ಪಾದಯಾತ್ರೆ 5th Day: ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಬಡಿದಾಟ..!; ಕುಮಾರಸ್ವಾಮಿ ಮನವಿ

ಮಂಡ್ಯ, (ಆಗಸ್ಟ್.07); ಮೂಡ ಹಗರಣದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. 

ಐದನೇ ದಿನದ ಪಾದಯಾತ್ರೆ ಮಂಡ್ಯದಿಂದ ಆರಂಭವಾಗಿ, ಮೈಸೂರಿನತ್ತ ತೆರಳುತ್ತಿದ್ದು,  ಪಾದಯಾತ್ರೆಯಲ್ಲಿ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಭಾಗಿಯಾಗಿದ್ದರು. ಈ ವೇಳೆ ಪ್ರೀತಂ ಗೌಡ ಅವರನ್ನು ಬಿಜೆಪಿ ಕಾರ್ಯಕರ್ತರು ಹೆಗಲ ಮೇಲೆ ಕೂರಿಸಿಕೊಂಡು ಕುಣಿದರು. ಅಲ್ಲದೆ ಗೌಡರ ಗೌಡ ಪ್ರೀತಂ ಗೌಡ,  ಹಾಸನಕ್ಕು ಗೌಡ ಪ್ರೀತಂ ಗೌಡ, ತುಮಕೂರಿಗೂ ಗೌಡ ಪ್ರೀತಂ ಗೌಡ,, ಮೈಸೂರು ಗೌಡ ಪ್ರೀತಂ ಗೌಡ, ಮಂಡ್ಯ ಗೌಡ ಪ್ರೀತಂ ಗೌಡ ಎಂದು ಘೋಷಣೆ ಕೂಗಿದರು.

ಇದು ಜೆಡಿಎಸ್​ ಕಾರ್ಯಕರ್ತರನ್ನು ಕೆರಳಿಸಿತು. ಈ ರೀತಿ ಘೋಷಣೆ ಕೂಗುವುದು ತಪ್ಪಾಗುತ್ತದೆ ಎಂದರು. ಆದರೂ ಕೇಳದ ಬಿಜೆಪಿ ಗೌಡರ ಗೌಡ ಪ್ರೀತಂ ಗೌಡ ಎಂದು ಘೋಷಣೆ ಕೂಗಿ ಜೆಡಿಎಸ್ ಕಾರ್ಯಕರ್ತನ್ನು ಕೆರಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ವಾಗ್ವಾದ ತಾರಕಕ್ಕೆ ಏರಿ ರಸ್ತೆಯಲ್ಲಿ ಪರಸ್ಪರ ಕೈ ಕೈ ಮಿಲಾಯಿಸಿದರು. ಈ ವೇಳೆ ಜೆಡಿಎಸ್​ ಕಾರ್ಯಕರ್ತನಿಗೆ ಪ್ರೀತಂ ಗೌಡ ಬೆಂಬಲಿಗರು ಏಟು ನೀಡಿದರು. ಇದರಿಂದ ಕೆಲ ಹೊತ್ತು ತಳ್ಳಾಟ, ನೂಕಾಟವಾಯಿತು.

ಉದ್ವಿಗ್ನ ಪರಿಸ್ಥಿತಿಗೆ ತಿರುಗಿದರೂ ಪ್ರೀತಂ ಗೌಡ ಮಾತ್ರ ಬೆಂಬಲಿಗರನ್ನು ನಿಯಂತ್ರಿಸಲಿಲ್ಲ. ಮಧ್ಯೆ ಪ್ರವೇಶಿಸಿದ ಪೊಲೀಸರು ಪ್ರೀತಂ ಗೌಡ ಮತ್ತು ಅವರ ಬೆಂಬಲಿಗರನ್ನು ಸ್ಥಳದಿಂದ ಕಳಿಸಿದರು.

ಕುಮಾರಸ್ವಾಮಿ ಮನವಿ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ಒಂದಷ್ಟು ಕಿಡಿಗೇಡಿಗಳು ಬಿಜೆಪಿ ಜೆಡಿಎಸ್ ಸಂಬಂಧ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ನಾವು ಮತ್ತು ಬಿಜೆಪಿ ಒಟ್ಟಾಗಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ವಿಜಯೇಂದ್ರ ಮತ್ತು ನಿಖಿಲ್ ಒಂದೇ ತಾಯಿ ಮಕ್ಕಳಂತೆ ಹೋರಾಟ ಮಾಡುತ್ತಿದ್ದಾರೆ. ನಮ್ಮ ಸಂಬಂಧಕ್ಕೆ ಯಾರೂ ಹುಳಿ ಹಿಂಡಲು ಆಗಲ್ಲ. ಜನರು ನಮ್ಮ ಮೇಲಿಟ್ಟಿರುವ ಪ್ರೀತಿಗೆ ಬೆಲೆ ಕಟ್ಟಲು ಆಗಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಡಿಕೆಶಿ ಪ್ರದರ್ಶಿಸುವ ಹಳೆಯ ಚಾಳಿ ಬಿಡದ ಡಿಕೆಶಿ: ಮಂಡ್ಯದಲ್ಲಿ ತಮ್ಮ ಬಗ್ಗೆ ವಿಡಿಯೋಗಳನ್ನು ಪ್ರದರ್ಶಿಸಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅವರು ತಮ್ಮ ಹಳೆಯ ಚಾಳಿ ಬಿಡಲು ಸಾಧ್ಯವಿಲ್ಲ ಎಂದು ಕುಟುಕಿದರು.

ಮೈಸೂರು ಚಲೋ ಐದನೇ ದಿನದ ಪಾದಯಾತ್ರೆ ವೇಳೆ ಮಂಡ್ಯದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ನನಗೆ ಬಹಳಷ್ಟು ಜನರು ಕೊಚ್ಚೆಗಳ ಬಗ್ಗೆ ಮಾತಾಡಬಾರದು ಎಂದು ಸಲಹೆ ಕೊಟ್ಟಿದ್ದಾರೆ. ನಾನು ಮಾತನಾಡಬಾರದು ಎಂದುಕೊಂಡಿದ್ದೆ. ಮಂಡ್ಯದಲ್ಲಿ ಅವರು ಒಂದು ವಿಡಿಯೋ ಪ್ಲೇ ಮಾಡಿದ್ದಾರೆ. ಇದೇ ಕಾರಣಕ್ಕೆ ನಾನು ಆ ವ್ಯಕ್ತಿಯನ್ನು ಸಿಡಿ ಶಿವು ಎಂದು ಕರೆದಿದ್ದೆ. ಅವರ ಡಿವಿಡಿ ತೋರಿಸುವ ಚಾಳಿ ಎಲ್ಲಿ ಹೋಗುತ್ತದೆ ಹೇಳಿ ಹೇಳಿ. ಅವರು ಇನ್ನೂ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ನಾನು ಹಿಂದೆ ನೀಡಿದ್ದ ಹೇಳಿಕೆಗಳನ್ನು ಡಿವಿಡಿ ಶಿವು ಪ್ಲೇ ಮಾಡಿ ತೋರಿಸಿದ್ದಾರೆ. ನಿಮ್ಮ ಸಿದ್ದರಾಮಯ್ಯ ಈ ಹಿಂದೆ ಕಾಂಗ್ರೆಸ್‌ ಬಗ್ಗೆ ಏನೆಲ್ಲ ಮಾತಾಡಿಲ್ಲ. ನಮ್ಮ ಪಕ್ಷದಲ್ಲಿ ಇದ್ದಾಗ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಬಗ್ಗೆ ಏನೆಲ್ಲಾ ಮಾತನ್ನಾಡಿದ್ದಾರೆ ಎನ್ನುವುದನ್ನೂ ತೋರಿಸಬೇಕಿತ್ತು. ಅದನ್ನೆಲ್ಲ ಮರೆತಿದ್ದೀರಿ ಯಾಕೆ? ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು ಕೇಂದ್ರ ಸಚಿವರು.

ಸಂಸತ್ತಿನಲ್ಲಿ ಡಿಎಂಕೆ ಜತೆ ಸರಿ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ವಿರೋಧ: ಮೇಕೆದಾಟು ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಕಾಂಗ್ರೆಸ್ ವರಸೆ ಹೇಗಿದೆ ಎಂದರೆ ಕರ್ನಾಟಕದಲ್ಲಿ ಮೇಕೆದಾಟು ಯೋಜನೆಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತದೆ. ಅದೇ ದೆಹಲಿಗೆ ಬಂದಾಕ್ಷಣ ಡಿಎಂಕೆ ಜತೆ ಸೇರಿಕೊಂಡು ಈ ಯೋಜನೆಯ ವಿರುದ್ಧ ಗಲಾಟೆ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಡಿಸಿಎಂ ಒಂದು ವಿಷಯ ಪ್ರಸ್ತಾಪಿಸಿದ್ದಾರೆ. ಕೇಂದ್ರ ಸಚಿವರಾದರೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಹೇಳಿದ್ದರು ಎಂದು ನನ್ನ ಬಗ್ಗೆ ಹೇಳಿದ್ದರು. ನಾನು ಹೇಳಿದ್ದು, ನಿಮ್ಮ ಮಿತ್ರಪಕ್ಷ ತಮಿಳುನಾಡಿನ ಡಿಎಂಕೆ ನಾಯಕರನ್ನು ಒಪ್ಪಿಸಿ. ಅದಾದ ಮೇಲೆ ಒಂದೇ ತಿಂಗಳಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲಾಗುವುದು ಎಂದು ತಿಳಿಸಿದ್ದೆ. ಆದರೆ, ಕಾಂಗ್ರೆಸ್ ಇಬ್ಬಗೆಯ ನೀತಿ ಅನುಸರಿಸುತ್ತಾ ಕನ್ನಡಿಗರಿಗೆ ಮಂಕುಬೂದಿ ಎರಚುತ್ತಿದೆ ಎಂದು ಗುಡುಗಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಮೃದ್ಧಿ ಅನ್ಆಟಗಳು ತಾಯಿ ಚಾಮುಂಡೇಶ್ವರಿ ಕರುಣೆ ಕಾರಣ. ನಿಮ್ಮದೇನೂ ಇಲ್ಲಿ ಇಲ್ಲ. ನಿಮಗೆ ಜನರಿಂದ ದುಡ್ಡು ಗುಂಜೋದಕ್ಕೆ ಸಮಯ ಇಲ್ಲ. ಸರಣಿ ಹಗರಣಗಳ ಮೂಲಕ ಲೂಟಿ ಹೊಡೆಯುತ್ತಿದ್ದೀರಿ ಎಂದು ಕೇಂದ್ರ ಸಚಿವರು ದೂರಿದರು.

ಕೆಆರ್ ಎಸ್ ಅಣೆಕಟ್ಟೆ ತುಂಬಿ ತಮಿಳುನಾಡಿಗೆ ನಿರರ್ಗಳವಾಗಿ ನೀರು ಹರಿದು ಹೋಯಿತು. ಆದರೆ, ಮಂಡ್ಯ ಜಿಲ್ಲೆಯ ಮಳವಳ್ಳಿ, ಕೊಪ್ಪ ಸೇರಿದಂತೆ ಕೊನೆಯ ಭಾಗಕ್ಕೆ ನೀರು ಹೋಗಿಲ್ಲ. ನಿಮಗೆ ನಾಚಿಕೆ ಆಗಬೇಕು ಎಂದು ಅವರು ಟೀಕಾಪ್ರಹಾರ ನಡೆಸಿದರು.

ರಾಜ್ಯಸಭೆಯಲ್ಲಿ ದೇವೇಗೌಡರು ಕಾವೇರಿ ಬಗ್ಗೆ ಚರ್ಚೆ ಮಾಡುತ್ತಿದ್ದರೆ  ನಿಮ್ಮ ಮಿತ್ರಪಕ್ಷ ಡಿಎಂಕೆ ಸದಸ್ಯರು ಗದ್ದಲ ಎಬ್ಬಿಸುತ್ತಾರೆ. ಆ ಸಮಯದಲ್ಲಿ ರಾಜ್ಯದವರೇ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಕಾಂಗ್ರೆಸ್ ಸದಸ್ಯರು ಮೌನ ವಹಿಸುತ್ತಾರೆ. ಅವರು ಯಾಕೆ ದೇವೇಗೌಡರಿಗೆ ದನಿಗೂಡಿಸಲ್ಲ? ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ ಎಂದು ಕೇಳುವ ನೀವು ಡಿಎಂಕೆ ಜತೆ ಕುಮ್ಮಕ್ಕಾಗಿ ರಾಜ್ಯಕ್ಕೆ ದ್ರೋಹ ಮಾಡುತ್ತಿದ್ದಿರಿ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಜನ ಶಾಪ ಹಾಕುತ್ತಿದ್ದಾರೆ: ನಮ್ಮ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ನಡವಳಿಕೆಗಳು ಒಂದು ಒಂದಾಗಿಯೇ ಅನಾವರಣ ಆಗುತ್ತಿವೆ. ಸ್ವಚ್ಛ ಆಡಳಿತ ಕೊಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದರು. ಅಧಿಕಾರಕ್ಕೆ ಬಂದ ದಿನದಿಂದ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದರು ಎಂದು ಅವರು ಆರೋಪ ಮಾಡಿದರು.

ಕಾಂಗ್ರೆಸ್ ಸರ್ಕಾರ ಎಷ್ಟರ ಮಟ್ಟಿಗೆ ಹಗರಣಗಳಲ್ಲಿ ಮುಳುಗಿದೆ ಎಂದರೆ, ಜನ ಇವತ್ತು ಛೀ.. ಥೂ.. ಎಂದು ಹೃದಯದಿಂದ ಶಾಪ ಹಾಕುತ್ತಿದ್ದಾರೆ. ಸಿಎಂ ಅವರೇ ಹೇಳಿದ್ದಾರೆ 87 ಕೋಟಿ ಅಕ್ರಮ ನಡೆಸಿದೆ ಎಂದು. ಮುಡಾದಲ್ಲಿ ನಿವೇಶನ ತೆಗೆದುಕೊಳ್ಳುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಸಂವಿಧಾನದ ಅಡಿ ಕೆಲಸ ಮಾಡಬೇಕು ಅವರು. ಆದರೆ ಸಿದ್ದರಾಮಯ್ಯ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂದರೆ, ಅವರ ಕುಟುಂಬವೇ ಅಕ್ರಮದಲ್ಲಿ ತೊಡಗಿದೆ. 

ಸರ್ಕಾರಿ ಜಮೀನನ್ನು ಕಾನೂನುಬಾಹಿರವಾಗಿ ಪಡೆದಿರುವುದರ ವಿರುದ್ಧ ನಮ್ಮ ಹೋರಾಟ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.  

ನಾನು ಹಿಂದುಳಿದ ವರ್ಗದವನು, ಅದಕ್ಕೆ ಇವರೆಲ್ಲ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿರುವುದಕ್ಕೆ ಕಿಡಿಕಾರಿದ ಅವರು; ಹಿಂದುಳಿದ ವರ್ಗದವರು ಎಂದು ನಾವು  ನಿಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಇನ್ನೂ ಒಮ್ಮೆ ಸಿಎಂ ಆಗಿ, ನಮ್ಮ ಅಭ್ಯಂತರವಿಲ್ಲ. ಹಿಂದುಳಿದ ವರ್ಗಕ್ಕೆ ಮಾತ್ರ ನೀವು ಸಿಎಂ ಆಗಿಲ್ಲ.

ರಾಜ್ಯದ ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಅವರು ಕಟುವಾಗಿ ಟೀಕಿಸಿದರು. 

ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವವರ ರಕ್ಷಣೆ ಮಾಡುತ್ತಿದ್ದೀರಿ. ಅದನ್ನು ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ ಅಲ್ಲವೇ? SC/ST ಹಣ ಲೂಟಿ ಮಾಡಿ ಅಂಬೇಡ್ಕರ್ ಹೆಸರಿಗೆ ಕಳಂಕ ತಂದಿದ್ದು ಕಾಂಗ್ರೆಸ್‌ ಸರ್ಕಾರ ಅಲ್ಲವೇ? ಈ ಬಗ್ಗೆ ಜನರಿಗೆ ತಿಳಿಸಲು ನಮ್ಮ ಹೋರಾಟ.

ಜನಾಂದೋಲನದ ಮೂಲಕ ನಿಮ್ಮ ತಪ್ಪು ಮುಚ್ಚಿಕೊಳ್ಳುವ ಯತ್ನ ಮಾಡುತ್ತಿದ್ದೀರಿ. ಸುಖಾ ಸುಮ್ಮನೇ ವೈಯಕ್ತಿಕ ಟೀಕೆ, ಆರೋಪ ಮಾಡುತ್ತಿದ್ದೀರಿ ಎಂದು ಕೇಂದ್ರ ಸಚಿವರು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಎರಡೂ ಪಕ್ಷಗಳ ಅನೇಕ ನಾಯಕರು, ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]