ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ, (ಜು 20): ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು ಎಂದು ವಿವರಿಸಿದರು.

ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು. 

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು. 

ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ 24% ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ 24 ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು. 

ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಮಗವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು. 

ಸಿದ್ಧರಾಮೇಶ್ವರ ಅಧ್ಯಯನ‌ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು. 

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!