ ಅಂತ್ಯಕ್ಕೆ ಉದ್ಘಾಟನೆ ನೆರವೇರಿಸಲು ಉದ್ದೇಶಿಸಿದೆ.

ಈ ತಕ್ಷಣದ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ  ರೂ.25,000 ಕೋಟಿ  ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯದ ನಿಯೋಗವು ಗುರುತಿಸಿದೆ. ಈ ಹೂಡಿಕೆ ನಿರೀಕ್ಷೆಯು, ಕರ್ನಾಟಕವು ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವವನ್ನು ಸೂಚಿಸುತ್ತದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ  ಡಾ.ಎನ್.ಮಂಜುಳಾ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ, ಮೂಲಸೌಕರ್ಯ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಈ ಸಂದರ್ಭದಲ್ಲಿ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!