Dap: ದೊಡ್ಡಬಳ್ಳಾಪುರದಲ್ಲಿ ರಸಗೊಬ್ಬರ ಸಿಗದೆ ರೈತರ ಪರದಾಟ.. ಕೃಷಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತಸಂಘದ ಆಕ್ರೋಶ

ದೊಡ್ಡಬಳ್ಳಾಪುರ, (ಜುಲೈ.16): ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ರಾಗಿ,ಮುಸುಕಿನಜೋಳ ಬಿತ್ತನೆಗೆ ರೈತರು ಮುಂದಾಗಿದ್ದಾರೆ. ಆದರೆ ಬಿತ್ತನೆಗೆ ಅಗತ್ಯ ಇರುವ ಡಿಎಪಿ ರಸಗೊಬ್ಬರ ದೊರೆಯದೆ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

‘ಅತಿ ಹೆಚ್ಚು ರಸಗೊಬ್ಬರ ಮಾರಾಟ ಮಾಡುವ ನಗರದ ಟಿಎಪಿಎಂಸಿಎಸ್ ಸೇರಿದಂತೆ ಯಾವುದೇ ರಸಗೊಬ್ಬರ ಮಾರಾಟಗಾರರ ಬಳಿಯು ಡಿಎಪಿ ರಸಗೊಬ್ಬರ ದಾಸ್ತಾನು ಇಲ್ಲದಾಗಿದೆ. ಸಾಮಾನ್ಯವಾಗಿ ರಾಗಿ ಬಿತ್ತನೆ ಸಂದರ್ಭದಲ್ಲಿ ಬಹುತೇಕ ಎಲ್ಲಾ ರೈತರು ಮೂಲ ಗೊಬ್ಬರವಾಗಿ ಡಿಎಪಿ ರಸಗೊಬ್ಬರವನ್ನೇ ಹೆಚ್ಚಾಗಿ ಬಳಸುತ್ತಾರೆ.

ಈ ವಾಸ್ತವ ತಿಳಿದು ಸಹ ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ರಸಗೊಬ್ಬರ ರೈತರಿಗೆ ದೊರೆಯುವಂತೆ ಮಾಡಬೇಕು. ಮಳೆ ಬೀಳುವ ಸಮಯದಲ್ಲಿ ಬಿತ್ತನೆ ಮಾಡದೇ ರಸಗೊಬ್ಬರ ದೊರೆತಾಗ ಬಿತ್ತನೆ ಮಾಡಲು ಸಾಧ್ಯವೇ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಮುಖಂಡ ಮುತ್ತೇಗೌಡ ಪ್ರಶ್ನೆ ಮಾಡಿದ್ದಾರೆ. 

ಇತರೆ ರಸಗೊಬ್ಬರಗಳಿಗೆ ಹೋಲಿಕೆ ಮಾಡಿದರೆ ಡಿಎಪಿ ರಸಗೊಬ್ಬರಕ್ಕೆ ಸರ್ಕಾರ ಹೆಚ್ಚಿನ ಸಬ್ಸಿಡಿ ನೀಡಬೇಕಿದೆ. ಹಾಗಾಗಿಯೇ ಡಿಎಪಿ ರಸಗೊಬ್ಬರ ಸರಬರಾಜು ಕಡಿಮೆ ಮಾಡಿದೆ. ರೈತರಿಗೆ ಅಗತ್ಯ ಗೊಬ್ಬರ ದೊರೆತರೆ ಮಾತ್ರ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಸರ್ಕಾರ ತಕ್ಷಣ ರೈತರಿಗೆ ಅಗತ್ಯ ಇರುವಷ್ಟು ಡಿಎಪಿ ರಸಗೊಬ್ಬರ ಸರಬರಾಜು ಮಾಡಬೇಕು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

‘ನಾವು ಮುಂಗಡವಾಗಿಯೇ ಹಣ ಪಾವತಿಸಲು ಸಿದ್ದ.ಆದರೆ ರಸಗೊಬ್ಬರವೇ ಸರಬರಾಜು ಮಾಡುತ್ತಿಲ್ಲ. ಬಿತ್ತನೆ ಸಮಯದಲ್ಲಿ ಹೆಚ್ಚಾಗಿ ರೈತರು ಖರೀದಿ ಮಾಡುವುದೇ ಡಿಎಪಿ. ಆದರೆ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡಿದರೆ ಮಾತ್ರ ಡಿಎಪಿ ನೀಡುತ್ತೇವೆ ಎಂದು ರಸಗೊಬ್ಬರ ಕಂಪನಿಗಳು ನಮಗೆ ಷರತ್ತು ವಿಧಿಸುತ್ತಾರೆ. ರೈತರಿಗೆ ನಾವು ಈ ಷರತ್ತು ವಿಧಿಸುತ್ತ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡುವಂತೆ ಹೇಳಲು ಹೋದರೆ ಪ್ರತಿಭಟನೆ ನಡೆಸುತ್ತಾರೆ. ಹಾಗಾಗಿಯೇ ಕಂಪನಿಗಳುವರು ಎಷ್ಟು ಸರಬರಾಜು ಮಾಡಿದರೆ ಅಷ್ಟನ್ನು ಮಾತ್ರ ಮಾರಾಟ ಮಾಡುತ್ತೇವೆ’ ಎನ್ನುತ್ತಾರೆ ರಸಗೊಬ್ಬರ ಮಾರಾಟ ಮಾಡುವ ಅಂಗಡಿ ಮಾಲೀಕರೊಬ್ಬರು. 

ತಾಲ್ಲೂಕಿನಲ್ಲಿ ಈ ವರ್ಷದ ಮುಂಗಾರಿನಲ್ಲಿ 19,220 ಹೆಕ್ಟೇರ್ ಪ್ರದೇಶದಲ್ಲಿ ರೈತರು ರಾಗಿ ಬಿತ್ತನೆ ಮಾಡುವ ಗುರಿಯನ್ನು ಅಂದಾಜಿಸಲಾಗಿದೆ. ಇಲ್ಲಿಯವರೆಗೆ 1,413 ಹೆಕ್ಟೇರ್ ಪ್ರದೇಶದಲ್ಲಿ, ಅಂದರೆ ಶೇ.7.35ರಷ್ಟು ಬಿತ್ತನೆಯಾಗಿದೆ.  ಹಾಗೆಯೇ ಮುಸುಕಿನಜೋಳ 5,690 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಇಲ್ಲಿಯವರೆಗೆ 667 ಹೆಕ್ಟೇರ್ ಪ್ರದೇಶದಲ್ಲಿ,ಅಂದರೆ ಶೇ.11.72 ರಷ್ಟು ಬಿತ್ತನೆಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]