ಚನ್ನಪಟ್ಟಣ, (ಆಗಸ್ಟ್.04); ಮೂಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಮಲ-ದಳ ದೋಸ್ತಿ ಮೈಸೂರಿಗೆ ಪಾದಯಾತ್ರೆ ನಡೆಸುತ್ತ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.
ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ತಾರಕ್ಕೇರಿದ್ದ, ಒಬ್ಬರ ಮೇಲೋಬ್ಬರು ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ.
ಇಂದಿನ ಪಾದಯಾತ್ರೆಯಲ್ಲಿ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್, ಹಳ್ಳಿಗಳಲ್ಲಿ ಹುಟ್ಟುವ ಎಲ್ಲಾ ಕರುಗಳು ಬಸವ ಆಗಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಮಲ-ದಳ ಪಾದಯಾತ್ರೆಗೆ ಟಕ್ಕರ್ ಕೊಡಲು ಕಾಂಗ್ರೆಸ್ ಹಮ್ಮಿಕೊಂಡಿರುವ ಜನಾಂದೋಲನ ಕಾರ್ಯಕ್ರಮದ ಅಂಗವಾಗಿ ಚನ್ನಪಟ್ಟಣದಲ್ಲಿ ಅಬ್ಬರಿಸಿದ ಡಿಕೆ ಶಿವಕುಮಾರ್, ನಾನು ರೈತರ ಮಗ ಎಂಬ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡಿದರು.
ಕುಮಾರಸ್ವಾಮಿ ಅವರೇ, ನೀವು ಪಂಚೆ ಹುಟ್ಕೊಂಡ್ ಬಂದು ರೈತನ ಮಗ ಎಂದು ಹೇಳುತ್ತೀರಿ. ನಮ್ಮ ಹಳ್ಳಿ ಕಡೆ ಒಂದು ಮಾತು ಹೇಳುತ್ತಾರೆ. ಹಳ್ಳಿಗಳಲ್ಲಿ ಹುಟ್ಟುವ ಎಲ್ಲಾ ಕರುಗಳು ಬಸವ ಆಗಲ್ಲ. ಅದೇ ರೀತಿ ಎಲ್ಲರೂ ರೈತರು, ರೈತರ ಮಕ್ಕಳಾಗಲು ಸಾಧ್ಯವಿಲ್ಲ ಎಂದು ಛೇಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ರೈತರ ರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಳುವವನಿಗೆ ಭೂಮಿ ಕೊಟ್ಟಿದ್ದೇವೆ. ಬಗರ್ ಹುಕುಂ ಸಾಗುವಳಿ ಜಮೀನು ನೀಡಿದ್ದೇವೆ. ಅರಣ್ಯ ಕಾಯ್ದೆಯಲ್ಲಿ ರೈತರಿಗೆ ಜಮೀನು ನೀಡಿದ್ದೇವೆ. ನೀವು ಒಂದು ಸಭೆ ಮಾಡಿ ಒಬ್ಬ ರೈತನಿಗೆ ಬಗರ್ ಹುಕುಂ ಜಮೀನು ನೀಡಿಲ್ಲ.
ಹಿಟ್ ಆ್ಯಂಡ್ ರನ್, ಬ್ಲಾಕ್ ಮೇಲ್ ಕುಮಾರಸ್ವಾಮಿ ನೀವು, ಎಲ್ಲರನ್ನು ಹೆದರಿಸಿದಂತೆ ಬಿಜೆಪಿಯವರನ್ನು ಹೆಸರಿಸಲು ಹೋಗಿದ್ದಿಯಾ. ಪಾದಯಾತ್ರೆಗೆ ಹೋಗುವುದಿಲ್ಲ ಎಂದು ಹೇಳಿದ್ದವರು ಈಗ ಏಕೆ ಪಾದಯಾತ್ರೆಗೆ ಬಂದಿದ್ದೀರಿ? ನಿನ್ನ ಅಧಿಕಾರಕ್ಕಾಗಿ, ನೀವು ಇಷ್ಟು ದಿನ ಮಾಡಿದ ಪಾಪದ ವಿಮೋಚನೆಗಾಗಿ ನಡೆಯುತ್ತಿದ್ದೀರಿ.
ಕುಮಾರ ನೀನು ನನ್ನ ಆಸ್ತಿ ಬಗ್ಗೆ ಮಾತನಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿಮ್ಮ ಸಹೋದರ ಬಾಲಕೃಷ್ಣ ಗೌಡ ಅವರ ಕುಟುಂಬ ಅವರ ತಂದೆ, ಅವರ ಕುಟುಂಬ, ಮೈಸೂರು, ಶ್ರೀರಂಗಪಟ್ಟಣದ ಅವರ ಸಂಬಂಧಿಗಳು, ಬೇನಾಮಿಗಳು ಎಷ್ಟೆಷ್ಟು ಜಮೀನು ಹೊಂದಿದ್ದಾರೆ ಎಂದು ನೀವು ರಾಮನಗರದಲ್ಲಿ ಉತ್ತರ ನೀಡಬೇಕು.
ನಿಮ್ಮ ಕುಟುಂಬದ ಆಸ್ತಿ ಪಟ್ಟಿ ಬಿಡುಗಡೆ ಮಾಡಿಲ್ಲ.. ಮಾಡ್ತಿನಿ ಪಟ್ಟಿ ಬಿಡುಗಡೆ ಮಾಡ್ತೀನಿ, ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿಗೆ ಇದ್ದಾನೆ, ಯಾವ ಈರುಳ್ಳಿ, ಆಲುಗಡ್ಡೆಯಲ್ಲಿ ಅದು ಸಂಪಾದನೆ ಆಯ್ತು? ಎಂದು ರಾಮನಗರದಲ್ಲಿ ಲೆಕ್ಕ ಕೊಡಬೇಕು ಎಂದು ಮಾತಿನಲ್ಲೇ ಡಿಕೆ ಶಿವಕುಮಾರ್ ಗುಮ್ಮಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….