ಕುವೆಂಪು ಆಶಯದಂತೆ ದೊಡ್ಡಬಳ್ಳಾಪುರದಲ್ಲೊಂದು ಮಂತ್ರ ಮಾಂಗಲ್ಯ ವಿವಾಹ..!

ದೊಡ್ಡಬಳ್ಳಾಪುರ, (ಆಗಸ್ಟ್.11): ಕುವೆಂಪು ಅವರ ಆಶಯದಂತೆ ವಧು-ವರನಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಸದಸ್ಯ ಟಿ.ಎಚ್.ಲವಕುಮಾರ್ ಅವರು ಮಂತ್ರ ಮಾಂಗಲ್ಯ ಬೋಧನೆ ಮಾಡುವ ಮೂಲಕ ನಗರದ ತ.ನ.ಪ್ರಭುದೇವ್ ಅವರ ತೋಟದಲ್ಲಿಂದು ಟಿ.ಎಂ.ಬೃಂದ ಹಾಗೂ ಎಂ.ಫೃಥ್ವಿಕ್ ಘೋರ್ಪಡೆ ಅವರ ವಿವಾಹ ನಡೆಯಿತು.

ಈ ಸಂದರ್ಭದಲ್ಲಿ ವಧು-ವರರನ್ನು ಆರ್ಶೀವದಿಸಿ ಮಾತನಾಡಿದ ಲೇಖಕ ಮಂಜುನಾಥ ಎಂ.ಅದ್ದೆ, ಇತ್ತೀಚಿನ ದಿನಗಳಲ್ಲಿ ವಿವಾಹ ಎನ್ನುವುದು ಎರಡು ಮನಸ್ಸುಗಳ ಒಂದುಗೂಡುವಿಕೆಗಿಂತಲು ತಮ್ಮಲ್ಲಿನ ಸಂಪತ್ತಿನ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಸಾವಿರಾರು ಕೋಟಿ ಖರ್ಚು ಮಾಡುವ ವಿವಾಹಗಳನ್ನು ನಾವಿಂದು ನೋಡುತ್ತಿದ್ದೇವೆ. ಆದರೆ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹದಲ್ಲಿ ಎರಡು ಯುವ ಮನಸ್ಸುಗಳ ಹಾಗೂ ಎರಡು ಕುಟುಂಬಗಳ ಗಟ್ಟಿಯಾದ ಬಾಂಧವ್ಯವನ್ನು ಕಾಣಬುಹುದಾಗಿದೆ ಎಂದರು.  

ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರೈತ ಸಂಘದ ಚಳುವಳಿಯಲ್ಲಿ ಕುವೆಂಪು ಅವರ ಮಂತ್ರಮಾಂಗಲ್ಯದ ವಿವಾಹಗಳು ನಡೆಯಬೇಕು ಎನ್ನುವುದು ಒಂದಾಗಿದೆ. ಇದರಿಂದ ರೈತರು ಸಾಲಕ್ಕೆ ಸಿಲುಕುವುದು ತಪ್ಪಲಿದೆ. ಇದೇ ಮಾರ್ಗದಲ್ಲಿ ವಿವಾಹವಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರು ರೈತ ಸಂಘದ ಹೋರಾಟಗಾರರಿಗೆ ಮಾದರಿಯಾಗಿದ್ದಾರೆ ಎಂದರು. 

ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ಸರಳ ಭಾಷೆಯಲ್ಲಿ, ಬದುಕಿನ ಮೌಲ್ಯಗಳನ್ನು ತಿಳಿಸುವ ಕುವೆಂಪು ಅವರ ಮಂತ್ರ ಮಾಂಗಲ್ಯ ವಿವಾಹಗಳು ಸದಾ ಕಾಲಕ್ಕೂ ಆದರ್ಶವಾಗಿದೆ. ರಾಜ್ಯದಲ್ಲಿ ಸಾವಿರಾರು ವಿವಾಹಗಳು ಇದೇ ಆಶಯದಲ್ಲಿ ನಡೆಯುವ ಮೂಲಕ ಸಮೃದ್ದ ಬದುಕನ್ನು ನಡೆಸಿರುವವರು ನಮ್ಮೊಂದಿಗೆ ಇದ್ದಾರೆ ಎಂದರು.

ಬಿಬಿಎಂಪಿ ಯಲಹಂಕ ವಲಯ ಆಯುಕ್ತರಾದ ಸಿ.ಎಸ್.ಕರೀಗೌಡ ಅವರು ಚುಟುಕು ಕವಿ ಎಚ್.ದುಂಡಿರಾಜ್ ಅವರ ಕವನ ‘ರಸ್ತೆಯಲ್ಲಿ ನೋಡಿ ನಕ್ಕಳು ಅವಳು, ಈಗ ನಮ್ಮಿಬ್ಬರಿಗೆ ಇಬ್ಬರು ಮಕ್ಕಳು’ ವಾಚನ ಮಾಡಿ ಇಷ್ಟೇ ಸರಳವಾಗಿರಬೇಕು ವಿವಾಹ ಎನ್ನುವುದೇ ಮಂತ್ರ ಮಾಂಗಲ್ಯದ ಆಶಯವು ಆಗಿದೆ ಎಂದರು. 

ವಿವಾಹ ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಪತ್ರಕರ್ತ ನಾಗಸಂದ್ರ ನಟರಾಜ್ ನೆರವೇರಿಸಿದರು.

ಈ ಸರಳ ವಿವಾಹದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯ ಪುಸ್ತಕವನ್ನು ಉಡುಗರೆಯಾಗಿ ನೀಡಲಾಯಿತು. ರಾಜ್ಯ ರೈತ ಸಂಘದ ಮುಖಂಡರಾದ ಕೆ.ಚುಲೋಚನಮ್ಮ ವೆಂಕಟರೆಡ್ಡಿ,ಕೆ.ಉಮಾ, ಮುತ್ತೇಗೌಡ, ವಿ.ಆರ್.ಗೀತಾವತಿ, ಮುನೇಶ್ವರರಾವ್, ಎಂ.ಪ್ರಜ್ವಲ್ ಹಾಗೂ ರೈತ ಸಂಘದ ಮುಖಂಡರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!