ಕನ್ನಡಿಗರಿಗೆ ಉದ್ಯೋಗ ನೀಡಲು ಆಕ್ಷೇಪ..!: phonepe ಅನ್ಇನ್ಸ್ಟಾಲ್ ಮಾಡಿ ಕನ್ನಡಿಗರ ಶಕ್ತಿ ತೋರಿಸಲು ಕರೆ

ಬೆಂಗಳೂರು, (ಜುಲೈ.19); ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತಂತೆ ನಾಲಿಗೆ ಹರಿಬಿಟ್ಟಿರುವ ಫೋನ್‌ಪೇ ಸಿಇಒ ಮತ್ತು ಸಹ-ಸಂಸ್ಥಾಪಕ ಸಮೀರ್ ನಿಗಮ್ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ.

ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅನ್ಇನ್ಸ್ಟಾಲ್ ಫೋನ್ ಪೇ ಟ್ರೆಂಡ್ ಆಗಿದ್ದು ಕನ್ನಡಿಗರ ಶಕ್ತಿ ಪ್ರದರ್ಶನಕ್ಕೆ ಕರೆ ನೀಡಲಾಗಿದೆ.

ಖಾಸಗಿ ಕಂಪನಿಗಳಲ್ಲಿನ ಎಲ್ಲಾ ನಿರ್ವಹಣಾ ಹುದ್ದೆಗಳಲ್ಲಿ 50% ಮತ್ತು ಎಲ್ಲಾ ನಿರ್ವಹಣೇತರ ಹುದ್ದೆಗಳಲ್ಲಿ 70% ಸ್ಥಳೀಯ ನಿವಾಸಿಗಳಿಗೆ ಮೀಸಲಿಡಬೇಕು ಎಂಬ  ಮಸೂದೆಯನ್ನು ಈ ರೀತಿಯ ಖಾಸಗಿ ಕಂಪನಿಗಳ ಬೆದರಿಕೆಗೆ ಮಣಿದು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಆದರೆ ರಾಜ್ಯ ಸರ್ಕಾರ ಮಸೂದೆಯ ಅನುಷ್ಠಾನವನ್ನು ತಡೆಹಿಡಿಯುವ ನಿರ್ಧರಿಸುವುದಕ್ಕೂ ಮುನ್ನವೇ ಫೋನ್‌ಪೇ ನಿಗಮ್ ಅವರು ಈ ಮಸೂದೆಯನ್ನು ಟೀಕಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಆತ, “ನನಗೆ 46 ವರ್ಷ. 15 ಕ್ಕೂ ಹೆಚ್ಚು ವರ್ಷಗಳ ಕಾಲ ನಾನು ರಾಜ್ಯದಲ್ಲಿ ಎಂದಿಗೂ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶದಾದ್ಯಂತ ಕೆಲಸ ಮಾಡಿದ್ದಾರೆ. ಈಗ ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ನಿರ್ಮಿಸುತ್ತೇನೆ. ಭಾರತದಾದ್ಯಂತ 25,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ಈ ವಿಚಾರ ನಾಚಿಕೆ ಎನಿಸಿದೆ” ಎಂದಿದ್ದಾರೆ.

ನಿಗಮ್ ಅವರ ಪೋಸ್ಟ್ ವೈರಲ್ ಆಗಿದ್ದು, ಇದಕ್ಕೆ ನೆಟ್ಟಿಗರು ಹಲವಾರು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ನೀವು ಉದ್ಯೋಗಕ್ಕೆ ಅರ್ಹರಲ್ಲ ಎಂದು ಯಾರೂ ಹೇಳಿಲ್ಲ. ನೀವು ಮಾಡಬೇಕಾಗಿರುವುದು ಭಾಷೆಯನ್ನು ಕಲಿಯುವುದು ಮಾತ್ರ ಎಂದು ಒಬ್ಬರು ಬರೆದಿದ್ದಾರೆ. 

ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕು ಎಂಬುದು ಇಲ್ಲಿನ ಬೇಡಿಕೆ. ಅದನ್ನು ಪಡೆಯಿರಿ. ನಾನು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಬಹುದು, ನಾನು ಬಯಸುವ ಯಾವುದೇ ಭಾಷೆಯನ್ನು ಕಲಿಯಬಹುದು. ಭಾರತದ ಸಂವಿಧಾನ ನನಗೆ ಈ ಹಕ್ಕುಗಳನ್ನು ನೀಡಿದೆ. ಇದು ನನ್ನ ಆಯ್ಕೆಯಾಗಿದೆ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇದರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಅನ್ ಇನ್ಸಾಲ್ ಫೋನ್ ಪೇ ಹಾಗೂ ಬಾಯ್ಕಾಟ್ ಫೋನ್ ಪೇ ಟ್ರೆಂಡ್ ಆಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ತುರ್ತು ಪರಿಸ್ಥಿತಿಗೆ 50 ವರ್ಷ ತುಂಬಿದೆ: ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ದಾಳಿ

ಭಾರತದ ಆತ್ಮಶಕ್ತಿಯ ಮೇಲೆ ಪ್ರಹಾರ ನಡೆಸಿದ, ಪ್ರಜಾಪ್ರಭುತ್ವವನ್ನೇ ಹತ್ತಿಕ್ಕಿದ ಕೃತ್ಯಕ್ಕೆ ಅರ್ಧ ದಶಕ; ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy)

[ccc_my_favorite_select_button post_id="109926"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಕೂಲ್ಡ್ರಿಂಕ್ಸ್ ಕುಡಿದಿಕ್ಕೆ ಗಂಡನ ಕಿರುಕುಳ.. ನವವಿವಾಹಿತೆ ಆತ್ಮಹತ್ಯೆ..!

ಇಷ್ಟವಿಲ್ಲದ ಸಂಬಂಧಿಕರ ಜೊತೆ ತಂಪು ಪಾನೀಯ (ಕೂಲ್ಡ್ರಿಂಕ್) ಕುಡಿದಿದ್ದಕ್ಕಾಗಿ ಗಂಡ ನೀಡಿದ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ (Suicide)

[ccc_my_favorite_select_button post_id="109857"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]