ದೊಡ್ಡಬಳ್ಳಾಪುರ, (ಆಗಸ್ಟ್ 07): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಕರ್ನಾಟಕ ಸಂಭ್ರಮ–50” “ಹೆಸರಾಯಿತು ಕರ್ನಾಟಕ-ಉಸಿರಾಯಿತು ಕನ್ನಡ” ಅಭಿಯಾನದ ಅಂಗವಾಗಿ ವಿಜಯನಗರ ಜಿಲ್ಲೆಯ ಹಂಪೆಯಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸತ್ತಿದ್ದು, ಇಂದು ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಿದೆ.
ದೇವನಹಳ್ಳಿ ತಾಲ್ಲೂಕಿನಿಂದ ಬಂದ ಕನ್ನಡ ರಥವನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ದೇವನಹಳ್ಳಿ ತಾಲ್ಲೂಕಿನ ಗಡಿಭಾಗದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ನಂತರ ಕನ್ನಡ ಜ್ಯೋತಿ ರಥದ ಬಾಶೆಟ್ಟಹಳ್ಳಿಯಿಂದ ಮೆರವಣಿಗೆ ಪ್ರಾರಂಭವಾಯಿತು. ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ವೃತ್ತ, ಡಿ ಕ್ರಾಸ್, ರಂಗಪ್ಪ ಸರ್ಕಲ್, ಅರಳುಮಲ್ಲಿಗೆ ಬಾಗಿಲು, ಎಂ.ಎಸ್.ವಿ ಶಾಲೆ, ಕೊಂಗಾಡಿಯಪ್ಪ ಪ್ರೌಢಶಾಲೆ, ತಾಲ್ಲೂಕು ಕಛೇರಿ ವೃತ್ತ, ಬಸವ ಭವನ ತನಕ ಸಂಚರಿಸುತ್ತಿದೆ
ನಂತರ ದೊಡ್ಡಬಳ್ಳಾಪುರ ನಗರದಿಂದ ದೊಡ್ಡಬೆಳವಂಗಲ ಮೂಲಕ ಮಧುರೆ ಹೋಬಳಿಯ ಕನಸವಾಡಿಗೆ ತಲುಪಲಿದೆ.
ಕನ್ನಡ ಜ್ಯೋತಿ ರಥದ ಮೆರವಣಿಗೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ಹಾಗೂ ಕನ್ನಡಪರ ಸಂಘಟನೆಗಳು, ಕನ್ನಡಾಭಿಮಾನಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು. ಮಹಿಳಾ ಸಂಘಗಳಿಂದ ಪೂರ್ಣ ಕುಂಭ ಸ್ವಾಗತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾತಂಡಗಳು ಸಾಂಸ್ಕೃತಿಕ ಮೆರಗು ನೀಡಿದ್ದವು.
ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.
ಆ.8 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಕನಸವಾಡಿಯಿಂದ ನೆಲಮಂಗಲ ತಾಲ್ಲೂಕಿಗೆ ಬೀಳ್ಕೊಡಲಾಗುತ್ತದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….