ದೊಡ್ಡಬಳ್ಳಾಪುರ, (ಆಗಸ್ಟ್.04); ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ದೋಸ್ತಿ ಪಕ್ಷದ ಮುಖಂಡರು ಸಹಸ್ರಾರು ಕಾರ್ಯಕರ್ತರ ಸಮ್ಮುಖದಲ್ಲಿ ಪಾದಯಾತ್ರೆ ಆರಂಭಿಸಿದ್ದು, ದೋಸ್ತಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ರಣಕಹಳೆ ಹೊರಡಿಸಿದ್ದಾರೆ.
ಪಾದಯಾತ್ರೆ ಇಂದು ಎರಡನೇ ದಿನ ಸಾಗಿದ್ದು, ಈ ಬೆನ್ನಲ್ಲೆ ಆಗಸ್ಟ್ 07 ರಂದು ಮಂಡ್ಯದಿಂದ ಆರಂಭವಾಗುವ ಪಾದಯಾತ್ರೆಯ ಜವಬ್ದಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ವಹಿಸಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಮುಡಾದಲ್ಲಿ ಆಗಿರೋ ಅಕ್ರಮವನ್ನ ಬಯಲಿಗೆಳೆಯಲು ಈ ಪಾದಯಾತ್ರೆ ನಡೆಯುತ್ತಿದೆ. ವಾಲ್ಮೀಕಿ ನಿಗಮದಲ್ಲಿ ಆಗಿರೋ ಕೋಟ್ಯಾಂತರ ರೂಪಾಯಿ ಟ್ರಾನ್ಸಾಕ್ಷನ್ ಆಗಿರೋದು ಇತಿಹಾಸದಲ್ಲೇ ಮೊದಲು. ಈ ನಿಟ್ಟಿನಲ್ಲಿ ಜೆಡಿಎಸ್-ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಕಂಡು ಕೈಪಡೆ ಕಂಗಾಲಾಗಿದೆ.
ಮುಂದುವರೆದು ಆಗಸ್ಟ್ 07 ನೇ ತಾರೀಖಿನಂದು ಮಂಡ್ಯದಿಂದ ಆರಂಭವಾಗುವ ಪಾದಯಾತ್ರೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ವಹಿಸಿಕೊಳ್ಳುತ್ತಿದ್ದೇವೆ.
ಈ ನಿಟ್ಟಿನಲ್ಲಿ ಮಂಗಳವಾರ ಬೆಳಗ್ಗೆ ದೇವನಹಳ್ಳಿಯ ಪ್ರವಾಸಿ ಮಂದಿರದಲ್ಲಿ ಎರಡು ಪಕ್ಷಗಳ ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಪಾದಯಾತ್ರೆಯ ಜವಬ್ದಾರಿ ಹಂಚಿಕೆ ಕುರಿತು ಮಹತ್ವದ ಸಭೆ ನಡೆಸಲಾಗುವುದು.
ಆಗಸ್ಟ್ 07 ರಂದು ಮಂಡ್ಯದಲ್ಲಿ ನಡೆಯುವ ಪಾದಯಾತ್ರೆಗೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯ ಎರಡು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿ.ಮುನೇಗೌಡ ಕರೆ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….