ವಿನೇಶ್‌ ಫೋಗಾಟ್‌‌ಗೆ ಪದಕ ಫಿಕ್ಸ್: ನ್ಯಾಯಕ್ಕಾಗಿ ಕುಸ್ತಿ ಪಟುಗಳು ಸುರಿಸಿದ ಕಣ್ಣೀರನ್ನು ಅವಹೇಳನ ಮಾಡಿದವರಿಗೆ ಛೀಮಾರಿ| ವಿಡಿಯೋ ನೋಡಿ

ಬೆಂಗಳೂರು, (ಆಗಸ್ಟ್.07): ಪ್ಯಾರಿಸ್ ಒಲಂಪಿಕ್ಸ್‌ನ ಮಂಗಳವಾರ ನಡೆದ ರೋಚಕ ಕುಸ್ತಿ ಪಂದ್ಯದಲ್ಲಿ ಭಾರತದ ಹೆಮ್ಮೆಯ ಕುಸ್ತಿಪಟು ವಿನೇಶ್ ಫೋಗಟ್‌ ಇತಿಹಾಸ ಸೃಷ್ಟಿಸಿದ್ದಾರೆ. 

ವಿನೇಶ್ ಮಹಿಳಾ ಕುಸ್ತಿಯಲ್ಲಿ ಒಲಿಂಪಿಕ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

50 ಕೆಜಿ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ವಿನೇಶ್ ಫೋಗಾಟ್ ಅವರು ಕ್ಯೂಬಾ ದೇಶದ ಯುಸ್ನಲೀಸ್ ಗುಜ್ಜನ್ ಲೋಪೆಜ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ. ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಅವರು ಪದಕ ಖಚಿತಪಡಿಸಿ ಕೊಂಡಿದ್ದಾರೆ. ಮಂಗಳವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಯುಸ್ಸಲೀಸ್ ವಿರುದ್ಧ 5-0 ಗೆದ್ದರು.

ಈ ಹಿಂದೆ ಅವರು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೂರು ಬಾರಿಯ ಕಾಮನ್‌ವೆಲ್ತ್ ಚಿನ್ನದ ಪದಕ ವಿಜೇತೆ ಉಕ್ರೇನ್ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್ ಪ್ರವೇಶಿಸಿದರು. 

ಇದಕ್ಕೂ ಮುನ್ನ ನಡೆದಿದ್ದ ಪ್ರಿಕ್ವಾರ್ಟರ್ ಫೈನಲ್ ಪಂದ್ಯ ದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು. ಈ ಗೆಲುವು ಕಂಡಾಗಲೇ ವಿನೇಶ್ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರ್ಧರಿಸಲಾಗಿತ್ತು.

ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ. ಒಲಿಂಪಿಕ್ಸ್ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್‌ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರಾಂಡ್ ಪ್ರಿಕ್ಸ್ ಕುಸ್ತಿ ಟೂರ್ನಿಯಲ್ಲಿ ವಿನೇಶ್ ಚಿನ್ನದ ಪದಕ ಗೆದ್ದು ಬೀಗಿದ್ದರು. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ಅವರು 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು.

ಕಣ್ಣೀರು: ಕೆಲ ತಿಂಗಳುಗಳ ಹಿಂದಷ್ಟೇ ಭಾರತೀಯ ಕುಸ್ತಿ ಸಂಸ್ಥೆ ವಿರುದ್ಧದ ದನಿಯೆತ್ತಿ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕುಸ್ತಿಪಟುಗಳನ್ನು ಪೊಲೀಸರು ದರದರನೆ ಎಳೆದೊಯ್ದಿದ್ದರು.

ಕುಸ್ತಿ ಸಂಸ್ಥೆಯಲ್ಲಿ ಮಹಿಳಾ ರೆಸ್ಲರ್‌ಗಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯದ ವಿರುದ್ಧ ಗುಡುಗಿದ್ದ ಭಾರತದ ಚಾಂಪಿಯನ್‌ ಕುಸ್ತಿಪಟುಗಳು ಧರಣಿಗೆ ಕುಳಿತಿದ್ದರು. ಆದರೆ, ಆಗ ಅವರ ಬೆಂಬಲಕ್ಕೆ ಯಾವ ಸರ್ಕಾರವೂ ಬರಲಿಲ್ಲ. 

ಕ್ರೀಡೆಯಲ್ಲಿ ಪದಕಗಳನ್ನು ಗೆದ್ದಾಗ ಕ್ರೀಡಾಪಟುಗಳೊಂದಿಗೆ ಸಂದರ್ಶನ ನಡೆಸಿದ್ದ ಪ್ರಧಾನಿ ಮೋದಿ ಕೂಡ ಬೀದಿಯಲ್ಲಿ ಈ ಹೆಣ್ಣುಮಕ್ಕಳನ್ನು ಪೊಲೀಸರು ಎಳೆದೊಯ್ಯುತ್ತಿದ್ದರು, ಕನಿಷ್ಠ ಬಾಯಿ ಬಿಡಲಿಲ್ಲ.

ಕುಸ್ತಿ ಸಂಸ್ಥೆ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬೃಜ್‌ ಭೂಷಣ್‌ ಶರಣ್‌ ಸಿಂಗ್‌ ತಮ್ಮ ಅಧಿಕಾರ ಬಳಸಿ ಕುಸ್ತಿಪಟುಗಳ ಧರಣಿಯನ್ನು ಬಲವಂತವಾಗಿ ಅಂತ್ಯಗೊಳಿಸಿದ್ದರು. ನ್ಯಾಯ ಸಿಗದೇ ಇದ್ದ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆದ್ದ ಪದಕಗಳನ್ನೇ ಕುಸ್ತಿಪಟುಗಳು ನದಿಗೆ ಬಿಸಾಡಿದ್ದ ಘಟನೆ ನಡೆದಿತ್ತು.

ಬಿಜೆಪಿ ಬೆಂಬಲಿಗರಿಂದ ಟೀಕೆ, ಅವಹೇಳನಕ್ಕೆ ಒಳಗಾಗಿದ್ದ ಭಾರತದ ಹೆಮ್ಮೆಯ ಕುಸ್ತಿಪಟು ವಿನೇಶ್ ಫೊಗಟ್ ಅವರು ಒಲಂಪಿಕ್ಸ್ ನಲ್ಲಿ ಭರವಸೆ ಮೂಡಿಸಿದ್ದು, ನ್ಯಾಯಕ್ಕಾಗಿ ಕಣ್ಣೀರು ಸುರಿಸಿದ ಕ್ರೀಡಾಪಟುಗಳನ್ನು ಅವಹೇಳನ ಮಾಡಿದವರಿಗೆ ಈ ಗೆಲುವು ಛೀಮಾರಿ ಹಾಕಿದೆ ಎಂದು ನೆಟ್ಟಿಗರು ಪೋಟೋ, ವಿಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇಂದು ಎಲ್ಲಾ ಭಾರತೀಯರ ಕಣ್ಣಲ್ಲಿ ನೀರು ತುಂಬಿದೆ: ಈ ದೇಶದ ಹೆಣ್ಣುಮಕ್ಕಳು, ದೇಶಕ್ಕೆ ಸದಾ ಕೀರ್ತಿ ತಂದವರು. ಈ ಹೆಣ್ಣು ಮಕ್ಕಳ ಹಾದಿಯಲ್ಲಿ ಸದಾ ಮುಳ್ಳುಗಳನ್ನು ಇಟ್ಟಿರುವ ಜನರು ಈ ಹೆಣ್ಣು ಮಕ್ಕಳಿಂದ ಕನಿಷ್ಠ ಪಾಠ ಕಲಿಯುತ್ತಾರೆ ಮತ್ತು ಭವಿಷ್ಯದಲ್ಲಿ ಈ ಹೆಣ್ಣುಮಕ್ಕಳ ಹಾದಿಯಲ್ಲಿ ಮುಳ್ಳುಗಳನ್ನು ಬಿತ್ತುವುದನ್ನು ನಿಲ್ಲಿಸುತ್ತಾರೆ ಎಂದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ ಅಭಿಪ್ರಾಯ ಪಟ್ಟಿದ್ದಾರೆ.

ಕುಸ್ತಿ ಸಂಸ್ಥೆಯಲ್ಲಿನ ಈ ದೌರ್ಜನ್ಯದ ವಿರುದ್ಧ ಹೋರಾಟ ನಡೆಸಲು ದೇಶದ ಹೆಮ್ಮೆಯ ಕುಸ್ತಿಪಟು ವಿನೇಶ್‌ ಫೋಗಾಟ್‌ ವಿಭಿನ್ನ ಮಾರ್ಗ ಅನುಸರಿಸಿದ್ದಾರೆ. 

ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿನ ಮಹಿಳೆಯರ 50 ಕೆ.ಜಿ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಫೈನಲ್‌ ತಲುಪುವ ಮೂಲಕ ಐತಿಹಾಸಿಕ ಕನಿಷ್ಠ ಬೆಳ್ಳಿ ಪದಕವನ್ನು ವಿನೇಶ್‌ ಫೋಗಾಟ್‌ ಖಾತ್ರಿ ಪಡಿಸಿದ್ದು, ದೇಶದಲ್ಲಿ ಮಹಿಳಾ ಕುಸ್ತಿಪಟುಗಳ ಭವಿಷ್ಯ ಸಲುವಾಗಿ ತಾವು ಪದಕ ಗೆಲ್ಲಲು ಹೊರಟಿರುವುದಾಗಿ ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ ಬಜರಂಗ್ ಪೂನಿಯಾ ಹೇಳಿದ್ದಾರೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]