ಸಿರವಾರ, (ಆಗಸ್ಟ್. 02): ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ರಾಯಚೂರಿನ ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸಂಭವಿಸಿದೆ.
ಫುಡ್ ಪಾಯಿಸನ್ ಸೇವನೆಯಿಂದ ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು 60 ವರ್ಷದ ಭೀಮಣ್ಣ, 57 ವರ್ಷದ ಈರಮ್ಮ. 21 ವರ್ಷದ ಮಲ್ಲೇಶ ಹಾಗೂ 19 ವರ್ಷದ ಪಾರ್ವತಿ ಎಂದು ಗುರುತಿಸಲಾಗಿದ್ದು ಮತ್ತೋರ್ವ ಮಗಳು23 ವರ್ಷದ ಮಲ್ಲಮ್ಮ ಸ್ಥಿತಿ ಗಂಭೀರವಾಗಿದೆ.
ಬುಧವಾರ ಕುಟುಂಬ ಮಾಂಸಾಹಾರ ಸೇವನೆ ಮಾಡಿ ಮಲಗಿದ್ದು, ಫುಡ್ ಪಾಯಿಸನ್ನಿಂದ ಸಾವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಾವಿನ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

