ರೈತರಿಗೆ ದೋಖಾ; ಫಸಲ್ ವಿಮೆಗೆ ರೈತರಿಂದ ನಿರುತ್ಸಾಹ| ತಿಂಗಳು ಕಳೆದರು.. ನೋಂದಣಿ ಮಾಡಿಸದ ಅನ್ನದಾತ, ಪ್ರಚಾರ ಮಾಡಲು ಅಧಿಕಾರಿಗಳಿಗೆ ಆತಂಕ

ಬೆಂ.ಗ್ರಾ.ಜಿಲ್ಲೆ, (ಜುಲೈ.10); ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ರೈತರನ್ನು ಆರ್ಥಿಕವಾಗಿ ಕೈಹಿಡಿಯಬೇಕಾದ ಬೆಳೆ ವಿಮೆ ಯೋಜನೆಗೆ ಇತ್ತೀಚಿನ ವರ್ಷಗಳಲ್ಲಿ ಕಂಪನಿಗಳ ಮೋಸದಿಂದ ಬೇತ್ತಿರುವ ಜಿಲ್ಲೆಯ ರೈತರಲ್ಲಿ ವಿಮೆ ಮಾಡಿಸಲು ನಿರುತ್ಸಾಹ ಕಂಡುಬರುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬಹುತೇಕ ಅನ್ನದಾತರು ಬೆಳೆವಿಮೆಯತ್ತ ಮುಖ ಮಾಡದೆ ಉಳಿದಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಜುಲೈ.9 ರ ವರದಿ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೇವಲ 586 ಮಂದಿ ರೈತರು ಮಾತ್ರ ವಿಮೆ ಮಾಡಿಸಿದ್ದು, ವಿಮೆ ಕಂಪನಿಗಳ ಮೋಸದಿಂದ ಬೇಸತ್ತಿರುವುದಕ್ಕೆ ಸಾಕ್ಷಿಯಾಗಿದೆ.

2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ್ದ ರೈತರಿಗೆ ಪರಿಹಾರ ವಿತರಣೆಯಲ್ಲಿ ವಿಮಾ ಸಂಸ್ಥೆ ಮೋಸ ಮಾಡಿದೆ ಎಂಬ ಆರೋಪ ರೈತರದ್ದು. ಮಳೆ ಇಲ್ಲದೆ ಬರ ಪೀಡಿತ ಜಿಲ್ಲೆಯೆಂದು ರಾಜ್ಯ ಸರ್ಕಾರದ ಘೋಷಣೆಯ ನಡುವೆಯೂ ವಿಮಾ ಸಂಸ್ಥೆ ರಾಗಿ ಬೆಳೆಗೆ ವಿಮೆ ಮಾಡಿಸಿದ ರೈತರಿಗೆ ಹಗಲು ದರೋಡೆ ಮಾಡಿದೆ ಎಂಬುದು ರೈತ ಸಂಘಟನೆಗಳ ಆಕ್ರೋಶ.

ವಿಮೆ ನೊಂದಣಿ ಆರಂಭವಾಗಿ ಒಂದು ತಿಂಗಳು ಕಳೆದಿದ್ದರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೇವಲ 586 ಮಂದಿ ರೈತರು ಮಾತ್ರ ನೊಂದಣಿ ಮಾಡಿಸಿರುವುದು ವಿಮೆಯಿಂದ ರೈತರು ವಿಮುಖವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಇನ್ನೂ ಈ ಕುರಿತು ಪ್ರಚಾರ ಮಾಡಬೇಕಾದ ಕೃಷಿ ಇಲಾಖೆ ಅಧಿಕಾರಿಗಳಿಗೂ ಆತಂಕ ಎದುರಾಗಿದ್ದು, ಕಳೆದ ವರ್ಷದ ಪರಿಹಾರ ಎಲ್ಲಿ ಎಂದು ರೈತರು ಪ್ರಶ್ನಿಸಿದರೆ, ಅಧಿಕಾರಿಗಳ ಬಳಿಯೂ ಸಮರ್ಪಕ ಉತ್ತರ ಇಲ್ಲವಾಗಿದ್ದು, ಈವರೆಗೆ ಬಹುತೇಕ ಕಡೆ ಪ್ರಚಾರ ಕಾರ್ಯಕ್ಕೆ ಮುಂದಾಗದೆ, ಕೇವಲ ಮಾಧ್ಯಮ ಪ್ರಕಟಣೆಗೆ ಸೀಮಿತವಾಗಿದ್ದಾರೆ ಎನ್ನಲಾಗುತ್ತಿದೆ‌.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಫಸಲ್ ವಿಮೆ ಯೋಜನೆ ರೈತರಿಗೆ ವರವಾಗಲೆಂದು ಕೇಂದ್ರ ಸರ್ಕಾರ ರೂಪಿಸಿದೆಯಾದರೂ… ಇದು ವಿಮಾ ಕಂಪನಿಗಳಿಗೆ ಲಾಭದಾಯಕ ಯೋಜನೆ ಎಂಬ ಅನುಮಾನ ಕಾಡುತ್ತಿದೆ.

ಆರಂಭಿಕ ವರ್ಷಗಳಲ್ಲಿ ವಿಮೆ ಪರಿಹಾರ ಸಮರ್ಪಕವಾಗಿ ನೀಡಿದ್ದು ಬಿಟ್ಟರೆ, ಬಹುತೇಕ  ಕಡೆಗಳಲ್ಲಿ ರೈತರಿಗೆ ಅನ್ಯಾಯವಾಗಿದೆ. ಆದಾಗ್ಯೂ ಕೆಲ ಜಿಲ್ಲೆಗಳಲ್ಲಿ ಉತ್ತಮ ಪರಿಹಾರ ನೀಡಲಾಗಿದೆ. ಇದಕ್ಕೆ ಅಲ್ಲಿನ ಜನಪ್ರತಿನಿದಿಗಳು, ಅಧಿಕಾರಿಗಳ ಕಾಳಜಿ ಕಾರಣ ಎನ್ನಬಹುದು.

ಕಳೆದ ವರ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬರ ಪೀಡಿತ ಜಿಲ್ಲೆಯೆಂದು ಘೋಷಿಸಿದ್ದರು, ವಿಮಾ ಸಂಸ್ಥೆ, ಕೃಷಿ, ಕಂದಾಯ, ಪಂಚಾಯಿತಿ ಅಧಿಕಾರಿಗಳು ಜಂಟಿಯಾಗಿ ಸರ್ವೆ ಕಾರ್ಯ ನಡೆಸದೆ, ವಿಮೆ ಕಂಪನಿಯವರು ಅವರಿಗೆ ಬೇಕಾದಂತೆ ಸರ್ವೆ ನಡೆಸಿ ರೈತರಿಗೆ ದೊರಕಬೇಕಾದ ಪರಿಹಾರ ದೊರಕದೆ ಯೋಜನೆಯಿಂದ ಹಿಂದೆ ಸರಿಯಲು ಕಾರಣ ಎಂಬ ಆಕ್ರೋಶ ರೈತರದ್ದಾಗಿದೆ.

ರೈತರ ಕಷ್ಟದಲ್ಲಿ ಸರಕಾರ ಬೆನ್ನಿಗೆ ನಿಲ್ಲಬೇಕು. ಆದರೆ ವಿಮೆ ಹಣ ಕಟ್ಟಿದ್ದರು, ಪರಿಹಾರ ದೊರಕದೆ ಇರುವುದು ವಿಪರ್ಯಾಸ. ಕೂಡಲೇ ಜಿಲ್ಲೆಯ ಜನಪ್ರತಿನಿದಿಗಳು, ಅಧಿಕಾರಿಗಳು ಗಮನಹರಿಸಬೇಕು, ಇಲ್ಲವಾದರೆ ರೈತರೊಂದಿಗೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ರಾಜಘಟ್ಟರವಿ ನೀಡಿದ್ದಾರೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!