ಬೆಂಗಳೂರು, (ಜುಲೈ.17); ಸಿನಿಮಾ ನೋಡಲು ಮಡದಿ ಹಾಗು ಮಗನೊಂದಿಗೆ ಬಂದ ರೈತನನ್ನು ಪಂಚೆತೊಟ್ಟಿದ್ದಾರೆ ಎಂಬ ಕಾರಣಕ್ಕೆ ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ ಇಂದು ರೈತನ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಅನ್ನದಾತನಿಗೆ ಅವಮಾನ ಮಾಡಿದ್ದಕ್ಕೆ ಇಂದು ಹಾರ ಹಾಕಿ ಸನ್ಮಾನ ಮಾಡಲಾಗಿದೆ.
ಮಂಗಳವಾರ ರಾತ್ರಿ ಪಂಚೆ ಉಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ GT ಮಾಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಪಂಚೆ ಧರಿಸಿ ಬಂದ ರೈತನಿಗೆ ಅವಮಾನ ಮಾಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದರು.
ಬಿಗ್ ಬಾಸ್ ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಮಾಲ್ ಮುಂದೆ ಪಂಚೆಯನ್ನುಟ್ಟು ಪ್ರತಿಭಟನೆ ನಡೆಸಿ ರೈತರಿಗೆ ಕ್ಷಮೆ ಕೇಳುವಂತೆ ಧರಣಿ ನಡೆಸಿದ್ದರು.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಟಿ ಮಾಲ್ ಉಸ್ತುವಾರಿ ಸುರೇಶ್, ಅಚಾತುರ್ಯದಿಂದ ಈ ಘಟನೆ ನಡೆದಿದೆ. ನಾವೆಲ್ಲಾ ರೈತರ ಮಕ್ಕಳು. ಸದ್ಯ ಸೆಕ್ಯೂರಿಟಿಯನ್ನು ಕೆಲಸದಿಂದ ತೆಗೆದು ಹಾಕಿದ್ದೇನೆ. ರಾಜ್ಯದ ರೈತ ಸಂಘಟನೆಗೆ ನ್ಯೂಸ್ ಫಸ್ಟ್ ಮೂಲಕ ಕ್ಷಮೆ ಕೇಳ್ತೇನೆ ಎಂದರು.
ಇನ್ನು, ಇಂದು ಮತ್ತೆ ಜಿಟಿ ಮಾಲ್ಗೆ ಎಂಟ್ರಿ ಕೊಟ್ಟಿದ್ದ ರೈತ ಫಕೀರಪ್ಪ ಅವರಿಗೆ ಜಿಟಿ ಮಾಲ್ ಸಿಬ್ಬಂದಿ ಹೂವಿನ ಹಾರ ಹಾಕಿ ಸನ್ಮಾನ ಮಾಡಿದೆ. ರೈತ ಫಕೀರಪ್ಪ ಬಳಿ ಜಿಟಿ ಮಾಲ್ನ ಸಿಬ್ಬಂದಿ ಕ್ಷಮೆಯಾಚಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….