ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ: ಕೆ.ವಿ.ಪ್ರಭಾಕರ್

ವಿಜಯಪುರ, (ಜು 29): ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. 

ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. 

ವಿಜಯಪುರ ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ, ಹಲವು ಸಂಸ್ಕಾರಗಳನ್ನು ಏಕ ಕಾಲಕ್ಕೆ ಆಚರಿಸುವ ಜಿಲ್ಲೆ. ಈ ಬಹುತ್ವವೇ ನಮ್ಮ ನಾಡಿನ ಹೆಮ್ಮೆ. ಈ ಬಹುತ್ವವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು. 

ಈ ವೇದಿಕೆಯ ಮೇಲೆ, ಈ ವೇದಿಕೆಯ ಮುಂಭಾಗದಲ್ಲಿ ಹಲವು ಸಂಸ್ಕೃತಿ ಮತ್ತು ಹಲವು ಭಾಷಿಕರು ನೆರೆದಿದ್ದೇವೆ. ಇದು ಈ ಜಿಲ್ಲೆಯ ಬಹುತ್ವದ ಸಂಕೇತ ಕೂಡ ಹೌದು. 

ಇಲ್ಲಿ, ನನ್ನ ಬಲಗಡೆ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಭಾವ ಚಿತ್ರಗಳನ್ನು ಅಳವಡಿದ್ದಾರೆ. 

ಬುದ್ದನಿಂದ ಹಿಡಿದು ಅಂಬೇಡ್ಕರ್ ಅವರ ವರೆಗೂ ಏನೇನು ಹೇಳಿದ್ದಾರೋ, ಯಾವುದಕ್ಕಾಗಿ ಶ್ರಮಿಸಿದ್ದಾರೋ ಅದನ್ನು ಕಾಪಾಡಿಕೊಳ್ಳುವುದೇ ಪತ್ರಕರ್ತರ ಜವಾಬ್ದಾರಿ ಮತ್ತು ಪತ್ರಿಕೋದ್ಯಮದ ಹೊಣೆಗಾರಿಕೆ ಆಗಿದೆ. 

ನಮ್ಮ ಸಂವಿಧಾನದಲ್ಲಿ ಪತ್ರಕರ್ತರಿಗೆ ಪ್ರತ್ಯೇಕ ಹಕ್ಕು, ಅಧಿಕಾರಗಳನ್ನೇನೂ ನೀಡಿಲ್ಲ. ಸಂವಿಧಾನ ನೀಡಿರುವ ಅಭಿವ್ಯಕ್ತಿ‌ ಸ್ವಾತಂತ್ರ್ಯವೇ  ಪತ್ರಿಕಾ ಸ್ವಾತಂತ್ರ್ಯವೂ ಆಗಿದೆ. ಈ ಅಭಿವ್ಯಕ್ತ ಸ್ವಾತಂತ್ರ್ಯದ ದುರುಪಯೋಗ ಆದಾಗ ಎಂತೆಂಥಾ ಅನಾಹುತಗಳು ಆಗುತ್ತವೆ ಎನ್ನುವುದನ್ನು ಈಗಾಗಲೇ ಈ ಸಮಾಜ ಕಂಡಿದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. 

ಸಂವಿಧಾನದ ರಕ್ಷಣೆಯಿಂದ ಮಾತ್ರ ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ. ಜನರ ನಿರೀಕ್ಷೆ ಮತ್ತು ಸಮಸ್ಯೆಗಳನ್ನು ಅರಿಯಲು ಸರ್ಕಾರಕ್ಕಾಗಲಿ, ವಿರೋಧ ಪಕ್ಷಕ್ಕಾಗಲಿ ಇರುವ ಬಹುಮುಖ್ಯ ಸಾಧನ ಮಾಧ್ಯಮ. ಮೊದಲೆಲ್ಲಾ ಜನರ ನಿರೀಕ್ಷೆಗಳನ್ಮು ಮಾಧ್ಯಮಗಳು ಸರ್ಕಾರದ ಗಮನಕ್ಕೆ ತರುತ್ತಿದ್ದವು. ಈಗ ಪರಿಸ್ಥಿತಿ ಬದಲಾಗಿದೆ. ಕಾರ್ಪೋರೇಟ್ ಶ್ರೀಮಂತರ ವೈಯುಕ್ತಿಕ ಹಿತಾಸಕ್ತಿಗಳೇ ಜನರ ಸಮಸ್ಯೆಗಳು ಎನ್ನುವಂತೆ ಬಿಂಬಿಸಲಾಗುತ್ತಿದೆ. 

ಕಾರ್ಪೋರೇಟ್ ಸಂಸ್ಥೆಗಳು ಮಾಧ್ಯಮ ಲೋಕವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡ ಬಳಿಕ ಮನರಂಜನೆ ಮತ್ತು ಸುದ್ದಿಗಳ ಆಧ್ಯತೆ ಎರಡೂ ಬದಲಾಗಿವೆ ಎಂದರು. 

ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆ ಮತ್ತು ಸೆಲೆಬ್ರಿಟಿಗಳ ಜೀವನ ವಿಕೃತಿಗಳ ವಿಜ್ರಂಭಣೆಯೇ ಪತ್ರಿಕೋದ್ಯಮಕ್ಕೆ ಆಧ್ಯತೆ ಆಗುತ್ತಿರುವುದು  ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದರು. 

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಫ.ಗು.ಹಳಕಟ್ಟಿಯವರ ಕುರಿತು ವಿಶೇಷ ಉಪನ್ಯಾಸ ನೀಡಲಾಯಿತು. 

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!