ಚನ್ನಪಟ್ಟಣ, (ಆಗಸ್ಟ್.07): ಜಾನುವಾರುಗಳಿಗೆ ಹುಲ್ಲು ಕುಯ್ಯುವ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ತಾಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿನಡೆದಿದೆ.
ಮೃತ ದುರ್ದೈವಿಯನ್ನು 29 ವರ್ಷದ ರಂಜಿತ್ ಕುಮಾರ್(29) ಎಂದು ಗುರುತಿಸಲಾಗಿದೆ.
ಈತನಿಗೂ ಈತನ ಚಿಕ್ಕಪ್ಪ ನಾಗರಾಜು, ಮಂಗಳಮ್ಮ ಹಾಗೂ ಅವರ ಮಗ ಸುನೀಲ್ ಎಂಬುವವರಿಗೆ ಜಮೀನಿನಲ್ಲಿ ಹುಲ್ಲು ಕುಯ್ಯುವ ವಿಚಾರಕ್ಕೆ ಜಗಳ ನಡೆದಿದೆ.
ಸೋಮವಾರ ಸಂಜೆ ಇದೇ ವಿಚಾರಕ್ಕೆ ಇವರು ಆತನನ್ನು ಮಚ್ಚಿನಿಂದ ತಲೆಗೆ ಹೊಡೆದ ಕೊಲೆ ಮಾಡಿದ್ದಾರೆ. ಜಮೀನಿನಲ್ಲಿ ಕೊಲೆ ಮಾಡಿ ಶವವನ್ನು ರಸ್ತೆ ಬದಿಗೆ ಎಳೆದು ತಂದ ಹಾಕಿದ್ದು, ತಡ ರಾತ್ರಿ ಪೊಲೀಸರ ಬಳಿ ಹೋಗಿ ಶರಣಾಗಿ ಕೊಲೆ ಮಾಡಿರುವ ವಿಚಾರ ಒಪ್ಪಿ ಕೊಂಡಿದ್ದಾರೆ.
ಆರೋಪಿಗಳು ಪೊಲೀಸರ ವಶದಲ್ಲಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು ಕೊಲೆ ನಡೆದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….